ಕೆಸ್ತೂರು ಪ್ರೌಢಶಾಲೆಯ ವಿದ್ಯಾರ್ಥಿ ಧನುಷ್ ರಾಜ್ಯಪಾಲರಿಂದ ಪ್ರಶಸ್ತಿ ಪಡೆದರು.

ಯಳಂದೂರು.19.ಮಾರ್ಚ.25:-  ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ಚಾಮರಾಜನಗರ ಜಿಲ್ಲಾ ಸಂಸ್ಥೆ ಯಳಂದೂರು ಸ್ಥಳೀಯ ಸಂಸ್ಥೆ ಕೆಸ್ತೂರು ಸರ್ಕಾರಿ ಪ್ರೌಢಶಾಲೆ  12 ಸ್ಕೌಟ್ ವಿದ್ಯಾರ್ಥಿಗಳು ಕಳೆದ ಮೂರು ವರ್ಷಗಳಿಂದ ಸ್ಕೌಟ್  ಮಾಸ್ಟರ್ ಕುಮಾರ್ ನಾಯಕ್ ರವರ ಮಾರ್ಗದರ್ಶನದಲ್ಲಿ  ವಿವಿಧ ಸ್ಕೌಟ್ ಚಟುವಟಿಕೆಗಳಲ್ಲಿ ಭಾಗವಹಿಸಿ ನಂತರ
2024 25 ನೇ ಸಾಲಿನಲ್ಲಿ ರಾಜ್ಯಪಾಲ ಪುರಸ್ಕಾರ ಪರೀಕ್ಷೆಯಲ್ಲಿ ಭಾಗವಹಿಸಿ ಎಲ್ಲಾ ವಿದ್ಯಾರ್ಥಿಗಳು ರಾಜ್ಯಪಾಲರ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಇದೇ ಮಾರ್ಚ್ 17  ರಂದು ರಾಜ ಭವನದ ಗಾಜಿನ ಅರಮನೆ ಬೆಂಗಳೂರಿನಲ್ಲಿ ನಡೆದ ರಾಜ್ಯಪಾಲರ ಪುರಸ್ಕಾರ ಅವಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಕೆಸ್ತೂರು ಸರಕಾರಿ ಪ್ರೌಢಶಾಲೆ ಧನುಷ್ ಎಸ್ 10ನೇ ತರಗತಿ ವಿದ್ಯಾರ್ಥಿಯು ಖುದ್ದಾಗಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್   ರವರಿಂದ ರಾಜ್ಯಪಾಲ ಪುರಸ್ಕಾರ ಅವಾರ್ಡನ್ನು ಪಡೆದಿರುತ್ತಾರೆ.

ಉಳಿದ 11 ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದಲ್ಲಿ ರಾಜ್ಯಪಾಲ ಪುರಸ್ಕಾರ ಅವಾರ್ಡ್ ಅನ್ನು ಜಿಲ್ಲಾಧಿಕಾರಿ ಅವರಿಂದ ನೀಡಲಿದ್ದಾರೆ. ಈ ವಿದ್ಯಾರ್ಥಿಗಳ ಶಿಸ್ತು, ಸಂಯಮ , ದೇಶಪ್ರೇಮ, ಪರಿಸರ ಕಾಳಜಿ, ಸಾಮಾಜಿಕ ಸೇವೆ, ಹಿರಿಯರ ಬಗ್ಗೆ  ಇರುವ ಗೌರವ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಹೇಳಲು ಹರ್ಷವಾಗುತ್ತದೆ.

ಈ ಮೂಲಕ ವಿದ್ಯಾರ್ಥಿಗಳು ತಾವು ಓದಿದ ಶಾಲೆಗೆ ಗುರುಗಳಿಗೆ ತಮ್ಮ ಪೋಷಕರಿಗೆ ಮತ್ತು ತಮ್ಮ ಗ್ರಾಮಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಇವರು ಹೀಗೆ ಸ್ಕೌಟ್ ಚಳುವಳಿಯಲ್ಲಿ ಮುಂದುವರಿಯಲಿ  ಎಂದು ಹಾರೈಸುವವರು ಮುಖ್ಯ ಶಿಕ್ಷಕರಾದ ಶ್ರೀ ಉಮಾಶಂಕರ್ ರವರು, ಎಲ್ಲಾ ಶಿಕ್ಷಕರು, ಪೋಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಶುಭಕೋರಿದರು.

_ಜಿ ಪ್ರಸನ್ನಕುಮಾರ್ ಕಿತ್ತೂರು

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

3 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

3 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

4 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

4 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

6 hours ago