ಬೀದರ.30 ಡಿಸೆಂಬರ್24:-ಔರಾದ ತಾಲೂಕಿನ ನಾಗೂರ(ಬಿ) ಗ್ರಾಮದ ಕಿರಣ ಗಣಪತಿ ವಲ್ಲೇಪುರೆ ಅವರು ಕರ್ನಾಟಕ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ.ಜಗನ್ನಾಥ ಹೆಬ್ಬಾಳೆ ಅವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿ ಮಂಡಿಸಿದ ‘ಯು.ಆರ್.ಅನಂತಮೂರ್ತಿ ಮತ್ತು ಚಂದ್ರಶೇಖರ ಕಂಬಾರ ಅವರ ಕಾದಂಬರಿಗಳ ತೌಲನಿಕ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್.ಡಿ. ಪದವಿ ನೀಡಿದೆ.
