13 ಡಿಸೆಂಬರ್24 :- ಬೀದರ್ ನಗರದಲ್ಲಿ ಇತ್ತೀಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ಕಾರ್ಯಕ್ರಮದ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಧ್ಯಾನೇಶ್ವರ ನಿರಗುಡೆ ಚಾಲನೆ ನೀಡಿದರು.
ಈ ಜಾಥಾವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಂಘಟಿತ ಮತ್ತು ಸಹಯೋಗದ ಪ್ರಯತ್ನದ ಮೂಲಕ ದೇಶದ ಹೆಚ್ಚಿನ ಆದ್ಯತೆಯ 347 ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕ ರಾಜ್ಯದಾದ್ಯಂತ ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ( 100 days intensified campaign on TB elimination) ಕಾರ್ಯಕ್ರಮದ ಅಭಿಯಾನವನ್ನು ಈ ಅಭಿಯಾನದ ಗುರಿಯು ಕಾರ್ಯಕ್ರಮದ ಚಟುವಟಿಕೆಗಳನ್ನು ತೀವ್ರಗೊಳಿಸುವುದು, ದುರ್ಬಲ ಜನ ಸಂಖ್ಯೆಯಲ್ಲಿ ಸಕ್ರಿಯ ಕ್ಷಯ ಪ್ರಕರಣಗಳನ್ನು ಕಂಡುಹಿಡಿಯುವುದು, ಆರಂಭಿಕ ರೋಗ ನಿರ್ಣಯ ಮಾಡಿ ತ್ವರಿತ ಚಿಕಿತ್ಸೆ ಪ್ರಾರಂಭಿಸುವುದು, ಪೌಷ್ಠಿಕ ಆಹಾರದ ಆರೈಕೆ ಕಲ್ಪಿಸುವುದು, ದುರ್ಬಲ ಪ್ರದೇಶಗಳಲ್ಲಿ ಕ್ಷಯರೋಗ ಜಾಗೃತಿ ವೃದ್ಧಿಸುವುದು ಮತ್ತು ಕ್ಷಯರೋಗದ ತೀವ್ರತೆಯನ್ನು ಕಡಿಮೆಗೊಳಿಸುವುದಾಗಿದೆ.
ಈ ಜಾಥಾವು ನಗರದ ರಾಜೀವ ಗಾಂಧಿ ಚೌಕ, ಅಂಬೆಡ್ಕರ್ ವೃತ, ಶಿವಾಜಿ ವೃತ, ಜಿಲ್ಲಾಧಿಕಾರಿಗಳ ಕಛೇರಿ, ಹರಳಯ್ಯ ವೃತ ಮಾರ್ಗವಾಗಿ ತೆರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಮುಕ್ತಾಯಗೊಂಡಿತು.
ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಟಿ.ಬಿ ಚಾಂಪಿಯನ್ ಅವರನ್ನು ಸನ್ಮಾಸಿಲಾಯಿತ್ತು ಮತ್ತು ಮೂರು ಹೊಸ ರೋಗಿಗಳಿಗೆ ರವಿ ಪ್ರಭಾ ಪ್ರಯೋಗ ಶಾಲಾ ತಂತ್ರಜ್ಞ ಅಧಿಕಾರಿಯವರು ದತ್ತು ಪಡೆದು 6 ತಿಂಗಳವರೆಗೆ ಪೌಷ್ಠಿಕ ಆಹಾರ ಕಿಟ್ ವಿತರಣೆಮಾಡಿದರು.
ಈ ಕಾರ್ಯಕ್ರಮದಲ್ಲಿ ಡಾ. ಅನೀಲಕುಮಾರ ಚಿಂತಾಮಣಿ, ಡಾ. ರಾಜಶೇಖರ ಪಾಟೀಲ್ ಜಿಲ್ಲಾ ಮಲೇರಿಯಾ ಅಧಿಕಾರಿಗಳು, ಡಾ: ಕಿರಣ ಪಾಟೀಲ್ ಜಿಲ್ಲಾ ಕುಷ್ಠರೋಗ ಅಧಿಕಾರಿಗಳು, ಡಾ: ದೀಲಿಪ ಡೋಂಗರೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಡಾ. ಸಂಗಾರಡ್ಡಿ ತಾಲೂಕ ಆರೋಗ್ಯ ಅಧಿಕಾರಿಗಳು ಬೀದರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಿಬ್ಬಂದಿಗಳು ಮತ್ತು ಜಿಲ್ಲಾ ಕ್ಷಯರೋಗ ಕಛೇರಿ ಸಿಬ್ಬಂದಿಗಳು ಭಾಗವಹಿಸಿದರು. ಕಾರ್ಯಕ್ರಮದ ನಿರೂಪಣೆ ಟಿ.ಎಂ. ಮಚ್ಚೆ ಮಾಡಿದರು.
Source: www.prajaprabhat.com
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…