ಚಾಮರಾಜನಗರ.06.ಏಪ್ರಿಲ್.25:-ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಅದಿಜಾಂಬರವರ ಬಡಾವಣೆಯಲ್ಲಿ ಶನಿವಾರ ಕುರುಬನ ಕಟ್ಟೆ ಕಂಡಾಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ಎರಡು ವರುಷಕ್ಕೊಮ್ಮೆ ಅದಿಜಾಂಬವರ ಬಡಾವಣೆಯಲ್ಲಿ ಕುರುಬನ ಕಟ್ಟೆಯ ಚೆನ್ನಯ್ಯ, ಲಿಂಗಯ್ಯರವರ ಕಂಡಾಯವನ್ನು ತರಿಸಿ ಹಬ್ಬವನ್ನು ಆಚರಿಸಲಾಗುತ್ತದೆ.
ಶನಿವಾರ ರಾತ್ರಿ ಗ್ರಾಮದ ಈಶ್ವರ ದೇವಾಲಯದಲ್ಲಿ ಕಂಡಾಯಗಳನ್ನು ಶುಚ್ಚಿಗೊಳಿಸಿ ಹೊಂಬಾಳೆ, ವಿವಿಧ ಬಗೆಯ ಹೂಗಳಿಂದ ಶೃಂಗಾರಗೊಳಿಸಿ ಧೂಪ ದೀಪಗಳಿಂದ ಪೂಜೆ ಸಲ್ಲಿಸಿದರು.
ನಂತರ ಮಾರಿಗುಡಿ, ಮಂಟೇಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮುಖ್ಯ ರಸ್ತೆಯ ಮೂಲಕ ಅದಿಜಾಂಬರವರ ಬಡಾವಣೆವರೆಗೆ ಮಂಟೇಸ್ವಾಮಿ ಕಂಡಾಯಗಳನ್ನು ಮಂಗಳವಾದ್ಯ ಮತ್ತು ತಮಟೆ ಸದ್ದಿನೊಂದಿಗೆ ಮೆರವಣಿಗೆ ಮಾಡಲಾಯಿತು.
ರಸ್ತೆ ಉದ್ದಕ್ಕೂ ಹೆಂಗಳಿಯರು ನೀರು ಹಾಕಿ ರಂಗೋಲಿಗಳನ್ನು ಬಿಡಿಸಿದರು. ಹೂ ಹಣ್ಣು ಕಾಯಿ ಪೂಜೆಗಳನ್ನು ಮಾಡಿ ದೇವರನ್ನು ಸ್ಮರಿಸಿದರು.
ಗ್ರಾಮವು ಸಂಪೂರ್ಣ ವಿವಿಧ ಬಗೆ ವಿದ್ಯುತ್ ದೀಪಗಳಿಂದ ಹಾಗೂ ಬಾಳೆ ಮಾವಿನ ತೋರಣಗಳಿಂದ ಸಿಂಗಾರಗೊಂಡಿತು.
ಮರಪ್ಪ ಮಾತನಾಡಿ ಮಂಟೇಸ್ವಾಮಿ ಸಿದ್ದಪ್ಪಾಜ್ಜಿ ರಾಚಪ್ಪಾಜ್ಜಿ, ಚೆನ್ನಾಜಮ್ಮ, ದೊಡ್ಡಮ್ಮತಾಯಿ ರವರ ಪರಂಪರೆಯು 16 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿ ಸಮ ಸಮಾಜವನ್ನು ನಿರ್ಮಾಣ ಮಾಡಬೇಕೆಂದು ಹೋರಾಡಿದರು. ಇಂದಿಗೂ ಕೂಡ ನೀಲಗಾರರು ಈ ಸಿದ್ದಾಂತವನ್ನು ಜನಪದ ಮೂಲಕ ಜನಿರಿಗೆ ತಿಳಿಸಿದ್ದಾರೆ.
ಮಂಟೇಸ್ವಾಮಿ ಮತ್ತು ಮಹದೇಶ್ವರ ಮಹಾ ಕಾವ್ಯವು ಉತ್ತಮವಾದದ್ದು ಎಂದರು
ಈ ಸಂದರ್ಭದಲ್ಲಿ ಅದಿಜಾಂಬವರ ಸಮುದಾಯ ಯಜಮಾನರಾದ ಮರಪ್ಪ, ಚಾಮರಾಜು, ಮಹೇಶ್,ಚಾಮರಾಜ್, ನಿಂಗರಾಜು,ಸೋಮರಾಜ್, ನಿಂಗಣ್ಣ, ಗವಿನಿಂಗಯ್ಯ, ನೀಲಗಾರರು ಹಾಗೂ ಎಲ್ಲಾ ಜನಾಂಗದ ಯಜಮಾನರು ಮುಖಂಡರು ಹಾಜರಿದ್ದರು
ವರದಿಗಾರ: ಜಿ ಪ್ರಸನ್ನ ಕುಮಾರ್ ಕಿತ್ತೂರು
ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್ಲೈನ್ ಮೂಲಕವೇ ಕೆಎಸ್ಪಿ ವೆಬ್ಸೈಟ್ನಲ್ಲಿ ಹೋಗಿ e-Lost Reports…
ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…
ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…
ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…
ಗುಜರಾತ್ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…