ಗಡಿ ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ-ಸೋಮಣ್ಣ ಬೇವಿನಮರದ


ಬೀದರ.10.ಫೆಬ್ರುವರಿ.25:  ಗಡಿ ಪ್ರಾಧಿಕಾರದ ಅನುದಾನದಿಂದ ಬೀದರ ಜಿಲ್ಲೆಗೆ  ಬಿಡುಗಡೆ ಮಾಡಲಾದ ಅನುದಾನದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಕೂಡಲೆ ಪೂರ್ಣಗೊಳಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಸೂಚಿಸಿದರು.


ಅವರು 2010-11 ಸಾಲಿನ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದರು ಹಣ ಬಳಕೆ ಪ್ರಮಾಣ ಪತ್ರ ಬಂದಿರುವುದಿಲ್ಲ, ಇನ್ನು ಕೆಲವು ಕಡೆ ಇನ್ನು ಕಾಮಗಾರಿ ಪ್ರಾರಂಭಿಸಿರುವುದಿಲ್ಲ ಅನುದಾನ ನೀಡಿದರು ಸಹ ಕಾಮಗಾರಿ ಪ್ರಾರಂಭವಾಗಿರುವುದಿಲ್ಲ. ಕಾಮಗಾರಿ ಅವಶ್ಯಕತೆ ಇಲ್ಲದಿದ್ದರೆ ಅಗತ್ಯವಿರುವ ಕಡೆ ಈ ಅನುದಾನ ಬಳಸಿಕೊಳ್ಳಲಾಗುವುದು ಎಂದರು.


ರಾಜ್ಯದ 6 ಗಡಿಭಾಗಗಳು ಹೊರ ರಾಜ್ಯದ ಕನ್ನಡ ಪರ ಸಂಘ ಸಂಸ್ಥೆಗಳಿಗೆ ಭಾಷಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಗಡಿ ಭಾಗದ ಕನ್ನಡ ಮಾಧ್ಯಮ ಶಾಲೆಗಳ ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಗ್ರಂಥಾಲಯ, ಕ್ರೀಡಾ ಕೊಠಡಿ, ಶಾಲಾ ಕಂಪೌಂಡ, ಶುದ್ದ ಕುಡಿಯುವ ನೀರಿನ ಘಟಕ, ಪಠ್ಯ ಪುಸ್ತಕಗಳು, ರಸ್ತೆಗಳು, ಸಾಂಸ್ಕøತಿಕ ಭವನ ಸೇರಿದಂತೆ ಇತ್ಯಾದಿ ಸೌಲಭ್ಯಗಳನ್ನು ಪ್ರಾಧಿಕಾರದಿಂದ ಒದಗಿಸಲಾಗುತ್ತಿದೆ. 2010-11ನೇ ಸಾಲಿನಿಂದ ಇದುವರೆಗೆ 24 ಕೋಟಿ 33 ಲಕ್ಷ ಹಣ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 15 ಕೋಟಿ 91 ಲಕ್ಷ ರೂ. ಹಣ ಬಳಕೆ ಪ್ರಮಾಣ ಪತ್ರ ಬಂದಿದೆ. ಉಳಿದ 8 ಕೋಟಿ 41 ಲಕ್ಷ ಬಾಕಿ ಉಳಿದ ಮೊತ್ತಕ್ಕೆ ಕೂಡಲೆ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಸಂಬಂಧಿಸಿದ  ಅಧಿಕಾರಿಗಳಿಗೆ ಸೂಚಿಸಿದರು.


ಸಾಂಸ್ಕøತಿಕ  ಕಾರ್ಯಕ್ರಮಗಳು ಆಯೋಜನೆಗೆ ವಿವಿಧ ಸಂಸ್ಥೆಗಳಿಗೆ ಅನುದಾನ ಹಂಚಿಕೆ ಮಾಡಿದರು ಅಂದಾಜು ಪಟ್ಟಿ ಬಂದಿರುವುದಿಲ್ಲ ಎಂದು ತಿಳಿಸಿದರು.


ಈ ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಮತ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಡಾ.ಸಂಜೀವಕುಮಾರ ಅತಿವಾಳ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶಿವಶಂಕರ, ಕನ್ನಡ ಮತ್ತು ಸಂಸ್ಕøತಿಕ ಇಲಾಖೆ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಕೆಕೆಐಡಿಎಲ್, ಪಂಚಾಯತರಾಜ ಇಂಜಿನೀಯರಿಂಗ ವಿಭಾಗ ಮತ್ತು ನಿರ್ಮಿತಿ ಕೇಂದ್ರದ ಇಇಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

1 hour ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

1 hour ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

7 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

9 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

11 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

11 hours ago