ಕಾಲೇಜು ಶಿಕ್ಷಣ ಇಲಾಖೆ: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಜಾನಪದ ಉತ್ಸವ’ ಆಚರಿಸಿ.ಮಹತ್ವದ ಆದೇಶ.!

ಬೆಂಗಳೂರು.14.ಫೆ.25:- ಕರ್ಣಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆಯಲ್ಲಿ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳಲ್ಲಿ ‘ಜಾನಪದ ಉತ್ಸವ’ ಆಚರಿಸಿ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ.

ಇಂದಿನ ಪಾಶ್ಚಾತ್ಯ ಶೈಲಿಯ ಆಧುನಿಕ ಜೀವನದಲ್ಲಿ ದೇಸೀ ಸಂಸ್ಕೃತಿಯು ತನ್ನ ಹಿಂದಿನ ವೈಭವವನ್ನು ಸ್ವಲ್ಪಮಟ್ಟಿಗೆ ಕಳೆದುಕೊಂಡಿವೆ ಎಂದೆನಿಸಿದರೂ ತನ್ನ ಮೂಲನೆಲೆಯಾದ ಹಳ್ಳಿಗಳಲ್ಲಿ ಇನ್ನೂ ತನ್ನ ನೆಲೆಯನ್ನು ಭದ್ರವಾಗಿ ಉಳಿಸಿಕೊಂಡಿರುವುದು ಸಮಾಧಾನ ತರುವ ಸಂಗತಿಯಾಗಿದೆ.

2 page

ಜನಪದ ಸಾಹಿತ್ಯ ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕೆ, ಜನಾಂಗೀಯ ಪಾಕಪದ್ಧತಿ (ದೇಸೀ ಆಹಾರ), ದೇಸೀ ಉಡುಗೆ-ತೊಡುಗೆ, ದೇಸೀ ನೃತ್ಯ-ಸಂಗೀತ, ಆಟ, ಈ ಎಲ್ಲವನ್ನು ಒಳಗೊಂಡಿರುವುದೇ ಜಾನಪದವೆಂದು ಹೇಳಬಹುದು.

ಈ ದೇಸೀ ಸಂಸ್ಕೃತಿಯನ್ನು ಸಂರಕ್ಷಿಸುವ ಹಾಗೂ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿ ತಲೆ-ತಲೆಮಾರುಗಳಿಂದ ಬಂದಿರುವ ಆಯಾ ಪ್ರಾದೇಶಿಕ/ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿ / ಸೊಗಡುಗಳ ಬಗ್ಗೆ.

ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಹಾಗೂ ತನ್ನ ಸುತ್ತಲಿನ ಪರಿಸರ ಮತ್ತು ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತೆ ಮಾಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು, ಸೃಜನಶೀಲತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇಲಾಖಾ ವತಿಯಿಂದ ” ನಮ್ಮ ಸಂಸ್ಕೃತಿ-ನಮ್ಮ ಹೆಮ್ಮೆ”- ಶೀರ್ಷಿಕೆಯಡಿಯಲ್ಲಿ “ಜಾನಪದ ಉತ್ಸವ-2025″ ನ್ನು ಆಚರಿಸಲು ಉದ್ದೇಶಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಅಡಗಿರುವ ಆಯಾ ಪ್ರಾದೇಶಿಕ ಸಾಂಪ್ರದಾಯಿಕ ಕಲೆ ಹಾಗೂ ಕೌಶಲ್ಯಗಳನ್ನು ಪ್ರದರ್ಶಿಸಲು ಹಾಗೂ ಸ್ಪರ್ಧೆ/ಆಚರಣೆಗಳು ಇತ್ಯಾದಿಗಳನ್ನು ಮುಂಬರುವ ಫೆಬ್ರವರಿ/ ಮಾರ್ಚ್ ತಿಂಗಳುಗಳಲ್ಲಿ ಆಯೋಜಿಸಿ, ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸೂಚಿಸಲಾಗಿದೆ.

ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈ ಕೆಳಗೆ ನೀಡಿರುವ ಕಾರ್ಯಕ್ರಮಗಳಲ್ಲಿ ತಮಗೆ ಸೂಕ್ತವಾದ ಕಾರ್ಯಕ್ರಮ/ಕಾರ್ಯಕ್ರಮಗಳನ್ನು “ಜಾನಪದ ಉತ್ಸವ-2025” ದಡಿಯಲ್ಲಿ ಹಮ್ಮಿಕೊಳ್ಳಬಹುದಾಗಿರುತ್ತದೆ.

👉 ಜನಪ್ರದ. ಸಾಹಿತ್ಯ ಪರಿಸರ, ಭಾಷೆ, ಸಂಸ್ಕೃತಿ, ಕಲೆ, ಸಾಹಿತ್ಯ ಇವುಗಳ ಕುರಿತ ಕಾರ್ಯಗಾರಗಳು.


👉ಪಾರಂಪರಿಕ ಕರಕುಶಲ ವಸ್ತುಗಳ ತಯಾರಿಕೆ/ವಸ್ತು ಪ್ರದರ್ಶನ.


👉 ಜನಾಂಗೀಯ ಪಾಕಪದ್ಧತಿ (ದೇಸೀ ಆಹಾರ) – ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.


👉ಸ್ಥಳೀಯ ಕಲಾವಿದರುಗಳಿಂದ ದೇಸೀ ಉಡುಗೆ-ತೊಡುಗೆಗಳು – ಇವುಗಳ ಪ್ರದರ್ಶನ ಹಾಗೂ ಸ್ಪರ್ಧೆ.


👉 ಸ್ಥಳೀಯ ಕಲಾವಿದರುಗಳಿಂದ ದೇಸೀ ನೃತ್ಯ-ಸಂಗೀತ, ಆಟ – ಇವುಗಳ ಪ್ರದರ್ಶನ.

                                             

👉ಮೇಲೆ ತಿಳಿಸಿರುವ ವಿಷಯಗಳಲ್ಲಷ್ಟೇ ಅಲ್ಲದೆ ವಿದ್ಯಾರ್ಥಿಗಳಲ್ಲಿ ವಿಶೇಷವಾದ ಸೃಜನಾತ್ಮಕ/ಕಲಾತ್ಮಕ ಕೌಶಲ್ಯತೆಗಳೇನಾದರೂ ಇದ್ದಲ್ಲಿ ಅಂತಹ ಕೌಶಲ್ಯತೆಗಳನ್ನು ಗುರುತಿಸಿ, ಅವುಗಳನ್ನು ಪ್ರದರ್ಶಿಸಲು ತಮ್ಮ ಹಂತದಲ್ಲೇ ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಿಕೊಡುವಂತೆ ಸೂಚಿಸಲಾಗಿದೆ.

ಈ ಮೇಲ್ಕಂಡ “ಜಾನಪದ ಉತ್ಸವ-2025” ನ್ನು ಫೆಬ್ರವರಿ ಹಾಗೂ ಮಾರ್ಚ್- 2025 ರ ತಿಂಗಳಿನಲ್ಲಿ ತಮ್ಮ ತಮ್ಮ ಕಾಲೇಜಿನ ಹಂತದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕ್ರಮಕೈಗೊಳ್ಳುವುದು ಹಾಗೂ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಸಚಿತ್ರ ಸಮೇತ ವರದಿಗಳನ್ನು ಕೇಂದ್ರ ಕಛೇರಿಯ

ಇ-ಮೇಲ್ ವಿಳಾಸ: dceacademics@gmail.com.        ಕ್ಕೆ ಏಪ್ರಿಲ್-5 ರೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶ್ರೀ ಹರ್ಷ ಬಿ. ನೋಡಲ್ ಅಧಿಕಾರಿಗಳು, ಶೈಕ್ಷಣಿಕ ವಿಭಾಗ ಇವರ ದೂರವಾಣಿ ಸಂಖ್ಯೆ.

9741252035 ಕ್ಕೆ ಸಂಪರ್ಕಿಸುವುದು ಎಂದು ತಿಳಿಸಿದೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

4 hours ago