ಬೆಂಗಳೂರು : ಡಿ24. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಸಂಬಂಧ ಕನಿಷ್ಠ ಪಕ್ಷ 15 ದಿನಗಳ ಮುಂಚಿತವಾಗಿ ಪ್ರಾಂಶುಪಾಲರು ಪ್ರಸ್ತಾವನೆ ಕಳುಹಿಸಬೇಕೆಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಪ್ರಾಂಶುಪಾಲರು ತಮ್ಮ ಕಾಲೇಜಿನ ಪ್ರಸ್ತಾವನೆಗಳನ್ನು ಪ್ರವಾಸಕ್ಕೆ ಕೆಲವೇ ದಿನಗಳು ಇರುವಾಗ ಕಳುಹಿಸುತ್ತಿರುವುದರಿಂದ ಕಚೇರಿ ಕಾರ್ಯಕ್ಕೆ ಅಡಚಣೆಯಾಗುತ್ತಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಈ ಹಿನ್ನೆಲೆಯಲ್ಲಿ ಇನ್ಮುಂದೆ 15 ದಿನ ಮುಂಚಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು. ತಪ್ಪಿದರೆ ಅಂಥ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಮುಂದಿನ ಆಗುಹೋಗುಗಳಿಗೆ ಪ್ರಾಂಶುಪಾಲರೇ ನೇರ ಹೊಣೆ ಆಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆ, ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ಕೋರಿ ಅತಿ ಕಡಿಮೆ ಅವಧಿಯಲ್ಲಿ ಅಥವಾ ಕೊನೆ ಕ್ಷಣದಲ್ಲಿ ಇಲಾಖೆಯನ್ನು ಸಂಪರ್ಕಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕರ್ನಾಕದಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಪ್ರವಾಸ ಹೋಗ್ಬೇಕಾದ್ರಿ 15 ದಿನ್ ಮುಂಚೆ ಪರವಾನಗಿ ತಕೋಬೇಕು..