ಬೀದರ.11.ಜುಲೈ.25:- ಜಿಲ್ಲೆಯಲ್ಲಿ ಮುಂಬರುವ ಗಣೇಶ ಉತ್ಸವವನ್ನು ಪರಿಸರ ಸ್ನೇಹಿ ಮತ್ತು ಸೌಹಾರ್ದತೆಯಿಂದ ಆಚಾರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣೇಶ ಉತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪಿ.ಓ.ಪಿ ಹಾಗೂ ರಾಸಾಯನಿಕ ಗುಣಗಳ್ಳುಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ ನಿಷೇಧಿಸಿ ಮಣ್ಣಿನಿಂದ ಮಾಡಿದ ವಿಗ್ರಹಗಳನ್ನು ಬಳಕೆ ಮಾಡಬೇಕು. ನೀರಿನ ಮೂಲಗಳಾದ ನದಿ, ತೊರೆ, ಹಳ್ಳ, ಕೆರೆ, ಬಾವಿ ಇವುಗಳ ನೀರು ಮಾಲಿನ್ಯವಾಗದಂತೆ ನೋಡಿಕೊಳ್ಳಬೇಕು ಎಂದರು.
ಗಣೇಶ ವಿಗ್ರಹಗಳ ಪ್ರತಿಷ್ಠಾಪಣೆ ಹಾಗೂ ವಿಸರ್ಜನೆ ದಿನದಂದು ನಡೆಯುವ ಮೆರವಣಿಗೆಯಲ್ಲಿ ಕಡಿಮೆ ಶಬ್ದ ಇರುವ ಡಿಜೆ ಮಾತ್ರ ಬಳಸಬೇಕು ಮತ್ತು ಸಮಯ ಪಾಲನೆ ಮಾಡಬೇಕು ಎಂದರು. ಒಂದು ವೇಳೆ ಹೆಚ್ಚಿನ ಶಬ್ದ ಹೊಂದಿರುವ ಡಿಜೆ ಕಂಡುಬAದರೆ ಅದನ್ನು ತಕ್ಷಣ ಜಪ್ತಿ ಮಾಡಬೇಕು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದAತೆ ಸೌಹಾರ್ದತೆಯಿಂದ ಗಣೇಶ ಉತ್ಸವ ಆಚರಿಸಬೇಕು ಎಂದರು.
ಗಣೇಶ ಮಂಡಳಿ ಕಾರ್ಯಾಧ್ಯಕ್ಷರಾದ ಬಾಬು ವಾಲಿ ಮಾತನಾಡಿ, ಮಣ್ಣಿನ ಗಣೇಶ ವಿಗ್ರಹಗಳು ಸಾರ್ವಜನಿಕರು ಬಳಸುವಂತೆ ಜನರಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಈಶ್ವರ ಉಳ್ಳಾಗಡ್ಡಿ, ಡಿ.ವಾಯ್.ಎಸ್.ಪಿ. ಶಿವನಗೌಡ ಪಾಟೀಲ, ಪರಿಸರಾಧಿಕಾರಿ ಮೃತ್ಯುಂಜಯ, ಮುಖಂಡರುಗಳಾದ ಶಶಿ ಹೊಸಳ್ಳಿ, ರಮೇಶ ಚಿಟ್ಟಾ, ಗಣೇಶ ಭೊಸಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…