ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ

ಕೊಪ್ಪಳ.30.ಜೂನ.25:- ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿರದ ರಾಜಕೀಯ ಪಕ್ಷದ ವಿಚಾರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ಜೂನ್ 26ರ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಪ್ರಕರಣ 29(ಎ)ರಡಿ ರಾಜಕೀಯ ಪಕ್ಷಗಳು ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ದೇಶಾದ್ಯಂತ ಚಾಲ್ತಿ ಇಲ್ಲದ ಅಥವಾ ವಿಳಾಸ ಪತ್ತೆ ಹಚ್ಚಲು ಸಾಧ್ಯವಿಲ್ಲದ 345 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ತೆಗೆದು ಹಾಕಲು ಈ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುತ್ತದೆ.

ಅದರಂತೆ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರು ಜೂ. 27ರ ಪತ್ರದ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ನೋಂದಣಿಯಾಗಿ ಚಾಲನೆಯಲ್ಲಿ ಇರದ ಸಾಮಾನ್ಯ ಜನತಾ ಪಾರ್ಟಿ(ಲೋಕ ತಾಂತ್ರಿಕ) ಕ್ಕೆ ಸಂಬಂಧಿಸಿದಂತೆ, ಈ ಪಕ್ಷದ ವತಿಯಿಂದ 2019ರ ನಂತರ ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭೆ, ವಿಧಾನಸಭೆ ಹಾಗೂ ಉಪ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯು ಸ್ಪರ್ಧಿಸದೇ ಇರುವ ಹಿನ್ನಲೆಯಲ್ಲಿ ಪ್ರಜಾ ಪ್ರಾತಿನಿಧ್ಯಕಾಯ್ದೆ 1951ರಡಿಯಲ್ಲಿ ನೋಂದಣಿಯಾದ ರಾಜಕೀಯ ಪಕ್ಷದ ಪಟ್ಟಿಯಿಂದ ತೆಗೆದು ಹಾಕಲು ಕಾರಣ ಕೇಳುವ ನೋಟಿಸನ್ನು ಜಾರಿಗೊಳಿಸಿರುತ್ತಾರೆ.


ಆದ್ದರಿಂದ, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ “ಸಾಮಾನ್ಯ ಜನತಾ ಪಾರ್ಟಿ(ಲೋಕತಾಂತ್ರಿಕ)ಯ ಅಧಿಕೃತ ಪ್ರತಿನಿಧಿಯು ಇಚ್ಛಿಸಿದಲ್ಲಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ, ಬೆಂಗಳೂರು ಇವರಿಗೆ 2025ರ ಜುಲೈ 18 ರೊಳಗಾಗಿ ತಮ್ಮ ಲಿಖಿತ ಮನವಿಯನ್ನು ಸಲ್ಲಿಸಬಹುದು. ಪಕ್ಷದ ಪರವಾಗಿ ಮನವಿಯನ್ನು ಸಲ್ಲಿಸುವವರು ಪಕ್ಷದ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳ ಪ್ರಮಾಣ ಪತ್ರ ಹಾಗೂ ಇತರೆ ದಾಖಲೆಗಳೊಂದಿಗೆ ಮನವಿಯನ್ನು ಸಲ್ಲಿಸಬೇಕು.


ಈ ರಾಜಕೀಯ ಪಕ್ಷದ ವಿಚಾರಣೆಯನ್ನು ಜುಲೈ 18ರಂದು ನಿಗದಿಪಡಿಸಲಾಗಿದ್ದು, ವಿಚಾರಣೆಗೆ ಪಕ್ಷದ ಮುಖ್ಯಸ್ಥರು/ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಬೇಕು.

ಒಂದು ವೇಳೆ ನಿಗದಿತ ಸಮಯದೊಳಗೆ ಪಕ್ಷದಿಂದ ಯಾವುದೇ ಲಿಖಿತ ಮನವಿ ಸ್ವೀಕೃತವಾದೇ ಇದ್ದ ಪಕ್ಷದಲ್ಲಿ ಪಕ್ಷದ ಯಾವುದೇ ಹೇಳಿಕೆ ಇರುವುದಿಲ್ಲವೆಂದು ಪರಿಗಣಿಸಿ, ಪಕ್ಷವನ್ನು ಸಂಪರ್ಕಿಸದೇ ಚುನಾವಣಾ ಆಯೋಗದಿಂದ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

prajaprabhat

Recent Posts

ಐಎಎಸ್‌, ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು.01.ಜುಲೈ.25:- ರಾಜ್ಯದಲ್ಲಿ ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿಯಾಗಿ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಡಾ| ಕೆ.ಜಿ. ಜಗದೀಶ…

8 hours ago

ಕೃಷಿ ಡಿಪ್ಲೋಮಾ : ಪ್ರವೇಶ ಆರಂಭ

ಬೀದರ.01.ಜುಲೈ.25:- ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರಿನ ಆಧೀನದಲ್ಲಿ ಬರುವ ಬೀದರ್ ತಾಲೂಕಿನ ಜನವಾಡಾ ಹತ್ತಿರದ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ೨೦೨೫-೨೬…

8 hours ago

ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರಕ್ಕೆ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರ, ಮೈಸೂರು ಇಲ್ಲಿ ಅಂಧ…

8 hours ago

ಕರಾಮುವಿ: ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.01.ಜುಲೈ.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ  NAAC A+  ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ,…

8 hours ago

ಪುನರುಜ್ಜೀವನ ತುರ್ತು ಚಿಕಿತ್ಸೆ ಕಾರ್ಯಾಗಾರ

ಬೀದರ.01.ಜುಲೈ.25:- ರೋಟರಿ ಕ್ಲಬ ಬೀದರ ನ್ಯೂ ಸೆಂಚುರಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ನಿಗಮ ಬೀದರ ವಿಭಾಗದ ಸಹ ಭಾಗೀತ್ವದಲ್ಲಿ…

8 hours ago

ಕಕರಸಾ ನಿಗಮ: ಜುಲೈ.7 ರಂದು ಪೋನ್-ಇನ್-ಕಾರ್ಯಕ್ರಮ

ಬೀದರ.01ಜುಲೈ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕಕರಸಾ) ವತಿಯಿಂದ ಜುಲೈ.7 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ…

8 hours ago