ಖೇಲೋ-ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದ್ದು .

ಬೆಂಗಳೂರು.21.ಜೂನ್.25:- ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿದ್ದು ಈ ಸಂಬಂಧ ಪ್ರತೀ ಕೇಂದ್ರದಲ್ಲಿ ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಒಂದು ವರ್ಷದ ಅವಧಿಗೆ ತರಬೇತಿ ನೀಡಲಾಗುತ್ತದೆ.

ಖೇಲೋ-ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದ್ದು ರಾಯಚೂರು ಜಿಲ್ಲೆಯ ಆಸಕ್ತ 12 ರಿಂದ 18 ವರ್ಷದ ಬಾಲಕ ಬಾಲಕೀಯರು ತಮ್ಮ ಜನ್ಮ ದಿನಾಂಕ ದೃಢೀಕರಣ ಪತ್ರ (ಶಾಲೆ ಅಥವಾ ಕಾಲೇಜು ಮುಖ್ಯಸ್ಥರಿಂದ ದೃಢೀಕೃತ) ಹಾಗೂ ಕ್ರೀಡಾ ಸಾಧನೆಯ ಪ್ರಶಸ್ತಿ ಪತ್ರದೊಂದಿಗೆ ದಿನಾಂಕ : 26-06-2025 ರಂದು ಬೆಳಿಗ್ಗೆ 10:00 ಗಂಟೆಗೆ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ನೋಂದಣೆ ಮಾಡಿಕೊಳ್ಳಬಹುದಾಗಿದೆ.

ಪ್ರಕ್ರಿಯೆಗೆ ಕ್ರೀಡಾ ಸಮವಸ್ತ್ರದೊಂದಿಗೆ ಭಾಗವಹಿಸಬೇಕಾಗಿದ್ದು ಅಥ್ಲೆಟಿಕ್ ಕ್ರೀಡೆಯ ಟ್ರ್ಯಾಕ್ ಮತ್ತು ಪೀಲ್ಡ್ ಇವೆಂಟ್ಸ್ಗಳಲ್ಲಿ ಆಯ್ಕೆ ಮಾಡಲಾಗುತ್ತದೆ.

ಇತ್ತೀಚಿನ 02 ಭಾವಚಿತ್ರದೊಂದಿಗೆ ಸ್ವ-ವಿವರದ ಅರ್ಜಿಯನ್ನು ಆಯ್ಕೆ ಸಂದರ್ಭದಲ್ಲಿ ಸಲ್ಲಿಸಬೇಕು.

ಆಯ್ಕೆ ಸಂದರ್ಭದಲ್ಲಿ ಯಾವುದೇ ಗಾಯಗಳು ಅನಾರೋಗ್ಯ ಯಾವುದೇ ಇತರೆ ಸಾವು ನೋವುಗಳು ಶಾಶ್ವತ ಅಂಗವೈಕಲ್ಯ ಮತ್ತು ಜೀವಹಾನಿ ಸಂಭವಿಸಿದರೆ ಸಂಸ್ಥೆ ಅಥವಾ ಇಲಾಖೆ ಜವಾಬ್ದಾರಿಯುತವಾಗಿರುವುದಿಲ್ಲ. ಹಾಗೂ ಆಯ್ಕೆಗೆ ಹಾಜರಾಗುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ದಿನಭತ್ಯೆ/ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ಕಚೇರಿ ಅಥವಾ ಶ್ರೀ ಚಂದ್ರಶೇಖರ್ ಖೇಲೋ ಇಂಡಿಯಾ ತರಬೇತುದಾರರು ಮೋ ಸಂ : 9886551214 ಅನ್ನು ಸಂಪರ್ಕಿಸಬಹುದಾಗಿದೆ.

prajaprabhat

Recent Posts

UGC NET/K-SET ಯುಜಿಸಿ ನೆಟ್-ಕೆಸೆಟ್‌ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು.21.ಜೂನ್.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ…

1 hour ago

ಔರಾದ| ಸರ್ಕಾರಿ ಪ್ರ.ದ್ ಕಾಲೇಜಿಗೆ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಬೀದರ.21.ಜೂನ್.25:- ಗುರುನಾನಕ್ ಪ್ರಥಮ ದರ್ಜೆ ಕಾಲೇಜು ಬೀದರ್ ನ ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಅಂತರ ಕಾಲೇಜು ವಿವಿಧ ಕ್ರೀಡಾ…

8 hours ago

ಔರಾದ್ | ಸರಕಾರಿ ಪ್ರಥಮ ದರ್ಜೆ ಕಾಲೇಜಿು ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ.!

ಔರಾದ.21.ಜೂನ್.25:- ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ:…

8 hours ago

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ಸಹಾಯಧನ, ಇಂದೆ ಅರ್ಜಿ ಸಲ್ಲಿಸಿ

ಬೆಂಗಳೂರು.21.ಜೂನ್.25:- ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

9 hours ago

(Guest Faculty’s)”Ad-hoc” Employee”ತಾತ್ಕಾಲಿಕ” ಉದ್ಯೋಗಿ ಸೇವೆಯಲ್ಲಿ ಖಾಯಂ ಆಗಲು ಅವಕಾಶ ?

ತಾತ್ಕಾಲಿಕ ಉದ್ಯೋಗಿ ಎಂದರೆ ಶಾಶ್ವತ ಹುದ್ದೆಗೆ ಬದಲಾಗಿ ನಿರ್ದಿಷ್ಟ, ಸಾಮಾನ್ಯವಾಗಿ ಅಲ್ಪಾವಧಿಯ, ಉದ್ದೇಶ ಅಥವಾ ಯೋಜನೆಗಾಗಿ ನೇಮಕಗೊಂಡ ತಾತ್ಕಾಲಿಕ ಕೆಲಸಗಾರ.…

12 hours ago

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್…

12 hours ago