ಕೆಸ್ತೂರಿನ ದಲಿತ ನೀಲಗಾರರು ಕಂಡಾಯ ಹೊತ್ತಿ ಸಮಾನತೆ ಸಾರಿದರು.

ಯಳಂದೂರು.04.ಮಾರ್ಚ.25:- ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ದಲಿತ ನೀಲಗಾರರು ತಾಲ್ಲೂಕಿನಲ್ಲಿಯೇ ಮೊದಲ ಬಾರಿಗೆ  ಕಂಡಾಯವನ್ನು ಹೊರುವ ಮೂಲಕ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದೆ.

ಗ್ರಾಮದ ನಂಜುಂಡಸ್ವಾಮಿರವರು ತಮ್ಮ ಮಗನಿಗೆ ನೀಲಗಾರರನ್ನು ಮಾಡಲು ಕುರುಬನ ಕಂಡಾಯವನ್ನು ತರಸಿ ಕಾರ್ಯಕ್ರಮ ಮಾಡುವಾಗ ಗ್ರಾಮದ ದಲಿತ ನೀಲಗಾರರು ಕಂಡಾಯವನ್ನು ಹೊತ್ತಿ ಸಮಾನತೆ ಸಾರಿದರು.

ಕಂಡಾಯ ಹೊರುವಂತಹ ಪದ್ದತಿ ಕುರುಬ ಸಮುದಾಯ, ಲಿಂಗಾಯತರು, ನಾಯಕರಿಗೆ ಮಾತ್ರ ಮೀಸಲಾಗಿತ್ತು ಈ ವಿಷಯವನ್ನು ದಲಿತ ಮುಖಂಡರು ಜನಪ್ರತಿನಿಧಿಗಳು ಚರ್ಚಿಸಿ ಕುರುಬನ ಕಟ್ಟೆ ಕ್ಷೇತ್ರದ  ಧರ್ಮಾಧಿಕಾರಿ ವರುಣರಾಜೇ ಅರಸು ಸಮ್ಮುಖದಲ್ಲಿ ಚರ್ಚಿಸಿ ನಂತರ ಕಳದೆ ವರುಷ ಸಿದ್ದಯ್ಯನಪುರದಲ್ಲಿ ದಲಿತ ನೀಲಗಾರರು ಚಾಮರಾಜನಗರ ಜಿಲ್ಲೆಯಲ್ಲಿಯೇ ಮೊಟ್ಟಮೊದಲು ಕಂಡಾಯಹೊತ್ತು ಇತಿಹಾಸ ಮಾಡಿದರು.

ಅದೇ ರೀತಿ ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಯಜಮಾನರುಗಳು ಧರ್ಮಾಧಿಕಾರಿ ವರುಣರಾಜೇ ಅರಸು ರವರ ಬಳಿ ಹೋಗಿ ನಮ್ಮ ಗ್ರಾಮದಲ್ಲಿಯೂ ದಲಿತ ನೀಲಗಾರರು ಕಂಡಾಯ ಹೊರುವುದಕ್ಕೆ ಅನುಮತಿ ಕೇಳಿದಾಗ ಮಂಟೇಸ್ವಾಮಿ ಪರಂಪರೆ ಸಮಾ‌ನತೆಯಿಂದ ಕೂಡಿದೆ ಯಾವುದೇ ತಾರತಮ್ಯವಿಲ್ಲ ದಲಿತರು ಕೂಡ ಹೊರಬಹುದು ಎಂದು ತಿಳಿಸಿದರು.


ಈ ಹಿನ್ನಲೆ ಮಂಗಳವಾರ ಕುರುಬನ ಕಟ್ಟೆ ಕ್ಷೇತ್ರ ಕಂಡಾಯವನ್ನು ಕೆಸ್ತೂರು  ಗ್ರಾಮದ ದಲಿತ ನೀಲಗಾರರು ಹೊತ್ತಿ ಸಮಾನತೆಯನ್ನು ಸಾರಿ ಯಳಂದೂರು ತಾಲ್ಲೂಕಿನಲ್ಲಿಯೇ ಮೊಟ್ಟ ಮೊದಲು ದಲಿತ ನೀಲಗಾರರು ಕಂಡಾಯವನ್ನು ಹೊತ್ತಿ ಐತಿಹಾಸಿಕ ಘಟನೆ ಸಾಕ್ಷಿಯಾಗಿದೆ.

