ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು.
ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಬಿ.ಟೆಕ್/ಎಂಸಿಎ ಮತ್ತು ಕಂಪ್ಯೂಟರ್ ಅಪರೇಟರ್ ಬಿಸಿಎ/ಪದವಿ ಜೊತೆಗೆ ಕಂಪ್ಯೂಟರ್ ಕೌಶಲ್ಯಾ ಹೊಂದಿರಬೇಕು. ಬಿ.ಟೆಕ್ ಎಂಸಿಎ ಆದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಮೇಲ್ಕಂಡ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು 45 ವರ್ಷ ಮೀರಿರಬಾರದು. ಸ್ನಾತಕ/ಸ್ನಾತಕೋತ್ತರ/ ಪದವಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಅಂತಿಮ ಅಂಕಪಟ್ಟಿ, ಪ.ಜಾ/ಪ.ಪಂ. ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ. ಕೆಲಸ ನಿರ್ವಹಿಸಿದ ಸಂಸ್ಥೆಯು ನೀಡಿದ ನೇಮಕಾತಿ ಆದೇಶ ಪತ್ರ. ಕೆಲಸ ನಿರ್ವಹಿಸಿದ ಅವಧಿಗೆ ಸಂಬಂಧ ಪಟ್ಟ ಸಂಸ್ಥೆಯಿಂದ ಹಾಜರಾತಿ ಪ್ರಮಾಣ ಪತ್ರ. ಸಂಸ್ಥೆಯಿಂದ ವೇತನ ದೃಢೀಕರಣ, ವೇತನ ಜಮಾ ಆದ ಕುರಿತು ಬ್ಯಾಂಕ್ ಖಾತೆಯ ವಿವರಗಳ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿಯನ್ನು ಸಲ್ಲಿಸುವುದು.
2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೂಕ್ತ ವಿದ್ಯಾರ್ಹತೆ ಅನುಭವ ಹಾಗೂ ಕಂಪ್ಯೂಟರ್ ಸಾಕ್ಷರತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮೇ 23 ರೊಳಗಾಗಿ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಹಳೇ ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ-577201 ಇಲ್ಲಿಗೆ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ…
ಬೀದರ.14.ಜೂನ್.25:- ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಆನ್ಲೈನ್ ಪ್ರವೇಶಾತಿ…
ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್…
ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣ ಕೇಂದ್ರ, ಕವಿಪ್ರನಿನಿ ಕೋಳಾರ್ (ಕೆ) ವ್ಯಾಪ್ತಿಯಲ್ಲಿ ಬರುವ 110 ಕೆವಿ ಕೋಳಾರ್ (ಕೆ) ವಿದ್ಯುತ್…
ಬೀದರ.14.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…
ಬೀದರ14.ಜೂನ್.25:- ಬೀದರನ ಒಂಟಿಗುಡಸಿತಾAಡಾದ ನಿವಾಸಿಯಾದ ಕಿಶನ ಲಕ್ಷö್ಮಣ ರಾಠೋಡ (50) ಇವರು ದಿನಾಂಕ: 07-06-2025 ರಂದು ಮನೆಯಿಂದ ಹೊರಗಡೆ ಹೋಗಿ…