ಬೆಂಗಳೂರು.20.ಮಾರ್ಚ.25:- ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕೆ-ಸೆಟ್ ಪರೀಕ್ಷೆ-2024 ಉತ್ತೀರ್ಣರಾದ ಅಭ್ಯರ್ಥಿಗಳು ಏಪ್ರಿಲ್ 4 ರಂದು ಮೂಲ ದಾಖಲೆಗಳೊಂದಿಗೆ ಪರಿಶೀಲನೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ರಲ್ಲಿ ಅರ್ಹರಾದ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳಿಗೆ ದಿನಾಂಕ 13.01.2025 ರಿಂದ 20.01.2025 ರ ವರೆಗೆ ಮತ್ತು 31.01.2025 ರಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಲಾಗಿತ್ತು.
ಆದರೆ ಕೆಲವು ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ.
13.01.2025 ರಿಂದ 20.01.2025 ರವರೆಗೆ ಮತ್ತು 31.01.2025 ರಂದು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಲಾದ ಕೆಸೆಟ್-2024 ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿ ಹೆಸರಿದ್ದು ಗೈರುಹಾಜರಾದ ಅಭ್ಯರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಂಡು ಫಲಿತಾಂಶ ಘೋಷಣೆಗೊಂಡಿರುವ ಅರ್ಹ ಅಭ್ಯರ್ಥಿಗಳು ಮಾತ್ರ ದಿನಾಂಕ 04.04.2025 ರಂದು ಬೆಳಿಗ್ಗೆ 10.00 ಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗತಕ್ಕದ್ದು.
ಶೈಕ್ಷಣಿಕ ಅರ್ಹತೆ ಮತ್ತು ಮೀಸಲಾತಿ ಸಂಬಂಧಿಸಿದ ಎಲ್ಲಾ ನಿಬಂಧನೆಗಳು ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಸಲ್ಲಿಸಬೇಕಾದ ದಾಖಲಾತಿ ಪ್ರಮಾಣ ಪತ್ರಗಳ ವಿವರಗಳಿಗೆ ದಿನಾಂಕ 13.07.2024 ರ ಅಧಿಸೂಚನೆಯನ್ನು ಮತ್ತು ದಿನಾಂಕ 09.01.2025 ರ ಮಾರ್ಗಸೂಚಿಯನ್ನು ಓದಿಕೊಳ್ಳಲು ಸೂಚಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದ ಅಭ್ಯರ್ಥಿಗಳು, ತಮ್ಮ ಮೀಸಲಾತಿಗೆ ಸಂಬಂಧಿಸಿದಂತೆ ನಿಗದಿತ ನಮೂನೆಯಲ್ಲಿ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ಪ್ರವರ್ಗದ ಪ್ರಮಾಣ ಪತ್ರವನ್ನು ಸಲ್ಲಿಸತಕ್ಕದ್ದು.
ವಿವಾಹಿತ ಮಹಿಳಾ ಅಭ್ಯರ್ಥಿಗಳು (ಕೆಸೆಟ್-2024ರ ಅರ್ಜಿಯಲ್ಲಿ ವಿವಾಹಿತರೆಂದು ನಮೂದಿಸಿ 2ಎ, 2ಬಿ, 3ಎ, 3ಬಿ ಮೀಸಲಾತಿ ಕೋರಿರುವವರು) ತಮ್ಮ ಪತಿಯ ಹೆಸರಿನೊಂದಿಗೆ ಜಾರಿಯಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಮೂಲ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಸಲ್ಲಿಸಲು ಸೂಚಿಸಿದೆ.
ಸೂಚನೆ: 1. ಇದುವರೆಗೆ ದಾಖಲಾತಿ ಪರಿಶೀಲನೆ ಪೂರ್ಣಗೊಳ್ಳದ ಅಭ್ಯರ್ಥಿಗಳು ಅಗತ್ಯ ದಾಖಲೆಗಳು ಲಭ್ಯವಿದ್ದಲ್ಲಿ ಮಾತ್ರ ದಿನಾಂಕ 04.04.2025 ರಂದು ದಾಖಲಾತಿ ಪರಿಶೀಲನೆಗೆ ಹಾಜರಾಗತಕ್ಕದ್ದು.
2. ಅರ್ಹತಾ ಪಟ್ಟಿಯಲ್ಲಿ ಹೆಸರಿರುವ ಆದರೆ, ಸ್ನಾತಕೋತ್ತರ ಪದವಿ ಪೂರ್ಣಗೊಳ್ಳದ / ಎಲ್ಲಾ ವರ್ಷಗಳ /ಎಲ್ಲಾ ಸೆಮಿಸ್ಟರ್ಗಳ ಅಂಕಪಟ್ಟಿ ಲಭ್ಯವಿಲ್ಲದಿರುವ ಅಭ್ಯರ್ಥಿಗಳು ಮೂಲ ದಾಖಲಾತಿ ಪರಿಶೀಲನೆಗೆ ಹಾಜರಾಗುವ ಅಗತ್ಯತೆ ಇರುವುದಿಲ್ಲ. ಸದರಿ ಅಭ್ಯರ್ಥಿಗಳು ತಮ್ಮ ಸ್ನಾತಕೋತ್ತರ ಪದವಿ ಪೂರ್ಣಗೊಂಡ ನಂತರ ಎಲ್ಲಾ ವರ್ಷಗಳ / ಎಲ್ಲಾ ಸೆಮಿಸ್ಟರ್ಗಳ ಅಂಕ ಪಟ್ಟಿಗಳೊಂದಿಗೆ ಮೂಲ ದಾಖಲಾತಿ ಪರಿಶೀಲನೆಗೆ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಸೂಚಿಸಲ್ಪಡುವ ಮುಂಬರುವ ದಿನಾಂಕಗಳಂದು ಹಾಜರಾಗತಕ್ಕದ್ದು.
ದೂರವಾಣಿ: 080-23 564 583
ಸಹಾಯವಾಣಿ: 080-23 460 460.
ಇಮೇಲ್: keauthority-ka@nic.in
ವೆಬ್ಸೈಟ್: https://kea.kar.nic.in
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…