ದಲಿತ ನೀಲಗಾರರು ಮಾತನಾಡಿ ಮೈಸೂರು ಚಾಮರಾಜನಗರ ಮಂಡ್ಯ ಕನಕಪುರ ಬೆಂಗಳೂರು ಭಾಗದಲ್ಲಿ  ಮಂಟೇಸ್ವಾಮಿ ಸಿದ್ದಪ್ಪಾಜ್ಜಿ, ರಾಚಪ್ಪಾಜ್ಜಿ, ಚೆನ್ನಾಜಮ್ಮ, ದೊಡ್ಡಮ್ಮ ತಾಯಿ ರವರ ಪರಂಪರೆ ದೊಡ್ಡದಾಗಿದೆ.

ಇವರು ಅಂದಿ‌ನ ಕಾಲದಲ್ಲಿ ಸಮ ಸಮಾಜ ನಿರ್ಮಾಣ ಮಾಡಲು ಕ್ರಾಂತಿ ಮಾಡಿದಂತಹ ಮಹಾನಿಯರ್ ಇವರ ತತ್ವ ಸಿದ್ದಾಂತಗಳನ್ನು ನೀಲಗಾರರು ಜನರಿಗೆ ತಿಳಿಸುವಂತಹ ಕಾಯಕವನ್ನು ಮಾಡಿಕೊಂಡು ಬಂದಿದ್ದಾರೆ.

ಕುರುಬನ ಕಟ್ಟೆ ಕ್ಷೇತ್ರದ ಲಿಂಗಯ್ಯ ಮತ್ತು ಚೆನ್ನಯ್ಯ ನವರ ಕಂಡಾಯವನ್ನು ಮಂಟೇಸ್ವಾಮಿ ಪರಂಪರೆಯ ಮೂಲಾಧಾರವಾಗಿರುವುದರಿಂದ ಈ ಕಂಡಾಯವನ್ನು ದಲಿತರಾದ ನಾವು ಹೊತ್ತು ಮೆರವಣಿಗೆ ಮಾಡಲಾಗಿದೆ ನಮಗೆ ತುಂಬಾ ಸಂತೋಷವಾಗುತ್ತದೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಗ್ರಾಮದ ಯಜಮಾನರಾದ ನಾಗರಾಜು ಬಿ, ಕುಮಾರ್, ಜಯರಾಜ್, ದೊರೆಸ್ವಾಮಿ, ಮುಖಂಡರಾದ ಸಿದ್ದರಾಜು, ನಾಗರಾಜು ಎಂ, ಮಧು ಕೆಸ್ತೂರು, ಸಿದ್ದಯ್ಯ ರಾಮಕೃಷ್ಣ, , ಗ್ರಾಪಂ ಸದಸ್ಯರಾದ ಗುರುಲಿಂಗಯ್ಯ,  ಪ್ರಸಾದ್, ಮಹೇಂದ್ರ, ಅಂಬೇಡ್ಕರ್ ಸಂಘದ ಅಧ್ಯಕ್ಷ ಸಚಿನ್, ಅಂಬೇಡ್ಕರ್ ಸಂಘದ ಪದಾಧಿಕಾರಿಗಳಾದ ಸಂಜಯರಾಜ್ ಜೆ. ಕಿರಣ್, ನಂಜಯ್ಯ, ರಾಜು ಹಾಗೂ ಗ್ರಾಮದ ನೀಲಗಾರರು ಹಾಜರಿದ್ದರು .

_ G Prasankumar Kittur

prajaprabhat

Recent Posts

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

5 hours ago

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…

6 hours ago

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

10 hours ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

19 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

20 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

20 hours ago