====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಕಲಬುರಗಿ.07.ಮಾರ್ಚ.25-ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲ ವಿದ್ಯಾರ್ಥಿಗಳು ಕೊಂಡೊಯ್ದರೆಂಬ ಕಾರಣಕ್ಕೆ ವಿದ್ಯಾರ್ಥಿಗಳ ಎರಡು ಗುಂಪುಗಳ ಮಧ್ಯೆ ಗುರುವಾರ ರಾತ್ರಿ ಹೊಡೆದಾಟ ನಡೆದಿದೆ. ಶುಕ್ರವಾರ ವಿಶ್ವವಿದ್ಯಾಯ ಕ್ಯಾಂಪಸ್ನಲ್ಲಿ ತುಂಬಾ ಬೀಸಿ ವಾತಾವರಣ ಇತ್ತು.
ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿರುವ ಮುಖಂಡರು ಚಪಾತಿಗಳನ್ನು ಕೊಂಡೊಯ್ದಿದ್ದನ್ನು ಇತರೆ ವಿದ್ಯಾರ್ಥಿಗಳು ಆಕ್ಷೇಪಿಸಿದರು. ಇದರಿಂದಾಗಿ ಪರಸ್ಪರ ಹಲ್ಲೆ ನಡೆದಿದ್ದು, ಕೆಲ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಘಟನೆಯ ಗಂಭೀರತೆ ಅರಿತ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ ಗೋಪಿ ಹಾಗೂ ಆಳಂದ ಸಿಪಿಐ ಪ್ರಕಾಶ ಯಾತನೂರ ಅವರು ವಿಶ್ವವಿದ್ಯಾಲಯ. ಕ್ಯಾಂಪಸ್ಗೆ ದೌಡಾಯಿಸಿದ್ದರು. ಈ ಸಂದರ್ಭದಲ್ಲಿ ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರಿಂದ ಅವರನ್ನು ಚದುರಿಸಲು ಲಾಠಿ ಬೀಸಿದರು ಎಂದು ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮಧ್ಯಾಹ್ನವೂ ವಿಶ್ವವಿದ್ಯಾಲಯ ಗ್ರಂಥಾಲಯದ ಬಳಿ ಮತ್ತೆ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಕೆಲ ವಿದ್ಯಾರ್ಥಿಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೊತ್ತಾಗಿದೆ.
ಬಿಹಾರ. ಉತ್ತರ ಪ್ರದೇಶ, ಮೂಲದ ವಿದ್ಯಾರ್ಥಿಗಳು ಒಂದೆಡೆಯಾದರೆ ಕರ್ನಾಟಕ, ತಮಿಳುನಾಡು.ಕೇರಳ, ಆಂಧ್ರಪ್ರದೇಶ, ವಿದ್ಯಾರ್ಥಿಗಳು ಮತ್ತೊಂದು ಗುಂಪಿನಲ್ಲಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.
ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಯುಕೆ ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ ಅವರನ್ನು ಸಂಪರ್ಕಿಸಿದರೂ ಅವರು ಸಂಪರ್ಕಕ್ಕೆ ಲಭ್ಯರಾಗಲಿಲ್ಲ.
ಊಟದ ವೇಳೆ ಮನಸ್ತಾಪ ಉಂಟಾಗಿ ವಿದ್ಯಾರ್ಥಿಗಳ ಮಧ್ಯೆ ಗಲಾಟೆಯಾಗಿತ್ತು. ದೂರು ನೀಡಲು ಯಾರೂ ಬಂದಿಲ್ಲ. ತಾವೇ ವಿವಾದ ಇತ್ಯರ್ಥ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ
-ಅಡ್ಡೂರು ಶ್ರೀನಿವಾಸುಲು ಪೊಲೀಸ್ ವರಿಷ್ಠಾಧಿಕಾರಿ ಕಲಬುರಗಿ
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================