15/06/2025 11:08 PM

Translate Language

Home » ಲೈವ್ ನ್ಯೂಸ್ » ಕಾರಂಜಾ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜಿ ಪರಿಹಾರ ಒದಗಿಸಬೇಕು.!ಶಾಸಕ ಶ್ರೀ ಪ್ರಭು ಚವ್ಹಾಣ್

ಕಾರಂಜಾ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜಿ ಪರಿಹಾರ ಒದಗಿಸಬೇಕು.!ಶಾಸಕ ಶ್ರೀ ಪ್ರಭು ಚವ್ಹಾಣ್

Facebook
X
WhatsApp
Telegram

     ಡಿ.22 ಬೀದರ: ಬೀದರ ಜಿಲ್ಲೆಯ ಕಾರಂಜಾ ಸಂತ್ರಸ್ತರಿಗೆ ಮಾನ್ಯ ಶಾಸಕರಾದ ಶ್ರೀ ಪ್ರಭು ಚವ್ಹಾಣ್ ಅವರು ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು, ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿ,

      ಕಾರಂಜಾ ನದಿಯ ಹಿನ್ನೀರು ಜಾಸ್ತಿಯಾಗಿ ಹುಮನಾಬಾದ ಮತಕ್ಷೇತ್ರದ ಹಲವು ಗ್ರಾಮಗಳ ರೈತ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿ, ಭೂಮಿ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಪುನರ್ವಸತಿ ಮತ್ತು ಅವರ ಬದುಕು ಮರಳಿ ಸ್ಥಿರಗೊಳ್ಳಲು ಸರ್ಕಾರ ಇದಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಭೆಯಲ್ಲಿ ಆಗ್ರಹಿಸಿದರು.

     ಇದಕ್ಕೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಈ ಸಮಸ್ಯೆಗೆ ತಾಂತ್ರಿಕ ಸಮಿತಿ ರಚನೆ ಮಾಡುವ ಮೂಲಕ ಸುಧಾರಿತ ಪರಿಹಾರ ಕಂಡುಹಿಡಿಯಲು ಮಾನ್ಯ ಮುಖ್ಯಮಂತ್ರಿಗಳು ಇಂದಿನ ಸಭೆಯಲ್ಲಿ ವಿಶ್ವಾಸವನ್ನು ನೀಡಿದರು.

Source: www.prajaprabhat.com

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!