ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ,ಸಚಿವ ಸಂತೋಷ್‌ ಲಾಡ್‌

ಬೆಂಗಳೂರು.28.ಮೇ.25:- ರಾಜ್ಯದ ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರ ಸಬಲೀಕರಣಕ್ಕಾಗಿ ಕಳೆದೆರಡು ವರ್ಷಗಳಲ್ಲಿ ಕಾರ್ಮಿಕ ಇಲಾಖೆಯು ಹಲವು ಹೊಸ ಕ್ರಮಗಳ ಜತೆಗೆ ಕಾನೂನುಗಳನ್ನು ರೂಪಿಸಿದ್ದು, ಪ್ರಮುಖವಾಗಿ ಗಿಗ್‌ ಕಾರ್ಮಿಕರಿಗೆ, ಮೋಟಾರು ಸಾರಿಗೆ ಕಾರ್ಮಿಕರಿಗೆ ಹಾಗೂ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗಾಗಿ ಹೊಸ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ತಮ್ಮ ಕಾರ್ಮಿಕ ಇಲಾಖೆ ಕೈಗೊಂಡಿರುವ ಹೊಸ ಕ್ರಮಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ  ಸಚಿವರಾದ್ ಸಂತೋಷ್‌ ಲಾಡ್‌, ಅಸಂಘಟಿತ ವಲಯದ ಲಕ್ಷಾಂತರ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಮತ್ತು ಅವರ ಸಬಲೀಕರಣಕ್ಕಾಗಿ ಹಲವು ವಿನೂತನ ಕ್ರಮ ಕೈಗೊಳ್ಳಲಾಗಿದೆ.

ಪ್ರಮುಖವಾಗಿ ವಿಧೇಯಕ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಅಧಿನಿಯಮ ಹಾಗೂ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕದಂಥ ಮೂರು ಕ್ರಾಂತಿಕಾರಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.

ಗಿಗ್‌ ಕಾರ್ಮಿಕರಿಗೆ ಸಂಬಂಧಿಸಿದ ಕಾಯ್ದೆಯಲ್ಲಿ ಫಲಾನುಭವಿ ಮರಣದ ನಂತರ ವಾರಸುದಾರರಿಗೆ 2 ಲಕ್ಷ ರು. ಜೀವವಿಮೆ ಪರಿಹಾರ, ಅಪಘಾತ ಮರಣ ಪ್ರಕರಣದಲ್ಲಿ 2 ಲಕ್ಷ ರು. ಅಪಘಾತ ವಿಮಾ ಪರಿಹಾರ, ಅಂಗವಿಕಲತೆಗೆ ಶೇಕಡಾವಾರು ದುರ್ಬಲತೆ ಆಧಾರದಲ್ಲಿ 2 ಲಕ್ಷ ರು. ಪರಿಹಾರ ಹಾಗೂ ಆಸ್ಪತ್ರೆ ವೆಚ್ಚ ಮರುಪಾವತಿಗೆ 1 ಲಕ್ಷ ರು. ಸಹಾಯಧನ ನೀಡಲಾಗುತ್ತದೆ. ಇದು ದೇಶದಲ್ಲಿಯೇ ಮಾದರಿ ಕಾಯ್ದೆಯಾಗಿದೆ.

ಅದೇ ರೀತಿ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರಿಗೆ ಸಂಬಂಧಿಸಿದ ಕಾಯ್ದೆಯಲ್ಲಿ ಅಪಘಾತ ಮರಣ ಪ್ರಕರಣದಲ್ಲಿ 1 ಲಕ್ಷ ರು. ವಿಮಾ ಪರಿಹಾರ, ಅಂಗವಿಕಲತೆಗೆ 1 ಲಕ್ಷ ರು.ವರೆಗೆ ಪರಿಹಾರ ಹಾಗೂ 50 ಸಾವಿರ ರು. ಆಸ್ಪತ್ರೆ ವೆಚ್ಚ ಮರುಪಾವತಿ ಸಹಾಯಧನ ದೊರೆಯಲಿದೆ. ಹಾಗೆಯೇ, ಸಾರಿಗೆ ಕಾರ್ಮಿಕರ ಕಾಯ್ದೆಯಲ್ಲಿ ಅಪಘಾತದಿಂದ ಮರಣ ಹೊಂದಿದರೆ 5 ಲಕ್ಷ ರು. ಪರಿಹಾರ, ಅಪಘಾತದಿಂದ ಶಾಶ್ವತ ಅಂಗವಿಕಲತೆಗೆ 2 ಲಕ್ಷ ರು, ತಾತ್ಕಾಲಿಕ ದುರ್ಬಲರಾದರೆ ಗರಿಷ್ಠ 1 ಲಕ್ಷ ರು. ಹಾಗೂ ಆಸ್ಪತ್ರೆ ವೆಚ್ಚ ಮರುಪಾವತಿ ಸಹಾಯಧನ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಖಾಸಗಿ ಸಂಸ್ಥೆಗಳಲ್ಲಿ ಎಸ್ಸಿ/ಎಸ್ಟಿಗಳಿಗೆ ಉದ್ಯೋಗ:ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿಕೊಡಲು ಆಶಾ ದೀಪ ಯೋಜನೆ ಜಾರಿಗೊಳಿಸಲಾಗಿದ್ದು, ಅದರಿಂದ ಒಟ್ಟಾರೆ 5,733 ಮಂದಿ ಪ್ರಯೋಜನ ಪಡೆದಿದ್ದಾರೆ. ಅದರ ಜತೆಗೆ ವಲಸೆ ಕಟ್ಟಡ ಕಾರ್ಮಿಕರಿಗಾಗಿ ವಸತಿ ಸಮುಚ್ಚಯ ನಿರ್ಮಾಣ, 43 ಸ್ಥಳಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ ಕಾರ್ಮಿಕ ಸೇವಾ ಕೇಂದ್ರಗಳ ಸ್ಥಾಪನೆ, 65 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಕಡ್ಡಾಯ ಉಪಧನ ಕಾಯ್ದೆ, ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ಎಲ್ಲ ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ ಗುರಿ ಹೊಂದಲಾಗಿದೆ ಎಂದು ಸಂತೋಷ್‌ ಲಾಡ್‌ ಹೇಳಿದ್ದಾರೆ.

ಹೊರಗುತ್ತಿಗೆ ಕಾರ್ಮಿಕ ಸೇವೆಗೆ ಸೊಸೈಟಿ ರಚನೆ: ಹೊರಗುತ್ತಿಗೆ ಕಾರ್ಮಿಕರ ನೇಮಕದಲ್ಲಿದ್ದ ಗೊಂದಲಗಳ ನಿವಾರಣೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತಿ ಜಿಲ್ಲೆಯಲ್ಲಿ ಹೊರಗುತ್ತಿಗೆ ಕಾರ್ಮಿಕ ಸೇವೆ ಒದಗಿಸುವ ಸೊಸೈಟಿ ರಚಿಸುವ ಹೊಸ ಪರಿಕಲ್ಪನೆ ಜಾರಿಗೊಳಿಸಲಾಗಿದೆ. ಮೊದಲಿಗೆ ಬೀದರ್‌ ಜಿಲ್ಲೆಯಲ್ಲಿ ಈ ಪ್ರಯೋಗ ಮಾಡಲಾಗಿದ್ದು, ಅದು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ತುಮಕೂರು, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಲ್ಲೂ ಸೊಸೈಟಿ ರಚಿಸಲಾಗುತ್ತದೆ. ಅದಾದ ನಂತರ ರಾಜ್ಯಾದ್ಯಂತ ಅದನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

2 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

2 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

8 hours ago