ಬೆಳಗಾವಿ.24ಫೆಬ್ರವರಿ 25: ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ (Gokak) ನಗರದ ಆರು ಮಂದಿ ಮೃತಪಟ್ಟಿದ್ದಾರೆ.
ಇಬ್ಬರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು.
ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಗೋಕಾಕ್ನಿಂದ ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್ರಾಜ್ನ ಕುಂಭಮೇಳಕ್ಕೆ (Prayagraj Kumbh Mela) ತೆರಳುತ್ತಿದ್ದರು ಸೋಮವಾರ (ಫೆ.24) ಬೆಳಗಿನ ಜಾವ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
ಬೀದರ್ನ ಆರು ಮಂದಿ ಸಾವು
ಉತ್ತರಪ್ರದೇಶದ ವಾರಣಾಸಿ ಬಳಿ ಅಪಘಾತ ಸಂಭವಿಸಿದ್ದ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಆರು ಮಂದಿ ಮೃತಪಟ್ಟಿದ್ದರು. ಸುನೀತಾ (40 ವರ್ಷ), ನೀಲಮ್ಮ( 62 ವರ್ಷ) ಲಕ್ಷ್ಮಿ (57 ವರ್ಷ) ಕಲಾವತಿ (60 ವರ್ಷ) ಸಂತೋಷ (45 ವರ್ಷ) ಮೃತ ದುರ್ದೈವಿಗಳು.
ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದರು. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ಎಂದು ತಿಳಿದುಬಂದಿತ್ತು.