ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯಮಾಪನ, ಅತಿಥಿ ಉಪನ್ಯಾಸಕರಿಂದ ಬಹಿಷ್ಕಾರ.!

ಗಂಗಾವತಿ.06.ಫೆ.25:- ಗಂಗಾವತಿ ಕೊಪ್ಪಳ ವಿಶ್ವವಿದ್ಯಾಲಯ  ಮೌಲ್ಯಮಾಪನದ ಸಂಭಾವನೆ ಪಾವತಿಸದ ಕಾರಣ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ನಡೆಯುವ 1 ನೇ ಮತ್ತು 3ನೇ ಸೆಮಿಸ್ಟರ್ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸಮಯದಲ್ಲಿ ಅತಿಥಿ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಲಾಗುತ್ತಿದೆ.

ಹೋದ್ ವರ್ಷ ಸಂಭಾವನೆ ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಮಂಗಳವಾರ ಮೌಲ್ಯಮಾಪನ ಕೇಂದ್ರದ ಕಸ್ಟೋಡಿಯನ್ ಡಿ.ಎಂ.ಅಭಿಷೇಕ ಅವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಮಾತನಾಡಿ,’3 ತಿಂಗಳುಗಳ ಹಿಂದೆ ಪದವಿ ಮೊದಲನೇ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಯ ಮೌಲ್ಯಮಾಪನ ಮಾಡಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ ಈವರೆಗೂ ಸಂಭಾವನೆ ಪಾವತಿ ಮಾಡಿಲ್ಲ’ ಎಂದು ತಿಳಿಸಿದರು.

‘ಕಳೆದ ಬಾರಿ 155-210 ಅತಿಥಿ ಉಪನ್ಯಾಸಕರು 35 ರಿಂದ 50 ದಿನ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ. ಮೌಲ್ಯಮಾಪನದ ಸಂಭಾವನೆ ನಯಾಪೈಸೆ ಪಾವತಿ ಮಾಡಿಲ್ಲ.

ಇದೀಗ 1 ಮತ್ತು 3ನೇ ಸೆಮಿಸ್ಟರ್‌ನ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ಸಂಭಾವನೆ ಪಾವತಿಸಿದ ಹಿನ್ನೆಲೆಯಲ್ಲಿ, ಅತಿಥಿ ಉಪನ್ಯಾಸಕರೆಲ್ಲರೂ ಒಮ್ಮತವಾಗಿ ನಿರ್ಣಯ ಕೈಗೊಂಡು ಮೌಲ್ಯಮಾಪನ ಬಹಿಷ್ಕರಿಸಲಾಗುತ್ತಿದೆ’ ಎಂದರು.

ಅತಿಥಿ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಗುಂಡೂರು ಪವನಕುಮಾರ, ಪದಾಧಿಕಾರಿಗಳಾದ ಬಸವರಾಜ ಗೌಡನಬಾವಿ, ಸುರೇಶ, ಮಂಜುನಾಥ ಖಾರದಪುಡಿ ಹಾಗೂ ಗೋಪಾಲ ಉಪಸ್ಥಿತರಿದ್ದರು.

ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಮಾತನಾಡಿ,’3 ತಿಂಗಳುಗಳ ಹಿಂದೆ ಪದವಿ ಮೊದಲನೇ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಯ ಮೌಲ್ಯಮಾಪನ ಮಾಡಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ ಈವರೆಗೂ ಸಂಭಾವನೆ ಪಾವತಿ ಮಾಡಿಲ್ಲ’ಅಂದು ಮಾಹಿತಿ ನೀಡಿದರು

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

1 hour ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

4 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

4 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

4 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

4 hours ago