ಕಾಲೇಜು ಶಿಕ್ಷಣ ಇಲಾಖೆ ಸುಧಾರಣೆಗೆ ವಿಶ್ವ ಬ್ಯಾಂಕಿನಿಂದ 2500 ಕೋಟಿ ರೂ. ಸಾಲ.!

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಮಹತ್ತರ ಸುಧಾರಣೆ ಜಾರಿಗೊಳಿಸುವ ಉದ್ದೇಶಕ್ಕಾಗಿ ವಿಶ್ವ ಬ್ಯಾಂಕಿನಿಂದ 2500 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರದ ಸಚಿವ ಸಂಪುಟದ ಅನುಮತಿ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.

ಇಂದು ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಕಾಲೇಜು ಹಾಗೂ ಶಿಕ್ಷಣ ಇಲಾಖೆಯು ಶುಕ್ರವಾರ ಹಮ್ಮಿಕೊಂಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತದೆ. ಕೈಗಾರಿಕೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಉದ್ಯೋಗ ಖಾತ್ರಿ ಪಡಿಸುವಂತಹ ಮತ್ತಷ್ಟು ಕೋರ್ಸ್ ಪ್ರಾರಂಭಿಸಲಾಗುವುದು ಎಂದರು.


2024-25ನೇ ಶೈಕ್ಷಣಿಕ ಸಾಲಿನಲ್ಲಿ ಆರಂಭಿಸಲಾಗಿರುವ ಎಇಡಿಪಿ ಕೌಶಲ ಆಧಾರಿತ ಪದವಿ ತರಗತಿಗಳಿಗೆ ರಾಜ್ಯದಲ್ಲಿ 1600 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಪದವಿ ವಿದ್ಯಾರ್ಥಿಗಳಿಗೂ ನೇರವಾಗಿ ಉದ್ಯೋಗ ಅವಕಾಶ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕೌಶಲಾಧಾರಿತ ಶೈಕ್ಷಣಿಕ ಕೋರ್ಸು ಪರಿಚಯಿಸಿದೆ.

ಬಿಕಾಂ ಲಾಜಿಸ್ಟಿಕ್, ಇ-ಕಾಮರ್ಸ್, ಬಿಕಾಂ ರೀಟೈಲ್ ಮತ್ತು ಬಿಎಫ್‌ಎಸ್‌ಐ ಕೋರ್ಸ್‌ಗಳನ್ನು ಈ ವರ್ಷ ಆರಂಭಿಸಲಾಗಿದೆ.

ಈ ಕೋರ್ಸಿನ ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಪ್ರತ್ಯೇಕ ಪಠ್ಯ ಚಟುವಟಿಕೆ ಮೂಲಕ ತರಬೇತಿ ನೀಡಿ ಅಂತಿಮ ವರ್ಷದ ಐದು ಮತ್ತು ಆರನೇ ಸೆಮಿಸ್ಟರ್ ವೇಳೆಗೆ ನೇರವಾಗಿ ಕಂಪನಿಗಳಲ್ಲಿ ಶಿಷ್ಯವೇತನದೊಂದಿಗೆ ಉದ್ಯೋಗಾವಕಾಶ ಒದಗಿಸಲಾಗುವುದು. ಶಿಷ್ಯವೇತನವು ಕನಿಷ್ಠ 8000 ದಿಂದ 20 ಸಾವಿರ ರೂ.ವರೆಗೂ ಇರಲಿದೆ ಎಂದರು.

ಹೊಸ ಮಾದರಿ ಶೈಕ್ಷಣಿಕ ವ್ಯವಸ್ಥೆ ಜಾರಿಗೆ ತಂದು ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಂಡು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ ತಿಳಿಸಿದರು.


ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಪ್ರಾಂಶುಪಾಲರಾದ ಮುನಿರಾಜು, ಚಂದ್ರಯ್ಯ ಮತ್ತಿತರರು ಇದ್ದರು.

ನೂತನ ಕಟ್ಟಡ ನಿರ್ಮಾಣ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಕ್ಕೆ 5.87 ಕೋಟಿ ರೂ. ವೆಚ್ಚ ಹಾಗೂ 3.18 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ನಂದಿ ಗಿರಿಧಾಮದಲ್ಲಿ ಸಂಪುಟ ಸಭೆ
ನಂದಿ ಗಿರಿಧಾಮದ ರೋಪ್‌ವೇ ಕಾಮಗಾರಿಗೆ ವೇಗ ನೀಡಬೇಕಾಗಿದೆ. ಈ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಸಳೆಯುವ ನಿಟ್ಟಿನಲ್ಲಿ ಸಂಪುಟ ಸಭೆ ಆಯೋಜಿಸುವುದು ಸಹಕಾರಿಯಾಗಲಿದೆ.

ಈ ನಿಟ್ಟಿನಲ್ಲಿ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ಆಯೋಜಿಸಲು ಚಿಂತಿಸಲಾಗಿದೆ. ಮಹಾತ್ಮ ಗಾಂಧಿ ಅವರು 1927ರಲ್ಲಿ 45 ದಿನ ಹಾಗೂ 1936ರಲ್ಲಿ 20 ದಿನ ಸೇರಿ ಒಟ್ಟು 65 ದಿನ ನಂದಿಬೆಟ್ಟದಲ್ಲಿ ವಾಸ್ತವ್ಯ ಹೂಡಿ, ಇಲ್ಲಿನ ವಾತಾವರಣದಲ್ಲಿ ಆರೋಗ್ಯ ಸುಧಾರಿಸಿಕೊಂಡಿದ್ದರು.

ಇವರ ಹೆಜ್ಜೆ ಗುರುತುಗಳಿರುವ ಜಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂಬ ಚಿಂತನೆ ಇದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು. ಮೊದಲು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ತಿಳಿಸಿದರು.

ಭವನ ಉದ್ಘಾಟನೆ, ಸಮ್ಮೇಳನಕ್ಕೆ ಸಿದ್ಧತೆ
ಜಿಲ್ಲೆಯಲ್ಲಿ ಆಧುನಿಕ ರೀತಿಯಲ್ಲಿ ಸುಸಜ್ಜಿತ ವಾಗಿ ನಿರ್ಮಾಣವಾಗಿರುವ ಜಿಲ್ಲಾ ಕನ್ನಡ ಭವನವನ್ನು ಜನವರಿ ಅಂತ್ಯದೊಳಗೆ ಇಲ್ಲವೇ ಫೆಬ್ರವರಿಯಲ್ಲಿ ಉದ್ಘಾಟಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.

ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಭಾಗಳಲಿ ಸುಧಾರಿಸಲು 2500 ಕೋಟಿ ಸಾಲ ತಕೋತಿದೆ. ಈ ಯೋಜನೆಯಲ್ಲಿ ವಿವಿಧ ಸಾಹಿತ್ಯ ಕಲೆ ಮತ್ತು ಅಭಿವದ್ಧಿ ಮಾಡಲಾಗಿದ್ದು…

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

2 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

10 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

11 hours ago