09/06/2025 6:39 AM

Translate Language

Home » ಲೈವ್ ನ್ಯೂಸ್ » ಕೆ.ಸಿ.ಇಟಿ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಸಿಬ್ಬಂದಿಯಿoದ ತಡೆ:

ಕೆ.ಸಿ.ಇಟಿ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಸಿಬ್ಬಂದಿಯಿoದ ತಡೆ:

Facebook
X
WhatsApp
Telegram

* ಕೆ.ಸಿ.ಇಟಿ ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಸಿಬ್ಬಂದಿಯಿoದ ತಡೆ:

* 24 ಗಂಟೆಯೊಳಗೆ ವರದಿ ಸಲ್ಲಿಸಲು ಸಚಿವರು ಸೂಚನೆ

ಬೀದರ.19.ಏಪ್ರಿಲ್.25: – ಬೀದರ ನಗರದ ಚೌಬಾರ ನಿವಾಸಿ ಸುಚಿವ್ರತ್ ಅವರು ಕೆ.ಸಿ.ಇಟಿ ಗಣಿತ ವಿಷಯದ ಪರೀಕ್ಷೆ ಬರೆಯಲು ಗುಂಪಾ ಸಮೀಪದ ಸಾಯಿ ಸ್ಪೂರ್ತಿ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಹೋಗಿದ್ದಾಗ, ಜನಿವಾರ ತೆಗೆದಿಡದ ಹೊರತು ಪರೀಕ್ಷಾ ಕೊಠಡಿಗೆ ಬಿಡುವುದಿಲ್ಲ ಎಂದು ಸಿಬ್ಬಂದಿ ತಡೆ ಒಡ್ಡಿದ್ದು, ಆ ವಿದ್ಯಾರ್ಥಿ ಪರೀಕ್ಷೆ ಬರೆಯದೆ ಮನನೊಂದು ಮನೆಗೆ ತೆರಳಿದ್ದಾನೆ.

ಆ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯವೇ ನಾಶವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಕೂಡಲೇ ಘಟನೆಯ ಕುರಿತಂತೆ ಉಪವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ನಿಯಮಾನುಸಾರ ಶಿಸ್ತು ಕ್ರಮವಹಿಸಲು ಮತ್ತು 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸಲು ಅರಣ್ಯ, ಜೀವಿಶಾತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!