ಗಂಗಾವತಿ.06.ಫೆ.25:- ಗಂಗಾವತಿ ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯಮಾಪನದ ಸಂಭಾವನೆ ಪಾವತಿಸದ ಕಾರಣ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ನಡೆಯುವ 1 ನೇ ಮತ್ತು 3ನೇ ಸೆಮಿಸ್ಟರ್ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸಮಯದಲ್ಲಿ ಅತಿಥಿ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಲಾಗುತ್ತಿದೆ.
ಹೋದ್ ವರ್ಷ ಸಂಭಾವನೆ ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಮಂಗಳವಾರ ಮೌಲ್ಯಮಾಪನ ಕೇಂದ್ರದ ಕಸ್ಟೋಡಿಯನ್ ಡಿ.ಎಂ.ಅಭಿಷೇಕ ಅವರಿಗೆ ಮನವಿ ಸಲ್ಲಿಸಿದರು.
ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಮಾತನಾಡಿ,’3 ತಿಂಗಳುಗಳ ಹಿಂದೆ ಪದವಿ ಮೊದಲನೇ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಯ ಮೌಲ್ಯಮಾಪನ ಮಾಡಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ ಈವರೆಗೂ ಸಂಭಾವನೆ ಪಾವತಿ ಮಾಡಿಲ್ಲ’ ಎಂದು ತಿಳಿಸಿದರು.
‘ಕಳೆದ ಬಾರಿ 155-210 ಅತಿಥಿ ಉಪನ್ಯಾಸಕರು 35 ರಿಂದ 50 ದಿನ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ. ಮೌಲ್ಯಮಾಪನದ ಸಂಭಾವನೆ ನಯಾಪೈಸೆ ಪಾವತಿ ಮಾಡಿಲ್ಲ.
ಇದೀಗ 1 ಮತ್ತು 3ನೇ ಸೆಮಿಸ್ಟರ್ನ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ಸಂಭಾವನೆ ಪಾವತಿಸಿದ ಹಿನ್ನೆಲೆಯಲ್ಲಿ, ಅತಿಥಿ ಉಪನ್ಯಾಸಕರೆಲ್ಲರೂ ಒಮ್ಮತವಾಗಿ ನಿರ್ಣಯ ಕೈಗೊಂಡು ಮೌಲ್ಯಮಾಪನ ಬಹಿಷ್ಕರಿಸಲಾಗುತ್ತಿದೆ’ ಎಂದರು.
ಅತಿಥಿ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಗುಂಡೂರು ಪವನಕುಮಾರ, ಪದಾಧಿಕಾರಿಗಳಾದ ಬಸವರಾಜ ಗೌಡನಬಾವಿ, ಸುರೇಶ, ಮಂಜುನಾಥ ಖಾರದಪುಡಿ ಹಾಗೂ ಗೋಪಾಲ ಉಪಸ್ಥಿತರಿದ್ದರು.
ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಮಾತನಾಡಿ,’3 ತಿಂಗಳುಗಳ ಹಿಂದೆ ಪದವಿ ಮೊದಲನೇ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಯ ಮೌಲ್ಯಮಾಪನ ಮಾಡಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ ಈವರೆಗೂ ಸಂಭಾವನೆ ಪಾವತಿ ಮಾಡಿಲ್ಲ’ಅಂದು ಮಾಹಿತಿ ನೀಡಿದರು
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…
ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…