06/07/2025 11:05 PM

Translate Language

Home » ಲೈವ್ ನ್ಯೂಸ್ » ಕುಷ್ಟಗಿ ಪುರಸಭೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ

ಕುಷ್ಟಗಿ ಪುರಸಭೆ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.02.ಜುಲೈ.25:- ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆ ಅಡಿಯಲ್ಲಿ 4 ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿ.ಎಲ್.ಸಿ), ಪಾಲುಗಾರಿಕೆಯಲ್ಲಿ ಕೈಗೆಟುಕುವ ಬಹುಮಹಡಿ ವಸತಿ ಯೋಜನೆ (ಎ.ಎಚ್.ಪಿ), ಕೈಗೆಟುಕುವ ಬಾಡಿಗೆ ವಸತಿ ಯೋಜನೆ (ಎ.ಆರ್‌ಹೆಚ್) ಹಾಗೂ ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐ.ಎಸ್.ಎಸ್) ಯಡಿ ಮಹಿಳಾ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಫಲಾನುಭವಿಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಿಂದ/ಇಲಾಖೆಗಳಿAದ ಯಾವುದೇ ಸಹಾಯಧನ ಪಡೆದು ಮನೆ ನಿರ್ಮಿಸಿಕೊಂಡಿರಬಾರದು. ವಿವಾಹಿತ ಮಹಿಳೆ, ಏಕ ಮಹಿಳಾ ಒಡೆತನದ ಗೃಹಣಿ, ಪುರಷರಾದಲ್ಲಿ ಮಾಜಿ ಯೋಧರು, ವಿಧುರರು, ಅಂಗವಿಕಲರು, ವಿಚ್ಚೇದಿತರು ಅರ್ಜಿಯನ್ನು ಸಲ್ಲಿಸಬಹುದು. ನಿವೇಶನ/ಕಚ್ಚಾಮನೆಯ ಮೂಲ ದಾಖಲೆಗಳನ್ನು ಪರಿಶೀಲನೆ ವೇಳೆಯಲ್ಲಿ ಹಾಜರಪಡಿಸಬೇಕು ಹಾಗೂ ಜಿ.ಪಿ.ಎಸ್ ಆಧಾರಿತ ಫೋಟೋ ನೀಡಬೇಕು. ನಿವೇಶನ ಅಥವಾ ಕಚ್ಚಾಮನೆಯ ಬಗ್ಗೆ ಯಾವುದೇ ಕೌಟಂಬಿಕ ತಕರಾರು ಕೋರ್ಟ್ ಕೇಸ್ ಇತ್ಯಾದಿ ವ್ಯಾಜ್ಯ ಇರಬಾರದು. ಮನೆ ನಿರ್ಮಾಣಕ್ಕೆ ನಿಗದಿಪಡಿಸಿದ ನಿವೇಶನ/ಕಚ್ಚಾಮನೆ ಸ್ಥಳವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವಂತಿಲ್ಲ.

ಕುಟುoಬದ ಸದಸ್ಯರ ಆಧಾರ ಕಾರ್ಡ್, ಅರ್ಜಿದಾರರ ಇತ್ತೀಚಿನ 2 ಭಾವಚಿತ್ರ, ನಿವೇಶನ/ಕಚ್ಚಾ ಮನೆಗೆ ಸಂಬoಧಿಸಿದ ಇತ್ತೀಚಿನ ಚಾಲ್ತಿ ಉತಾರ ಪ್ರತಿ ಹಾಗೂ ಜಿ.ಪಿ.ಎಸ್ ಆಧಾರಿತ ಫೋಟೋ, ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಮತದಾರರ ಗುರುತಿನ ಚೀಟಿ, ಅರ್ಜಿದಾರರ ರಾಷ್ಟಿçÃಕೃತ ಬ್ಯಾಂಕ್ ಖಾತೆಯ ಪಾಸ್‌ಬುಕ್ ಪ್ರತಿ, ಅರ್ಜಿದಾರರ ಹೆಸರಿನಲ್ಲಿ ಅಥವಾ (ಪತಿ/ಪತ್ನಿ) ಅವಿವಾಹಿತ ಮಗ/ಮಗಳು ಹೆಸರಿನಲ್ಲಿ ಸ್ವಂತ ಮನೆ ಹೊಂದಿಲ್ಲ ಎಂಬುದರ ಬಗ್ಗೆ ರೂ 100/- ಛಾಪಾ ಕಾಗದದಲ್ಲಿ ಸ್ವಯಂ ದೃಢೀಕರಣ ಪತ್ರ, ಆಸ್ತಿ ಸದಸ್ಯರ ಹೆಸರಿನಲ್ಲಿದ್ದಲ್ಲಿ ಹಾಗೂ ಜಂಟಿ ಖಾತೆಯಲ್ಲಿದ್ದಲ್ಲಿ ರೂ 100/- ಛಾಪಾ ಕಾಗದದಲ್ಲಿ ತಂಟೆ-ತಕರಾರು ಇಲ್ಲದಿರುವ ಬಗ್ಗೆ ಒಪ್ಪಿಗೆ ಪತ್ರದ ದಾಖಲೆಗಳೊಂದಿಗೆ  ನಲ್ಲಿ ಜುಲೈ 15 ರೊಳಗೆ https://pmayyrban.gov.in ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಅರ್ಜಿ ಪ್ರತಿ ಹಾಗೂ ದಾಖಲೆಗಳನ್ನು ಪುರಸಭೆ ಕಾರ್ಯಾಲಯಕ್ಕೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

ಕಡ್ಡಾಯವಾಗಿ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಆಧಾರ ನಂಬರ್ ಬ್ಯಾಂಕ್ ಖಾತೆಗೆ ಜೋಡಣೆಯಾಗಿರುವುದು ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ನಿಗದಿಪಡಿಸಿದ ದಾಖಲೆ ಸಲ್ಲಿಸದ ಹಾಗೂ ಅಪೂರ್ಣ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅದಕ್ಕೆ ಅವಕಾಶ ಮಾಡಿಕೊಡದೇ ಸರಿಯಾಗಿ ಅರ್ಜಿ ಹಾಗೂ ದಾಖಲಾತಿ ಮಾಹಿತಿಯನ್ನು ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!