ಖಾಯಂ ಮಾಡಲು ಕ್ರಮ. ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ.!

ಬೆಂಗಳೂರು.10.ಏಪ್ರಿಲ್.25:- ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರದ ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಮುಂಭಾಗ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.

ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ಇದ್ದಂತೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸ ಮಾಡಿದರೆ, ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ.

ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತಷ್ಟು ಕೊಡಲಾಗುವುದು. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ.

ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣ ಬೈರೇಗೌಡರು ಸರ್ವೇಯರ್‌ಗಳ ನೇಮಕಾತಿ ಮಾಡಿದ್ದಾರೆ. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್‌ಆರ್‌ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಘೋಷಿಸಿದರು.

ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ರಿಜ್ವಾನ್ ಅರ್ಹದ್, ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

prajaprabhat

Recent Posts

ಕಳೆದುಹೋದ, ಕಳುವಾದ ಮೊಬೈಲ್ ಫೋನ್‍ಗಳ ಬಗ್ಗೆ CEIR ಪೋರ್ಟಲ್‍ನಲ್ಲಿ ದೂರು ದಾಖಲಿಸಿ-ಎಸ್ಪಿ ಪ್ರದೀಪ ಗುಂಟಿ

ಬೀದರ.15.ಜೂನ್.25:- ಸಾರ್ವಜನಿಕರು ತಮ್ಮ ಮೊಬೈಲ್ ಪೋನ್‍ಗಳು ಕಳೆದುಹೋದ ಅಥವಾ ಕಳ್ಳತನವಾದ್ದಲ್ಲಿ ಅನ್‍ಲೈನ್ ಮೂಲಕವೇ ಕೆಎಸ್‍ಪಿ ವೆಬ್‍ಸೈಟ್‍ನಲ್ಲಿ ಹೋಗಿ e-Lost Reports…

30 minutes ago

ಜೂ.15 ರಂದು ಸಮಾಜ ಕಲ್ಯಾಣ ಸಚಿವ<br>*ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ

ಬೀದರ.15.ಜೂನ್25:- ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ…

53 minutes ago

ಅಮೆರಿಕ ಸೇನೆಯು 250ನೇ ವಾರ್ಷಿಕೋತ್ಸವ.

ಮೆರವಣಿಗೆಯೊಂದಿಗೆ ಆಚರಿಸುತ್ತದೆ ಅಮೆರಿಕವನ್ನು ಬಲಪಡಿಸುವುದಾಗಿ ಟ್ರಂಪ್ ಪ್ರತಿಜ್ಞೆ ಮಾಡಿದ್ದಾರೆ. ಶನಿವಾರ ವಾಷಿಂಗ್ಟನ್, ಡಿಸಿಯಲ್ಲಿ ಯುಎಸ್ ಸೈನ್ಯವು ತನ್ನ 250 ನೇ…

3 hours ago

ಕೇಂದ್ರ ಸಚಿವ ಅಮಿತ್ ಶಾ ಅವರಿಂದ 60,000 ಕ್ಕೂ ಹೆಚ್ಚು ಹೊಸ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ನೇಮಕಾತಿ ಪತ್ರ ವಿತರಣೆ

ಇಂದು ಮಾರ್ಚ್ 31, 2026 ರ ವೇಳೆಗೆ ಭಾರತವು ನಕ್ಸಲ್ ವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ…

3 hours ago

ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಪ್ರಧಾನಿ ಮೋದಿ ಸೈಪ್ರಸ್ ತಲುಪಿದರು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಸೈಪ್ರಸ್‌ಗೆ ಆಗಮಿಸಿದ್ದಾರೆ. ಅವರನ್ನು ಲಾರ್ನಾಕಾ ಅಂತರಾಷ್ಟ್ರೀಯ…

3 hours ago

ಅಹಮದಾಬಾದ್ ವಿಮಾನ ಅಪಘಾತದಲ್ಲಿ 32 ಡಿಎನ್‌ಎ ಹೊಂದಾಣಿಕೆ ದೃಢಪಟ್ಟಿದೆ; 14 ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ.

ಗುಜರಾತ್‌ನ ಅಹಮದಾಬಾದ್ ವಿಮಾನ ಅಪಘಾತದಲ್ಲಿ, ಇಲ್ಲಿಯವರೆಗೆ ಒಟ್ಟು 32 ಮೃತರ ಡಿಎನ್‌ಎ ಮಾದರಿಗಳನ್ನು ಹೊಂದಾಣಿಕೆ ಮಾಡಲಾಗಿದ್ದು, 14 ಮೃತದೇಹಗಳನ್ನು ಅವರ…

3 hours ago