ಕುಲಪತಿಗಳ ನೇಮಕಾತಿಯಲ್ಲಿ ಪ್ರಾಧ್ಯಾಪಕರನ್ನು ಪರಿಗಣಿಸಿ: ಮನವಿ

ಕಲಬುರಗಿ.13.ಮಾರ್ಚ.25:- ರಾಜ್ಯ ಉನ್ನತ ಶಿಕ್ಷಣ ಇಲಾಖೆ. ವಿಶ್ವವಿದ್ಯಾಲಯ ಕುಲಪತಿಗಳ ಹುದ್ದೆಯ ನೇಮಕಾತಿಯಲ್ಲಿ ಪದವಿ ಕಾಲೇಜು ಪ್ರಾಧ್ಯಾಪಕರನ್ನು ಪರಿಗಣಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ನಿಯೋಗ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ. ಶಿವಶರಣಪ್ಪ ಗೊಳ್ಳೆ ಅವರಿಗೆ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ಗುಲಬರ್ಗಾ, ಧಾರವಾಡ, ರಾಯಚೂರ ಹಾಗೂ ವಿಜಯಪುರ ವಿಶ್ವವಿದ್ಯಾಲಯಗಳ ಕುಲಪತಿಗಳ ಹುದ್ದೆಗಳ ನೇಮಕಾತಿಗೆ ಉನ್ನತ ಶಿಕ್ಷಣ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಕೇವಲ ವಿಶ್ವವಿದ್ಯಾಲಯಗಳಲ್ಲಿ ಹತ್ತು ವರ್ಷ ಸೇವೆ ಸಲ್ಲಿಸಿದವರಿಗೆ ಮಾತ್ರ ಕುಲಪತಿಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದನ್ನು ಅಧ್ಯಾಪಕರ ಸಂಘ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದರೆ.

ಉನ್ನತ ಶಿಕ್ಷಣವೆಂದರೆ ಕೇವಲ ವಿಶ್ವವಿದ್ಯಾಲಯದ ಶಿಕ್ಷಣ ಮಾತ್ರವಲ್ಲ. ಅದು ಮಹಾವಿದ್ಯಾಲಯಗಳ ಶಿಕ್ಷಣವೂ ಆಗಿದೆ. ಉನ್ನತ ಶಿಕ್ಷಣವು ಮಹಾವಿದ್ಯಾಲಯ(ಸ್ನಾತಕ) ಮತ್ತು ವಿಶ್ವವಿದ್ಯಾಲಯದ (ಸ್ನಾತಕೊತ್ತರ) ಶಿಕ್ಷಣಗಳೆರಡನ್ನೂ ಒಳಗೊಂಡಿದೆ.

ರಾಜ್ಯದ ಯಾವುದೇ ವಿಶ್ವವಿದ್ಯಾಲಯಕ್ಕೆ ನೂರಾರು ಪದವಿ ಕಾಲೇಜುಗಳು ಸಂಲಗ್ನತೆ ಹೊಂದಿರುತ್ತವೆ. ಪದವಿ ಕಾಲೇಜುಗಳ ಅಧ್ಯಾಪಕರೂ ಯುಜಿಸಿ ಮತ್ತು ಉನ್ನತ ಶಿಕ್ಷಣ ಇಲಾಖೆ ನಿಗದಿಪಡಿಸಿದ ನಿಯಮಗಳ ಅನ್ವಯ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಲೇಜು ಅಧ್ಯಾಪಕರ ನೇಮಕಾತಿ ಹಾಗೂ ಪದೋನ್ನತಿಗಳು ಯುಜಿಸಿ ನಿಯಾಮಾವಳಿಗಳ ಪ್ರಕಾರ ನಡೆಯುತ್ತಿವೆ. ವಿಶ್ವವಿದ್ಯಾಲಯ ಹಾಗೂ ಮಹಾವಿದ್ಯಾಲಯಗಳ ಅಧ್ಯಾಪಕರು ವೇತನ ಮತ್ತು ವಿವಿಧ ತುಟ್ಟಿಭತ್ಯೆಗಳನ್ನು ಪಡೆಯುತ್ತಿದ್ದಾರೆ. ಆದರೆ, ಕುಲಪತಿಗಳ ಹುದ್ದೆಗಳ ನೇಮಕಾತಿ ನಿಯಮಗಳಲ್ಲಿ ಮಾತ್ರ ತಾರತಮ್ಯ ಮಾಡುತ್ತಿರುವುದು ಏಕೆ? ಸರ್ಕಾರ ಅನುಸರಿಸುತ್ತಿರುವ ಈ ತಾರತಮ್ಯ ನೀತಿಯನ್ನು ಕಾಲೇಜು ಅಧ್ಯಾಪಕರ ಸಂಘ ವಿರೋಧಿಸುತ್ತದೆ ಎಂದಿದ್ದಾರೆ.

ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರನ್ನೂ ಕುಲಪತಿ, ಕುಲಸಚಿವರು ಮತ್ತು ಮೌಲ್ಯಮಾಪನ ಕುಲಸಚಿವರ ಹುದ್ದೆಗಳ ನೇಮಕಾತಿಯಲ್ಲಿ ಆದ್ಯತೆ ಕೊಡಬೇಕು.

ಯುಜಿಸಿ ಮಾನದಂಡ ಪೂರೈಸಿದ ಅರ್ಹತೆ, ಶೈಕ್ಷಣಿಕ ಸಾಧನೆ ಹಾಗೂ ಆಡಳಿತಾತ್ಮಕ ಅನುಭವ ಮತ್ತು ಹತ್ತು ವರ್ಷ ಪ್ರಾಧ್ಯಾಪಕರಾಗಿ ಸೇವಾ ಅನುಭವವನ್ನು ಹೊಂದಿದ ಪದವಿ ಕಾಲೇಜು ಅಧ್ಯಾಪಕರನ್ನೂ ಪರಿಗಣಿಸಬೇಕು ಎಂದು ಕೋರಿದ್ದಾರೆ.

ಈ ವೇಳೆ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪೂರ, ಪ್ರಧಾನ ಕಾರ್ಯದರ್ಶಿ ಶ್ರೀಮಂತ ಬಿ.ಹೋಳ್ಕರ್, ಪ್ರಮುಖರಾದ ಮಲ್ಲಿಕಾರ್ಜುನ ಶೆಟ್ಟಿ, ಚಿನ್ನಾ ಆಶಪ್ಪ, ಡಾ.ಲಕ್ಷ್ಮಣ ಬೋಸ್ಲೆ, ಶರಣಪ್ಪ ಗುಂಡಗುರ್ತಿ, ನೀಲಕಂಠ ಕಣ್ಣಿ, ಶಿವಾನಂದ ಲೇಂಗಟಿ, ಪ್ರೊ. ನಿಂಗಪ್ಪ ಕುದ್ರಿಹಾಳ ಉಪಸ್ಥಿತರಿದ್ದರು.

ರಾಜ್ಯದ ಯಾವುದೇ ವಿಶ್ವವಿದ್ಯಾಲಯಕ್ಕೆ ನೂರಾರು ಪದವಿ ಕಾಲೇಜುಗಳು ಸಂಲಗ್ನತೆ ಹೊಂದಿರುತ್ತವೆ. ಪದವಿ ಕಾಲೇಜುಗಳ ಅಧ್ಯಾಪಕರೂ ಯುಜಿಸಿ ಮತ್ತು ಉನ್ನತ ಶಿಕ್ಷಣ ಇಲಾಖೆ ನಿಗದಿಪಡಿಸಿದ ನಿಯಮಗಳ ಅನ್ವಯ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

7 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago