ಕೊಪ್ಪಳ ನಗರಸಭೆ: ಪಿ.ಓ.ಪಿ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧ

ಕೊಪ್ಪಳ.31.ಜುಲೈ.25: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.
ಆಗಸ್ಟ್ 27 ರಂದು ಜರುಗುವ ಗಣೇಶ ಚತುರ್ಥಿ ಪ್ರಯುಕ್ತ ನೀರಿನ ಮೂಲಗಳಲ್ಲಿ ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಉಂಟಾಗುವ ಜಲಮಾಲಿನ್ಯವನ್ನು ತಡೆಗಟ್ಟುವ ಉದ್ದೇಶದಿಂದ ಕೊಪ್ಪಳ ನಗರಸಭೆ ವತಿಯಿಂದ ಕೆಲವು ಮಾರ್ಗಸೂಚಿಯನ್ನು ಜಾರಿಗೊಸಲಾಗಿದೆ.

ಮಾರ್ಗಸೂಚಿಗಳು: ರೋಗ ನಿರೋಧಕ ಶಕ್ತಿ ಇರುವ ಚಿಕ್ಕದಾದ ಮಣ್ಣಿನ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡುವುದು. ಕೆರೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಗಣೇಶ ಮೂರ್ತಿ ಆರಾಧನೆಗಾಗಿ ಉಪಯೋಗಿಸುವ ವಸ್ತುಗಳನ್ನು (ಹೂವು, ಹಾರ, ವಸ್ತು, ಅಲಂಕಾರ ಸಾಮಗ್ರಿ ಇತ್ಯಾದಿ) ಜೈವಿಕವಾಗಿ ವಿಘಟನೆಯಾಗುವ ಪದಾರ್ಥಗಳನ್ನು ಬಳಸಿ ತಯಾರಿಸಬೇಕು.
ಗಣೇಶ ಚತುರ್ಥಿ ಸಂದರ್ಭದಲ್ಲಿ ಪಿ.ಒ.ಪಿ ಗಣೇಶ, ಪ್ಲಾಸ್ಟಿಕ್ ಬಳಕೆ, ಪಟಾಕಿ ಸಿಡಿಸುವುದು ಧ್ವನಿ ವರ್ಧಕಗಳ ಬಳಕೆ ಮತ್ತು ಕಸವನ್ನು ರಸ್ತೆಗೆ ಬಿಸಾಡುವುದು ಮುಂತಾದ ಚಟುವಟಿಕೆಗಳ ಮೇಲೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ಏಕೆ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ಮಾಡಬೇಕು. ಕೆರೆ, ಬಾವಿ, ಹೊಂಡ, ನದಿಯ ಹತ್ತಿರ ಮಣ್ಣಿನ ಗಣೇಶ ಮೂರ್ತಿಯನ್ನು ವಿಸರ್ಜಿಸಲು ನಗರ ಸ್ಥಳೀಯ ಸಂಸ್ಥೆಯಿಂದ ಕೃತಕ ವ್ಯವಸ್ಥೆಯನ್ನು ಬ್ಯಾರಲ್‌ಗಳು ಹಾಗೂ ಕೃತಕ ಅಥವಾ ತಾತ್ಕಲಿಕ ನೀರಿನ ಹೊಂಡದ ವ್ಯವಸ್ಥೆ ಮಾಡಲಾಗುವುದು.

ಮೂರ್ತಿ ವಿಸರ್ಜಿಸುವ ಸ್ಥಳಗಳಲ್ಲಿ ಘನತ್ಯಾಜ್ಯ ವಸ್ತುಗಳನ್ನು ಯಾವುದೇ ಕಾರಣಕ್ಕೂ ಸುಡವಂತಿಲ್ಲ. ಸಾದ್ಯವಾದಷ್ಟು ಅರಿಶಿಣ ಅಥವಾ ಜೇಡಿ ಮಣ್ಣಿನಿಂದ ತಯಾರಿಸಿದ ಚಿಕ್ಕದಾದ ಮತ್ತು ಬಣ್ಣ ರಹಿತ ಮೂರ್ತಿಗಳನ್ನು ಪೂಜಿಸಲು ಕೊಪ್ಪಳ ನಗರದ ನಿವಾಸಿಗಳು ಸಹಕರಿಸಬೇಕು. ಬಣ್ಣ ಇರುವ ಗಣೇಶನ ಮೂರ್ತಿಗಳನ್ನೇ ಪೂಜಿಸುವುದಾದರೆ ನೀರಿನಲ್ಲಿ ಕರಗುವ ಬಣ್ಣಗಳು ಮತ್ತು ವಿಷಯುಕ್ತವಲ್ಲದ ನೈಸರ್ಗಿಕ ಬಣ್ಣಗಳನ್ನು ಉಪಯೋಗಿಸಿ ತಯಾರಿಸಿದ ಮೂರ್ತಿಗಳನ್ನು ಬಳಸಿ ಜಲ ಮೂಲಗಳಿಗೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಸಾರ್ವಜನಿಕರು ಸಹಕರಿಸುವಂತೆ ಕೊಪ್ಪಳ ನಗರಸಭೆಯ ಅಧ್ಯಕ್ಷರು ಹಾಗೂ ಪೌರಾಯುಕ್ತರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಕಾನ್ಪುರ ಬಳಿ ಜನಸಾಮಾನ್ಯರ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…

4 hours ago

ಹಬ್ಬದ ದಟ್ಟಣೆಯ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ರೈಲ್ವೆ ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು.

ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…

4 hours ago

ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ – ಸಚಿವ ಈಶ್ವರ ಬಿ.ಖಂಡ್ರೆ

ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…

4 hours ago

ಯುವಕರು ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ-ಡಾ.ಎಸ್.ವಿ.ಪಾಟೀಲ್

ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…

4 hours ago

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…

5 hours ago

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…

5 hours ago