ದಾವಣಗೆರೆ.03.ಏಪ್ರಿಲ್.25: ರಾಜ್ಯದಲ್ಲಿ ಹೆಚ್ಚು ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಗುಣಮಟ್ಟದ ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.ಸಚಿವ ಡಾ. ಎಂ.ಸಿ. ಸುಧಾಕರ ಹೇಳಿದ್ದಾರೆ.
ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು ಗುಣಮಟ್ಟದ ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.
ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆ ಗುಣಮಟ್ಟದ ಶಿಕ್ಷಣಕ್ಕೆ ಪರಿಹಾರವಲ್ಲ. ಕೇವಲ ವಿಶ್ವವಿದ್ಯಾನಿಲಯಗಳನ್ನು ಹೆಚ್ಚಿಸುವುದಿಂದ, ಶಿಕ್ಷಣ ನೀತಿ ಬದಲಾಯಿಸುವುದರಿಂದ ಶೈಕ್ಷಣಿಕ ವಾತಾವರಣ ಬದಲಾಗುವುದಿಲ್ಲ. ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ. ಆದ್ದರಿಂದ ವಿಶ್ವವಿದ್ಯಾಲಯಗಳಲ್ಲಿರುವ ನ್ಯೂನ್ಯತೆ ಸರಿಪಡಿಸಿ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯಗಳ ಸ್ಥಿತಿಗತಿಗಳ ಕುರಿತು ಅಧ್ಯಯನ ಮಾಡಲು ರಚಿಸಿದ ಸಂಪುಟ ಉಪಸಮಿತಿ, ತನ್ನ ವರದಿಯಲ್ಲಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸವಾಲುಗಳ ಜತೆಗೆ ಅವುಗಳಿಗೆ ಪರಿಹಾರ ಏನು ಎಂಬ ಸಲಹೆಯನ್ನೂ ನೀಡಲಿದೆ. ವರದಿ ಬಂದ ತಕ್ಷಣ ಸಂಪುಟ ಸಭೆಯಲ್ಲಿಟ್ಟು ಚರ್ಚಿಸಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ಹೇಳಿದರು.
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4800ಕ್ಕೂ ಹೆಚ್ಚು ಅನುಮೋದಿತ ಬೋಧಕ ಸಿಬ್ಬಂದಿ ಹುದ್ದೆಗಳಿದ್ದು ಅದರಲ್ಲಿ ಸುಮಾರು 3500 ಖಾಲಿ ಇವೆ. ಅವುಗಳ ಭರ್ತಿಗೆ ಆದ್ಯತೆ ನೀಡಲಾಗುವುದು. ನೇಮಕಾತಿಯೊಂದಿಗೆ ಗುಣಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ ಶಿಕ್ಷಣ ನೀತಿಯಲ್ಲಿಯೂ ಅಮೂಲಾಗ್ರ ಬದಲಾವಣೆಯ ಅವಶ್ಯಕತೆ ಇದೆ ಎಂದು ಹೇಳಿದರು.
ಸಿಬ್ಬಂದಿ ಕೊರತೆ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ, ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ, ಉನ್ನತ ಶಿಕ್ಷಣದಲ್ಲೂ ಕೃತಕ ಬುದ್ಧಿಮತ್ತೆಯ ಲಭ್ಯತೆ, ಸೌಲಭ್ಯ ಬಳಕೆ ಮಾಡಿಕೊಳ್ಳುವತ್ತ ಪ್ರಯತ್ನ ನಡೆಯಬೇಕಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾನ್ಯತೆ ಸಿಗುವಂತೆ ಮಾಡಲು ವಿಶ್ವವಿದ್ಯಾಲಯಗಳ ಮೌಲ್ಯ ಹೆಚ್ಚಿಸಲು ಗಮನ ನೀಡುವುದು ಮುಖ್ಯವಾಗಿದೆ ಎಂದು ಹೇಳಿದರು.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…