ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 200 KPS ಶಾಲೆಗಳ : ಡಾ.ಅಜಯ್ ಸಿಂಗ ಕೆಕೆಆರ್‌ಡಿಬಿ ಅಧ್ಯಕ್ಷರು

ಕಲಬುರಗಿ.09.ಫೆ.25:-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಕೊಡಲು 200 ಕೆಪಿಎಸ್ ಮಾದರಿಯ ಕರ್ನಾಟಕ ಪಬ್ಲಿಕ್ ಶಾಲೆ KPS ಸ್ಥಾಪನೆಗೆ ಚಿಂತನೆ ನಡೆದಿದೆ. 

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ “ಕೆಕೆಆರ್‌ಡಿಬಿ”ಈ ಬಾರಿ ₹ 4500 ಕೋಟಿ ಅನುದಾನದ ಕ್ರಿಯಾ ಯೋಜನೆ ತಯಾರಿಸಿದ್ದು, ಒಂದು ತಿಂಗಳಲ್ಲಿ ಎಸ್‌ಸಿಪಿ-ಟಿಎಸ್‌ಪಿ ಮೀಸಲು ಅನುದಾನದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ “ಕೆಕೆಆರ್‌ಡಿಬಿ” ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಡುಗಡೆಯಾದ ಅನುದಾನ ಖರ್ಚೇ ಆಗುವುದಿಲ್ಲ ಎಂಬ ಆಪಾದನೆ ಇತ್ತು. ಸಿಬ್ಬಂದಿ ಕೊರತೆಯ ನಡುವೆಯೂ ಬೇರೆ- ಬೇರೆ ಇಲಾಖೆಗಳ ನೆರವು ಪಡೆದ ಕ್ರಿಯಾ ಯೋಜನೆಗಳನ್ನು ತಯಾರಿಸಿದ್ದೇವೆ.

ಮುಂಬರುವ ಬಜೆಟ್‌ನಲ್ಲಿ ಘೋಷಣೆಯಾಗಲಿದೆ. ಸಿಎಸ್‌ಆರ್ ನಿಧಿ ಬಳಸಿಕೊಂಡು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕೈದು ಕೆಪಿಎಸ್‌ ಶಾಲೆಗಳನ್ನು ತಲಾ ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

‘ಮುಂದಿನ ವರ್ಷವೂ ಅಕ್ಷರ ಆವಿಷ್ಕಾರ ಕಾರ್ಯಕ್ರಮಗಳು ಮುಂದುವರೆಯಲಿದ್ದು, ಮಾರ್ಚ್ ಬಳಿಕ ನಡೆಯುವ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು.

ಈ ಭಾಗದ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ತಜ್ಞರ ಸಮಿತಿ ರಚಿಸುವ ಚಿಂತನೆ ಇದೆ’ ಎಂದು ಮಾಹಿತಿ ನೀಡಿದರು.

ಕಲಬುರಗಿಯಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಮಂಡಳಿಯ ₹ 857 ಕೋಟಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ ₹ 439 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಗರ ಆರೋಗ್ಯ ಉಪ ಕೇಂದ್ರಗಳ ನಿರ್ಮಾಣ, ಕಟ್ಟಡಗಳ ದುರಸ್ತಿ, ಆಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

’50:50 ಅನುಪಾತದಲ್ಲಿ ಅಲ್ಪಸಂಖ್ಯಾತ ಇಲಾಖೆಯ ಸಹಯೋಗದಡಿ 48 ಮೌಲಾನಾ ಅಜಾದ್, ಮೊರಾರ್ಜಿ ದೇಸಾಯಿ ವಸತಿ ಶಾಲೆ, 34 ಬಿಸಿಎಂ ಹಾಸ್ಟೆಲ್, ₹ 186 ಕೋಟಿಯಲ್ಲಿ ಎಸ್‌ಸಿ, ಎಸ್‌ಟಿ ಹಾಸ್ಟೆಲ್ ನಿರ್ಮಿಸಲಾಗುವುದು.

ಕಲ್ಯಾಣ ಪಥ ಯೋಜನೆಯಡಿ ಗ್ರಾಮೀಣ ರಸ್ತೆಗಳಿಗೆ ₹ 330 ಕೋಟಿ ನೀಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳು ಚಾಲನೆ ನೀಡುವರು. ಮಿನಿ ವಿಧಾನಸೌಧಗಳ ನಿರ್ಮಾಣಕ್ಕೂ ಟೆಂಡರ್ ಕರೆಯಲಾಗಿದೆ’ ಎಂದು ಹೇಳಿದರು.

ಡಾ.ಅಜಯ್ ಸಿಂಗ್ ಶಾಸಕರು ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷಮಂಡಳಿಗೆ ಅನುದಾನವನ್ನು ಸಂಪೂರ್ಣವಾಗಿ ಖರ್ಚು ಮಾಡಲು ಪ್ರತ್ಯೇಕವಾಗಿ 229 ಎಂಜಿನಿಯರ್‌ ಒಳಗೊಂಡ ಎಂಜಿನಿಯರಿಂಗ್ ವಿಭಾಗ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ. ಖಾಲಿ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುವುದು.

prajaprabhat

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

18 minutes ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

26 minutes ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

7 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

8 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

10 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

10 hours ago