ಕುಶಾಲನಗರ: 17.ಫೆ.25:- ಕುಶಾಲನಗರ ತಾಲ್ಲೂಕಿನ ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರ ದಲ್ಲಿ 2 ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಆರಂಭಗೊಂಡ ಪ್ರತ್ಯೇಕ ಕೊಡಗು ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಸರ್ಕಾರವನ್ನು ಒತ್ತಾಯಿಸಲು ಭಾನುವಾರ ನಡೆದ ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ. ಪ್ರಗತಿಪರ ಸಂಘಟನೆಗಳು.ವಿದ್ಯಾರ್ಥಿಯ.ಪಾಲಕರು ಸಭೆಯಲ್ಲಿ ಹೋರಾಟಕ್ಕೆ ನಿರ್ಣಯಿಸಲಾಗಿದೆ.
ನೂತನ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು. ಚಿಕ್ಕ ಅಳುವಾರ ಗ್ರಾಮದ ಅಳುವಾರಮ್ಮ ದೇವಾಲಯಸಮುದಾಯ ಭವನದಲ್ಲಿ ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಮಟ್ಟದಲ್ಲಿ ಹೋರಾಟ , ಸರ್ಕಾರಕ್ಕೆ ನಿಯೋಗ ತೆರಳುವುದು ಪಕ್ಷಾತೀತವಾ ಹೋರಾಟಕ್ಕೆ ಸಮಿತಿಯನ್ನು ರಚನೆ ಮಾಡಲಾಯಿತು.
ಗ್ಯಾರಂಟಿ ಅನುಷ್ಠಾನದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಸಚಿವ ಸಂಪುಟದ ಉಪಸಮಿತಿಯಲ್ಲಿ 9 ನೂತನ ವಿವಿಗಳನ್ನು ಮುಚ್ಚಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ವಿಶ್ವ ವಿದ್ಯಾಲಯ ಮುಂದುವರಿಸಬೇಕು.
ನೂರು ಎಕರೆ ಪ್ರದೇಶವನ್ನು ಹೊಂದಿದೆ. ತಾಂತ್ರಿಕ ಅಡಚಣೆ ಇಲ್ಲ. ಸೌಕರ್ಯ , ಮಾನದಂಡವನ್ನು ಹೊಂದಿದೆ. ಸಿಬ್ಬಂದಿ ನೇಮಕವಾಗಿದೆ. ಮಂಗಳೂರು ವಿವಿ ಯಿಂದ ಸಂಬಳ ಬರುತ್ತಿತ್ತು. ಸರ್ಕಾರದ ನೂತನ ಕುಲಪತಿ ಅನುದಾನವಿಲ್ಲದೆ ವಿವಿಯನ್ನು ಮುನ್ನಡೆಸುತ್ತಿದ್ದಾರೆ. ನಮ್ಮ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕೊಡಗು ವಿವಿ ಉಳಿಸಲು ಹೋರಾಟ ಅನಿವಾರ್ಯವಾಗಿದೆ ಎಂದರು.
ಸಮಾಜ ಸೇವಕ ನಾಪಂಡ ಮುತ್ತಪ್ಪ ಮಾತನಾಡಿ, ನೂತನ ವಿವಿಗಳಿಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಘೋಷಣೆ ಮಾಡಿಲ್ಲ. ಕೊಡಗು ವಿವಿಗೆ ₹3 ಕೋಟಿ ಅನುದಾನ ಬೇಕು. ಮೀನಾ ಮೇಷ ಎಣಿಸುತ್ತಿರುವುದು ಸರಿಯಲ್ಲ. ವಿವಿ ಮುಚ್ಚುವ ನಿರ್ಧಾರ ಕೈಬಿಡಬೇಕು ಎಂದರು.
ಸೆನೆಟ್ ಮಾಜಿ ಸದಸ್ಯ ಡಿ.ಆರ್.ಪ್ರೇಮ್ಕುಮಾರ್ ಮಾತನಾಡಿ, ಸರ್ಕಾರಿ ಜಾಗವನ್ನು ಕೆಲವು ವ್ಯಕ್ತಿಗಳು ಅತಿಕ್ರಮಣ ಮಾಡಲು ಯತ್ನಿಸಿದಾಗ ಸಂಘಟಿತ ಹೋರಾಟ ನಡೆಸಿ ಜಾಗವನ್ನು ಉಳಿಸಿದ್ದೇವೆ.ಇದೇ ಜಾಗದಲ್ಲಿ ಈಗ ಸ್ನಾತಕೋತ್ತರ ಕೇಂದ್ರ ಹಾಗೂ ಕೊಡಗು ವಿವಿ ಸ್ಥಾಪನೆಯಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಿದೆ ಎಂದರು.
