ಚಾಮರಾಜನಗರ.04.ಮೇ.25:-ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ನಾಯಕ ಜನಾಂಗದ ಯಜಮಾನರು ಮತ್ತು ಕುಲಸ್ಥರ ನೇತೃತ್ವದಲ್ಲಿ ಶ್ರೀರಾಮ ಪಟ್ಟಾಭಿಷೇಕ ಹಾಗೂ ರಾಮನವಮಿ ಜಯಂತಿಯನ್ನು ಶ್ರೀವಾಲ್ಮೀಕಿ ಸಮುದಾಯ ಭವನದಲ್ಲಿ ಭಾನುವಾರ ಆಚರಿಸಲಾಯಿತು.
ರಾಮ,ಸೀತೆ, ಲಕ್ಷ್ಮಣ, ಆಂಜನೇಯ ಭಾವಚಿತ್ರಕ್ಕೆ ವಿವಿಧ ಬಗೆಯ ಪುಷ್ಪಗಳಿಂದ ನಮನ ಸಲ್ಲಿಸಿ ರಾಮಪಠಣವನ್ನು ಮಾಡಿದರು.
ಶ್ರೀರಾಮರ ತತ್ವ ಮತ್ತು ಆದರ್ಶಗಳು ಪ್ರಸ್ತುತ ಸನ್ನಿವೇಶಕ್ಕೆ ಅವಶ್ಯಕವಾಗಿದೆ. ವಾಲ್ಮೀಕಿ ಋಷಿಮುನಿಗಳು ರಾಮಾಯಣವನ್ನು ಬರೆದು ಹಿಂದೂ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಅಗ್ರಗಣ್ಯಸ್ಥಾನವನ್ನು ಪಡೆದಿದ್ದಾರೆಂದು ಯಜಮಾನರಾದ ನಾಗ ರವರು ತಿಳಿಸಿದರು.
ಕೆಸ್ತೂರು ಗ್ರಾಮದ ಎಲ್ಲಾ ಸಮುದಾಯದ ಯಜಮಾನರು ಮತ್ತು ಮುಖಂಡರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ರಾಮನವಮಿ ಹಿನ್ನಲೆ ಗ್ರಾಮದಲ್ಲಿ ಇಂದು ಅನ್ನ ಸಂತರ್ಪನೆ ಹಾಗೂ ರಾಮ, ಸೀತೆ,ಲಕ್ಷ್ಮಣ ಅಂಜನೇಯ ರವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ ಯಜಮಾನರಾದ ಮಣಿಕಂಠ, ನಾಗ,ಪಿ,ಮುಖಂಡರಾದ ವೀರನಾಯ್ಕ, ಚಿನ್ನಸ್ವಾಮಿ ನಾಯ್ಕ, ನಾರಾಯಣಸ್ವಾಮಿ, ಶಿವಣ್ಣನಾಯಕ, ಚಿಕ್ಕ ಯಜಮಾನ ನಾಗ, ವೀರಭದ್ರನಾಯಕ, ರವಿ ಎಚ್, ಉಪ್ಪಿ, ನಿಂಗು,ಮಹೇಶ್, ನಿಂಗರಾಜು,
ವಿವಿಧ ಸಮುದಾಯದ ಯಜಮಾನರು ಮುಖಂಡರು ಹಾಜರಿದ್ದರು.
ವರದಿ.ಪ್ರಸನ್ನಕುಮಾರ್ ಕೆಸ್ತೂರು
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…