ಗುಡಿಸಲು ಮುಕ್ತ ಬೀದರ ಲೋಕಸಭಾ ಕ್ಷೇತ್ರದ ನಿಟ್ಟಿನಲ್ಲಿ 2,202 ಮನೆಗಳ ಮಂಜೂರಾತಿ, ಸಂಸದ ಶ್ರೀ ಸಾಗರ ಖಂದ್ರೆ

. ಬೀದರ್.01.ಜೂನ್.25:- ಗುಡಿಸಲು ಮುಕ್ತ ಬೀದರ ಲೋಕಸಭಾ ಕ್ಷೇತ್ರದ ನಿಟ್ಟಿನಲ್ಲಿ 2,202 ಮನೆಗಳ ಮಂಜೂರಾತಿ ತಿಳುವಳಿಕೆ ಪತ್ರ ವಿತರಣೆ – ಸಂಸದ ಶ್ರೀ ಸಾಗರ ಖಂಡ್ರೆ

ಬೀದರ ಲೋಕಸಭಾ ಕ್ಷೇತ್ರದ ಗುಡಿಸಲು ಮುಕ್ತಗೊಳಿಸುವ ಸಂಕಲ್ಪದ ಭಾಗವಾಗಿ, ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಇಂದು ಭಾಲ್ಕಿ ತಾಲೂಕಿನ 34 ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಮನೆ ಮಂಜೂರಾತಿ ತಿಳುವಳಿಕೆ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಒಟ್ಟು 2,202 ಮನೆಗಳ ಮಂಜೂರಾತಿ ಪತ್ರಗಳು ಫಲಾನುಭವಿಗಳಿಗೆ ಹಸ್ತಾಂತರಿಸಲ್ಪಟ್ಟವು:

✅(ಪಿಎಂಎವೈ – ಗ್ರಾಮೀಣ) ಅಡಿಯಲ್ಲಿ: 1,424 ಮನೆಗಳು
✅ ಬಸವ ವಸತಿ ಯೋಜನೆ ಅಡಿಯಲ್ಲಿ: 593 ಮನೆಗಳು
✅ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ: 185 ಮನೆಗಳು

ಸಂಸದ ಶ್ರೀ ಸಾಗರ ಖಂಡ್ರೆ ಅವರು ಮಾತನಾಡಿ ಹೇಳಿದರು:
“ಸಾಮಾನ್ಯ ಜನರ ಕನಸುಗಳೇ ನಮ್ಮ ಪ್ರೇರಣೆಯಾಗಿದೆ. ಮನೆ ಎಂಬುದು ಕೇವಲ ಕಟ್ಟಡವಲ್ಲ, ಅದು ಆತ್ಮೀಯತೆಯ ಸಂಕೇತ. ಎಲ್ಲರಿಗೂ ವಸತಿ ಹಕ್ಕು ಸಿಗಬೇಕು ಎಂಬ ದೃಷ್ಟಿಯಿಂದ ನಾವು ಕೇಂದ್ರ ಸರ್ಕಾರದ ಮೇಲೆ ನಿರಂತರ ಒತ್ತಡ ತರುತ್ತಾ, ಬೀದರ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚಿನ ಮನೆಗಳನ್ನು ಮಂಜೂರಿ ಮಾಡಿಸಿಕೊಂಡು ಫಲಾನುಭವಿಗಳಿಗೆ ನೀಡುತ್ತಿದ್ದೇವೆ.”

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಪಾಲ್ಗೊಂಡು ಮಾತನಾಡುತ್ತಾ ಹೇಳಿದರು:
“ಭಾಲ್ಕಿ ಕ್ಷೇತ್ರದಲ್ಲಿ ಈ ಹಿಂದೆ ನಮ್ಮ ಸರ್ಕಾರದಲ್ಲಿಯೇ ನಾನು ಸುಮಾರು 25,000 ಮನೆಗಳನ್ನು ವಿತರಿಸಿ, ಗುಡಿಸಲು ಮುಕ್ತ ಭಾಲ್ಕಿ ನಿರ್ಮಾಣದ ನಿಟ್ಟಿನಲ್ಲಿ ಕಾರ್ಯ ಮಾಡಿದ್ದೇನೆ. ಸಂಸದ ಸಾಗರ ಖಂಡ್ರೆ ಅವರು ಕೂಡಾ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೀದರ ಲೋಕಸಭಾ ಕ್ಷೇತ್ರಕ್ಕೆ ಸುಮಾರು 50,000 ಮನೆಗಳ ಮಂಜೂರಾತಿ ಮಾಡಿಸಿದ್ದಾರೆ. ಅವರು ಜನರ ಹಿತದೃಷ್ಟಿಯಿಂದ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.”

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

1 hour ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

5 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

5 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

5 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

5 hours ago