ಯಳಂದೂರು.23.ಜೂನ್.25:- ತಾಲ್ಲೂಕಿನ ಕೆಸ್ತೂರು, ಮದ್ದೂರು, ದುಗ್ಗಹಟ್ಟಿ,ಯರಿಯೂರು ಗ್ರಾಮಗಳಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಉಪ್ಪಾರ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಿದರು. ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿ ಮದ್ದೂರು ಗ್ರಾಮದ ಉಪ್ಪಾರ ಸಮುದಾಯಭವನಕ್ಕೆ 25 ಲಕ್ಷ, ಯರಿಯೂರು ಉಪ್ಪಾರ ಸಮುದಾಯ ಭವನಕ್ಕೆ 20 ಲಕ್ಷ, ಕೆಸ್ತೂರು ಉಪ್ಪಾರ ಸಮುದಾಯ ಭವನಕ್ಕೆ 25 ಲಕ್ಷ ವನ್ನು ನೀಡಲಾಗಿದೆ.
ದುಗ್ಗಹಟ್ಟಿ ಗ್ರಾಮದಲ್ಲಿ ರಾಜೀವ್ ಗಾಂಧಿ ಗ್ರಾಮಪಂಚಾಯತಿ ಕಟ್ಟಡ ನಿರ್ಮಾಣಕ್ಕೆ 15 ಲಕ್ಷ .ಒಟ್ಟು 85 ಲಕ್ಷ ಇಷ್ಟು ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡಲಾಗಿದೆ.
ನಿರ್ಮಿತ ಕೇಂದ್ರದ ಮೂಲಕ ಈ ಕಟ್ಟಡಗಳು ನಿರ್ಮಾಣವಾಗುತ್ತದೆ. ಕಾಂಗ್ರೇಸ್ ಸರಕಾರ ನುಡಿದಂತೆ ನಡೆದಿದೆ ನಾಡಿನ ಜನರ ಕ್ಷೇಮಾಭಿವೃದ್ಧಿ ದೃಷ್ಟಿಯಿಂದ ಚುನಾವಣಾ ಪೂರ್ವ ತಿಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಸರಕಾರ ಬಂದಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿದ್ದಾರೆ..
ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಅಭಿವೃದ್ಧಿ ಹಿನ್ನಲೆ ಸರಕಾರದಿಂದ ಹೆಚ್ಚು ಅನುದಾನವನ್ನು ತಂದು ಅಭಿವೃದ್ಧಿ ಮಾಡಲಾಗುತ್ತದೆ.
ನೆನೆಗುದಿಗೆ ಬಿದ್ದಿದ್ದ ಕೆಲ ಹಳ್ಳಿಯ ರಸ್ತೆಗಳು ಹಾಗೂ ಸಮುದಾಯ ಭವನಗಳ ಪೂರ್ಣಗೊಳಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಉಪಾಧ್ಯಕ್ಷ ಯೋಗೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್, ಕೆಸ್ತೂರು ಗ್ರಾಪಂ ಅಧ್ಯಕ್ಷೆ ದೊಡ್ಡತಾಯಮ್ಮ, ಡಿ ಎನ್ ನಾಗರಾಜು, ಮರಿಸ್ವಾಮಿ, ಮಹೇಶ್, ಪಿ.ರಾಮಕೃಷ್ಣ, ನಾಗಣ್ಣ, ಮಧು, ಸಿದ್ದರಾಜು, ಬಿ ನಾಗರಾಜು, ಗ್ರಾಪಂ ಸದಸ್ಯ ಪ್ರಸಾದ್, ಮಹೇಂದ್ರ, ಅಂಬೇಡ್ಕರ್ ಸಂಘದ ಅಧ್ಯಕ್ಷ ಸಚಿನ್ ಹಾಗೂ ಇತರರು ಹಾಜರಿದ್ದರು
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…