ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್‌ ಭೇಟಿ: ಕುತೂಹಲ

ಬೆಂಗಳೂರು.10.ಫೆ.25: ರಾಜ್ಯದಲ್ಲಿ ದಲಿತ ಮುಖಂಡರ “ಡಿನ್ನರ್‌ ಸಭೆ’ ಮುಂದೂಡಿಕೆ ಅನಂತರ ಇದೇ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ಗೃಹ ಸಚಿವ ಡಾ| ಪರಮೇಶ್ವರ್‌, ಸುಮಾರು 45 ನಿಮಿಷಗಳ ಕಾಲ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ದಿಲ್ಲಿ ಫ‌ಲಿತಾಂಶದ ಮರುದಿನವೇ ಅಂದರೆ ರವಿವಾರ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಭೇಟಿಯಾದ ಡಾ. ಪರಮೇಶ್ವರ್‌, ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ “ಬದಲಾವಣೆ’ ಮಾತುಗಳ ಕುರಿತು ಮಾತುಕತೆ ನಡೆಸಿದರು.

ಈ ವೇಳೆ ಅಧಿಕಾರ ಹಂಚಿಕೆ ಬಗ್ಗೆ ಕೇಳಿಬರುತ್ತಿರುವ ಮಾತುಗಳು ಮತ್ತು ಅದಕ್ಕೆ ಗೃಹ ಸಚಿವರು ನೀಡಿದ ಪ್ರತಿಕ್ರಿಯೆಗಳೂ ಪ್ರಸ್ತಾಪವಾದವು ಎನ್ನಲಾಗಿದೆ.

ತಾವು ದಲಿತ ಮುಖಂಡರ “ಡಿನ್ನರ್‌ ಸಭೆ’ ಕರೆದಿದ್ದು, ಮರುದಿನವೇ ಅದಕ್ಕೆ ಹೈಕಮಾಂಡ್‌ ಬ್ರೇಕ್‌ ಹಾಕಿರುವ ಬಗ್ಗೆ ಸಮು ದಾಯಗಳಲ್ಲಿ ಉಂಟಾದ ಅಸಮಾ ಧಾನ ಗಳ ವಿವರಣೆ ನೀಡಿ ದರು. ಮುಂಬರುವ ದಿನಗಳಲ್ಲಿ ದಲಿತ ಸಮಾವೇಶ ಏರ್ಪಡಿಸುವ ಅವಶ್ಯಕತೆ ಇದೆ.

ಈ ಮೂಲಕ ಸಮಸ್ಯೆಗಳನ್ನು ಚರ್ಚಿಸಲು ಅನುಕೂಲ ಆಗಲಿದೆ. ಹಾಗಾಗಿ, ಇದಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಒಂದು ಬಣ ದಿಲ್ಲಿ ಭೇಟಿಯಂತಹ ಬೆಳವಣಿಗೆ ಗಳು ಚರ್ಚೆಗೆ ಬಂದವು. ಒಟ್ಟಾರೆಯಾಗಿ ತಾವು ವಾರ್ನಿಂಗ್‌ ನೀಡಿದ ಅನಂತರವೂ ಕೇಳಿಬರುತ್ತಿರುವ ಬಣಗಳ ಭಿನ್ನರಾಗಗಳ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

ಈ ಭೇಟಿ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಇದ್ದರು ಎನ್ನಲಾಗಿದೆ.

ಇದಲ್ಲದೆ, ಈಚೆಗೆ ನಡೆದ ದಲಿತ ಸಚಿವರ ಸಭೆ, ಬೆನ್ನಲ್ಲೇ ಹಮ್ಮಿಕೊಂಡಿದ್ದ ದಲಿತ ನಾಯಕರ ದಿಲ್ಲಿ ಭೇಟಿ ಯೋಜನೆ ಹಾಗೂ ಕೊನೆಯಲ್ಲಿ ಅದರ ಮುಂದೂಡಿಕೆ ವಿಚಾರ ಸೇರಿದಂತೆ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಕುರಿತು ಭೇಟಿಯಲ್ಲಿ ಚರ್ಚೆ ಆಗಿದೆ ಎಂದೂ ಹೇಳಲಾಗಿದೆ.

ಈ ನಡುವೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ರವಿವಾರ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ನಡುವೆಯೇ ವಾಲ್ಮೀಕಿ ಮಠದಲ್ಲಿ ದಲಿತ ಸಚಿವರು ಪ್ರತ್ಯೇಕ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸತೀಶ್‌ ಜಾರಕಿಹೊಳಿ, ಡಾ. ಎಚ್‌.ಸಿ.ಮಹದೇವಪ್ಪ, ರಾಜಣ್ಣ, ಸಂಸದ ತುಕಾರಾಂ, ಶಾಸಕರಾದ ಕೆ.ಎಸ್‌.ಬಸವಂತಪ್ಪ, ಟಿ. ರಘುಮೂರ್ತಿ, ಕಂಪ್ಲಿ ಗಣೇಶ್‌ ಒಳಗೊಂಡಂತೆ ಇತರರು ಭಾಗಿಯಾಗಿದ್ದರು. ಅನಂತರ ಮೂವರು ಸಚಿವರು ಪ್ರತ್ಯೇಕ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

42 minutes ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

2 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

4 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

4 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago