ಬೀದರ್.30.ಏಪ್ರಿಲ್.30:- ಕಾಶ್ಮೀರದ ಪಹಲ್ಗಾಂ ಜಿಲ್ಲೆಯಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಖಂಡಿಸಿ, ಬೀದರ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೀದರ ಪಟ್ಟಣದಲ್ಲಿ ಕ್ಯಾಂಡಲ್ ಮಾರ್ಚ್ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಭಾಗವಹಿಸಿ, ದಾಳಿಯಲ್ಲಿ ಹುತಾತ್ಮರಾದ ಪ್ರವಾಸಿಗರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು
ಭಯೋತ್ಪಾದನೆ ಎಂಬುದು ಮಾನವೀಯತೆ ವಿರುದ್ಧದ ಅತ್ಯಂತ ಹೀನ ಮತ್ತು ಅಸ್ವೀಕೃತ ಕೃತ್ಯವಾಗಿದೆ. ಈ ದೇಶದ ಏಕತೆ, ಅಖಂಡತೆ ಮತ್ತು ಶಾಂತಿಯನ್ನು ಭಂಗಪಡಿಸುವ ದುಷ್ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ತಡೆಯುವುದು ಸರ್ಕಾರದ ಮೂಲಭೂತ ಜವಾಬ್ದಾರಿಯಾಗಿದೆ. ಜನರಿಗೆ ಭದ್ರತೆ ಒದಗಿಸುವಲ್ಲಿ ವೈಫಲ್ಯ ಕಂಡಾಗ, ಕಾರ್ಯತ್ಮಕ ಕ್ರಮ ಕೈಗೊಳ್ಳಬೇಕು. ಸರ್ಕಾರ ಜನರ ಭದ್ರತೆಗೆ ಬದ್ಧವಾಗಿದೆ ಎಂಬ ವಿಶ್ವಾಸವನ್ನು ಜನತೆಗೆ ನೀಡಬೇಕಾದ ಅಗತ್ಯವಿದೆ ಎಂದು ಈಶ್ವರ ಖಂಡ್ರೆ ಹೇಳಿದರು.
