ಹೊಸ ದೆಹಲಿ.15.ಫೆ.25: – ಇಂದು ದೇಶದಲ್ಲಿ ನಡೆತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಿನಾಲು ಹೆಚ್ಚುತ್ತಿರುವ ಕಾರಣಕ್ಕೆ ದೇಶದಾದ್ಯಂತ ಇರುವ ಕೋಚಿಂಗ ಕೇಂದ್ರಗಳನ್ನು ಸರ್ಕಾರ ನಿಯಂತ್ರಿಸಬೇಕು’ ಎಂದು ಕಾಂಗ್ರೆಸ್ ಮುಖಂಡ ಕನ್ಹಯ್ಯಕುಮಾರ್ ಒತ್ತಾಯಿಸಿದರು.
ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,’ಯುಪಿಎಸ್ಸಿ, ಮೆಡಿಕಲ್, ಎಂಜಿನಿಯರಿಂಗ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ದೇಶದಾದ್ಯಂತ ಹಲವು ಖಾಸಗಿ ಕೋಚಿಂಗ್ ಕೇಂದ್ರಗಳು ತರಬೇತಿ ನೀಡುತ್ತಿವೆ.
ಸರ್ಕಾರದ ಸಂಸ್ಥೆಗಳಲ್ಲಿ ಈ ವ್ಯವಸ್ಥೆ ಚೆನ್ನಾಗಿಲ್ಲ. ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿ, ನಂತರ ಈ ಕೇಂದ್ರಗಳು ಕಣ್ಮರೆಯಾಗುತ್ತಿವೆ.
ದೇಶದಲ್ಲಿ ವ್ಯವಸ್ಥಿತ ವೈಫಲ್ಯ ಉಂಟಾಗಿದ್ದು, ಸರ್ಕಾರ ಇದರ ನೇರ ಹೊಣೆ ಹೊರಬೇಕು’ ಎಂದರು.
‘ಸರ್ಕಾರ ಹಾಗೂ ಮಾರುಕಟ್ಟೆಯ ನಡುವೆ ಸಿಲುಕಿ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ. ತಪ್ಪು ಎಸಗುವ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಬೇಕು. ದೇಶದಲ್ಲಿರುವ ಸರ್ಕಾರಿ ಸಂಸ್ಥೆಗಳನ್ನು ಬಲಪಡಿಸಬೇಕು’ ಎಂದು ಹೇಳಿದರು.
ದಿನಕ್ಕೆ 28 ಸಾವು: ‘ದೇಶದಲ್ಲಿ ದಿನವೊಂದಕ್ಕೆ ಸರಾಸರಿ 28 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ರೈತರು ಆತ್ಮಹತ್ಯೆ ಮಾಡಿಕೊಂಡರೆ, ‘ವ್ಯವಸ್ಥೆಯ ವೈಫಲ್ಯ’ ಎಂದೇ ಪರಿಗಣಿಸಲಾಗುತ್ತದೆ. ಅದೇ, ವ್ಯವಸ್ಥೆಯು ವಿದ್ಯಾರ್ಥಿಗಳನ್ನು ‘ಪ್ರೆಶರ್ ಕುಕ್ಕರ್’ಗಳನ್ನಾಗಿ ಪರಿವರ್ತಿಸಿದೆ.
ಸಂಸ್ಥೆಗಳು ಕನಸುಗಳನ್ನು ಮಾರಾಟ ಮಾಡುತ್ತಿವೆ. ಆದರೆ, ಎಷ್ಟು ಸೀಟುಗಳು ಲಭ್ಯವಿದೆ? ಎಷ್ಟು ಮಂದಿಗೆ ಉದ್ಯೋಗ ಸಿಕ್ಕಿದೆ? ಇಂತಹ ಪ್ರಶ್ನೆಗಳು ಚರ್ಚೆಯಾಗುತ್ತಿಲ್ಲ’ ಎಂದು ಕನ್ಹಯ್ಯಕುಮಾರ್ ಕೇಳಿದರು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…