ಸಂತಾಪ ಸೂಚನೆ
ಬೀದರ.03.ಮಾರ್ಚ.25:- ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು , ಹಾಗು ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಯುತ *ಖಾಜಿ ಅರ್ಷದ ಅಲ್ಲಿ* ಅವರು ಇಂದು ನಿಧನ ಹೊಂದಿದ್ದಾರೆ, ಎಂದು ತಿಳಿಸಲು ವಿಷಾದಿಸುತ್ತೇವೆ.
ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
ಮತ್ತು ಕುಟುಂಬಸ್ಥರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇವೆ.
ನಾಳೆ ದಿನಾಂಕ 04-03- 2025 ರಂದು ಬೆಳಗ್ಗೆ 11:30 ರಿಂದ ಮಧ್ಯಾಹ್ನ 1:00 ವರೆಗೆ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ ಮತ್ತು ಮಧ್ಯಾಹ್ನ 1:30ಕ್ಕೆ ಬೀದರ್ ನ ಜಾಮ ಮಸಿದಿ ನಲ್ಲಿ ಪ್ರಾರ್ಥನೆ ಸಲ್ಲಿಸಿ ಪಾರ್ಥಿವ ಶರೀರವನ್ನು ಭಾಲ್ಕಿಯಲ್ಲಿ ಅಂತ್ಯಕ್ರಿಯೆ ನಡೆಸಲು ಪಾರ್ಥಿವ ಶರೀರವನ್ನು ಕೊಂಡಯಲಾಗುತ್ತದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
*ಎಂ ಎ ಸೆಮಿ*
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು
*ದತ್ತಾತ್ರಿ ಮುಲಗೆ*
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು
*ಸುಧಾಕರ ಕೊಳ್ಳುರ*
ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನಿ ಕಾರ್ಯದರ್ಶಿ