ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿ.!

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೆಂಗಳೂರು.07.ಮಾರ್ಚ.25:- ಕರ್ನಾಟಕ ರಾಜ್ಯದ್ ಮುಖ್ಯಮಂತ್ರಿಯಾದ ಮಾನ್ಯ ಸಿದ್ಧರಾಮಯ್ಯ ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ಅನ್ನು ಮಂಡಿಸುತ್ತಿದ್ದು, ಶಿಕ್ಷಕ ಹುದ್ದೆ ತುಂಬಲಾಗುವದು ಅಂದು ಮಾಹಿತಿ ನೀಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಪ್ರೌಢಶಾಲೆ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಲಾಗುವುದು, ಬಿಸಿಯೂಟ ಕಾರ್ಯಕರ್ತರಿಗೆ 1 ಸಾವಿರ ರೂ. ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ ಮಾಡಲಾಗುವುದು, 100 ಪ್ರಾಥಮಿಕ, 50 ಪ್ರೌಢಶಾಲೆಗಳ ಉನ್ನತೀಕರಣ, 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

1080 ಕೋಟಿ ರೂ.ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ ಜಾರಿಗೆ ತರಲಾಗುವುದು. ಮೊದಲ ಹಂತದಲ್ಲಿ 70 ಕೆರೆ ತುಂಬಿಸುವ ಯೋಜನೆ. ಎತ್ತಿನಹೊಳೆಗೆ ಯೋಜನೆಗೆ 553 ಕೋಟಿ ರೂ. ಯೋಜನೆ ಜಾರಿ. ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಜಾರಿ, 2 ಕೋಟಿ ರೂ.ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿರಿಯ ನಾಗರಿಕರಿಗೆ ಅನ್ನ ಸುವಿಧಾ ಯೋಜನೆ ಜಾರಿಗೊಳಿಸಲಾಗುವುದು, ಅನುಗ್ರಹ ಯೋಜನೆಯಡಿ ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುವ ಪರಿಹಾರ ಮೊತ್ತವನ್ನು 15,000 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಶಾಕ್ ಕೊಟ್ಟಿದ್ದು, ರಾಜ್ಯದಲ್ಲಿ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, 40 ಸಾವಿರ ಕೋಟಿ ಆದಾಯದ ಗುರಿ ಹೊಂದಿದೆ. ಇನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಫಲಾನುಭವಿಗಳನ್ನು ಅಕ್ಕ ಕೋ ಅಪರೇಟಿವ್ ಸೊಸೈಟ್ ಅಡಿ ತರಲಾಗುವುದು ಎಂದು ತಿಳಿಸಿದ್ದಾರೆ.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು

ಬೆಂಗಳೂರು.12.ಆಗಸ್ಟ್.25: ರಾಜ್ಯಾದ್ಯಂತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ "ಅರಣ್ಯ ವೀಕ್ಷಕ" ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್…

6 minutes ago

ವಸತಿಯುಕ್ತ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ ಹುದ್ದೆಗಳು…

4 hours ago

ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ PH.D ಪ್ರಮಾಣಪತ್ರ

ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…

8 hours ago

ವಿಶೇಷಚೇತನ ಅತಿಥಿ ಉಪನ್ಯಾಸಕರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಳ ಸರ್ಕಾರ ಗಮನ ಸೆಳೆಲೀ..

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…

8 hours ago

Free ಉಚಿತ ‘ಮೊಬೈಲ್ ರಿಪೇರಿ’ ತರಬೇತಿಗಾಗಿ ಅರ್ಜಿ ಆಹ್ವಾನ

ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌…

10 hours ago

ಯುವತಿಗೆ ಚುಡಾಯಿಸಿದ ಆರೋಪ, ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ  ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು  ಪರಿಶಿಷ್ಟ ಪಂಗಡಕ್ಕೆ…

12 hours ago