ಕೆಸ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ.!



ಚಾಮರಾಜಮಗರ.19.ಫೆ.25:- ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಎಸ್ ಡಿ ಎಂ ಸಿ ಅಧ್ಯಕ್ಷ ಸಿದ್ದರಾಜು ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು.

ನಮ್ಮ ಕೆಸ್ತೂರು ಸರ್ಕಾರಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿಯೇ ಮಾದರಿ ಶಾಲೆಯಾಗಿದೆ. ಪ್ರತಿವರ್ಷ ಉತ್ತಮ ಫಲಿತಾಂಶವನ್ನು ನೀಡುತ್ತ ಬಂದಿದೆ.

ಗುಣಮಟ್ಟ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತದೆ.

ವಿದ್ಯಾರ್ಥಿಗಳು ಇಂತಹ ವಸ್ತು ಪ್ರದರ್ಶನ ಆಯೋಜಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರುತ್ತಿದ್ದಾರೆ.

ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಉತ್ತಮವಾಗಿದೆ.

ಇಪ್ಪತ್ತೊಂದನೇ ಶತಮಾನವನ್ನು ವೈಜ್ಞಾನಿಕ ಯುಗವೆಂದು ಕರೆಯಲಾಗುತ್ತದೆ. ಅಂದಿನ ಕಾಲದಲ್ಲೇ ಭಗವನ್ ಬುದ್ದರವರು ಹೇಳಿದ್ದಾರೆ ಪ್ರತಿಯೊಬ್ಬರೂ ಕೂಡ ವೈಜ್ಞಾನಿಕ ಮನೋಭಾವನೆ ಬೆಳಸಿಕೊಳ್ಳಿ ಎಂದು ತಿಳಿಸಿದ್ದಾರೆ

ಸಾಧನೆ ಮಾಡಿದರೆ ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ ಎಂದರು .

ಈ ವಸ್ತು ಪ್ರದರ್ಶನ ವೀಕ್ಷಿಸಲು ಕಟ್ನವಾಡಿ, ಕೆ ಹೊಸೂರು, ಬಸವಪುರ, ಮಲ್ಲಿಗಹಳ್ಳಿ, ಕೆಸ್ತೂರು ೧ ಮತ್ತು ೨ ಶಾಲೆಯ ವಿದ್ಯಾರ್ಥಿಗಳು ಆಗಮಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷ ಕುಮಾರ್,  ಶಾಲೆಯ ಮುಖ್ಯೋಪಾಧ್ಯಾಯರಾದ ಉಮಶಂಕರ್, ಎಸ್ ಡಿ ಎಂ ಸಿ ಸದಸ್ಯರಾದ ಪರಶಿವಮೂರ್ತಿ,   ಹಾಗೂ ಎಲ್ಲಾ  ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು

Repoter: G.Prasa Kumar kittur

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

23 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

27 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

34 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

36 minutes ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

38 minutes ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

43 minutes ago