ತೊರೆನೂರು ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಮಾತನಾಡಿ ಕೊಡಗು ವಿವಿ ಉಳಿಸಲು ಶಾಸಕರು ಹೆಚ್ಚಿನ ಒತ್ತು ನೀಡಬೇಕು ಎಂದರು. ಹೆಬ್ಬಾಲೆ ಗ್ರಾಮದ ಮುಖಂಡ ಎಚ್.ಕೆ.ನಟೇಶ್ ಗೌಡ ಮಾತನಾಡಿ, ಮಂಗಳೂರು ವಿವಿ ವ್ಯಾಪ್ತಿಗೆ ಮತ್ತೆ ಸೇರ್ಪಡೆ ಮಾಡಲು ಅವಕಾಶ ನೀಡಬಾರದು. ಸಂಘಟಿತ ಹೋರಾಟ ನಡೆಸಬೇಕು ಎಂದರು. ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ್ ಮಾತನಾಡಿ, ವಿವಿ ಉಳಿವಿಗಾಗಿ ಕೊಡಗು ಬಂದ್ ಕೂಡ ಮಾಡಲು ನಾವು ಸಿದ್ದರಾಗಿದ್ದೇವೆ ಎಂದರು.
ತೊರೆನೂರು ವಿ.ಎಸ್.ಎಸ್.ಎನ್.ನಿರ್ದೇಶಕ ಎಚ್.ಬಿ.ಚಂದ್ರಪ್ಪ ಮಾತನಾಡಿ, ಪಕ್ಷಾತೀತ ಹೋರಾಟ ನಡೆಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು.
ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಅಳುವಾರದಮ್ಮ ದೇವಾಲಯ ಸಮಿತಿ ಅಧ್ಯಕ್ಷ ರಮೇಶ್,ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶೋಭಾ ಪ್ರಕಾಶ್,ಉಪಾಧ್ಯಕ್ಷ ಬೇಬಿ,ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಅರುಣಾಕುಮಾರಿ, ಸದಸ್ಯರಾದ ಮಹಾದೇವ್,ನಿಂಗಜಮ್ಮ, ದೇವಾಲಯ ಸಮಿತಿ ಅಧ್ಯಕ್ಷ ಎ.ಎನ್.ರಮೇಶ್ ಮುಖಂಡರಾದ ಎಸ್.ಎಸ್.ಚಂದ್ರಶೇಖರ್, ರಮೇಶ್, ಟಿ.ಕೆ.ಪಾಂಡುರಂಗ, ಲೋಕೇಶ್ ಸಾಗರ್, ಗಣೇಶ್, ಲೋಕೇಶ್, ಟಿ.ಪಿ.ಜಗದೀಶ್, ರಮೇಶ್, ಶಾಂತಿ, ಗೀತಾಧರ್ಮಪ್ಪ, ಅಜ್ಜಳ್ಳಿ ರವಿ, ಬಸಪ್ಪ, ಶಿವಪ್ಪ, ಉಮೇಶ್, ವಿಎಸ್ಎಸ್ಎನ್ ನಿರ್ದೇಶಕ ಎಚ್.ಸಿ.ಮೂರ್ತಿ ಪಾಲ್ಗೊಂಡಿದ್ದರು.
‘ವಿದ್ಯಾರ್ಥಿ ಕೊರತೆ, ಸಂಬಳ ಇಲ್ಲ’
ಸ್ನಾತಕೋತ್ತರ ಕೇಂದ್ರದ ಹಳೆಯ ವಿದ್ಯಾರ್ಥಿ ಶರತ್ ಮಾತನಾಡಿ, ಸ್ನಾತಕೋತ್ತರ ಕೋರ್ಸ್ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ವಿದ್ಯಾರ್ಥಿ ಕೊರತೆಯಿಂದ ಕೆಲವು ಕೋರ್ಸ್ ಮುಚ್ಚಿ ಹೋಗಿವೆ. ಜೊತೆಗೆ ಅಲ್ಲಿನ ಅಧ್ಯಾಪಕರಿಗೆ, ಅತಿಥಿ ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗೆ ಸರಿಯಾಗಿ ವೇತನ ಬರುತ್ತಿಲ್ಲ. ಇದರಿಂದ ಮಂಗಳೂರು ವಿವಿಗೆ ಸೇರಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.
ಹಳೆಯ ವಿದ್ಯಾರ್ಥಿ ಆರನೇ ಹೊಸಕೋಟೆಯ ಮನು ಮಾತನಾಡಿ, ಕಾಯಂ ಪ್ರಾಧ್ಯಾಪಕ ಹಾಗೂ ಸಿಬ್ಬಂದಿ ಇಲ್ಲ. ಅನೇಕ ಕೊರತೆಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಈಗಾಗಲೇ ಮೂರು, ನಾಲ್ಕು ಕೋರ್ಸ್ ಮುಚ್ಚಿವೆ.
ರಾಜ್ಯಶಾಸ್ತ್ರ ವಿಭಾಗ ಉಳಿಸಲು ಶತಪ್ರಯತ್ನ ಮಾಡಿದ್ದೇವೆ. ಪದವಿ ಕಾಲೇಜುಗಳಿಗೆ ಹೋಗಿ ವಿದ್ಯಾರ್ಥಿಗಳನ್ನು ಮನವೊಲಿಸುವ ಕೆಲಸ ಮಾಡಿದ್ದೇವೆ ಎಂದರು.
ಕುಶಾಲನಗರ ತಾಲೂಕಿನ ಕೊಡಗು ವಿಶ್ವವಿದ್ಯಾಲಯ ಉಳಿಸಲು ವಿದ್ಯಾರ್ಥಿಯಗಳ ವಿವಿಧ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟಕ್ಕೆ ನಿರ್ಣಯಿಸಲಾಗಿದೆ
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…