05.ಜಿ.25.ಗುಬ್ಬಿ :- ಈ ಸದ್ಯದಲ್ಲಿ ಜೈಭೀಮ . ಡಾ ಭೀಮರಾವ ಅಂಬೇಡ್ಕರ ಅಂದ್ರೆ ಕೆಲವ ಜನರಿಗೆ ಹಲವಾರು ವರ್ಷಗಳಿಂದ ಎಲ್ಲಿ ಅಂದ್ರೆ ಆಲ್ಲಿ ಡಾ. ಭೀಮರಾವ ಅಂಬೇಡ್ಕರ ಅವರ ಭಾವಚಿತ್ರ, ಮೂರ್ತಿ ಗೆ ಅವಮಾನ ಅಡ್ತಿದ್ರು ಈಗ ಅಂಬೇಡ್ಕರ್ ಅವರ್ ಹಾಡು ಕೇಳ್ತಿದ್ರೇ ಮರ್ಣಂತಿಕ್ ಹಲ್ಲೆಗೊಳಗಾದ ಘಟ್ನೆಗಳು ಆಗ್ತಿದೆ.
ಈ ಘಟನೆ ನೋಡಿ ಒಬ್ಬ ಡ್ರೈವರ ಕೇವಲ ರಸ್ತೆಯಲ್ಲಿ ಸಂಚರಿಸುತ್ತಿದ್ದ ಹಾಲಿನ ಗಾಡಿಯಲ್ಲಿ ಕೇಳಿಬರುತ್ತಿದ್ದ ಅಂಬೇಡ್ಕರ್ ಅವರ ʼಜೈ ಭೀಮ್ʼ ಹಾಡು ಕೇಳಿ ಆಕ್ರೋಶಗೊಂಡು ರೈಲ್ವೆ ಪೊಲೀಸ ಸೇರಿದಂತೆ ಮತ್ತೊಬ್ಬ, ವಾಹನ ತಡೆದು ಈ ಹಾಡು ಹಾಕದಂತೆ ವಾಹನದಲ್ಲಿದ್ದ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಮರ್ಮಾಂಗಕ್ಕೆ ಗಂಭೀರವಾಗಿ ಹೊಡೆದು ಜೊತೆಗೆ ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾದ ಘಟನೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಕಸಬಾ ಹೋಬಳಿ ಮುದ್ದನಹಳ್ಳಿ ಗ್ರಾಮದ ರೈಲ್ವೆ ಇಲಾಖೆಯ ಪೊಲೀಸ್ ಅಧಿಕಾರಿ ಚಂದ್ರಶೇಖರ್ ಮತ್ತು ಮತ್ತೊಬ್ಬ ವ್ಯಕ್ತಿ ನರಸಿಂಹರಾಜು ಎಂಬವರು ಜಾತಿ ನಿಂದನೆ ಮಾಡಿ ದಲಿತ ಯುವಕನ ಹಲ್ಲೆ ಮಾಡಿರುವ ವ್ಯಕ್ತಿಗಳು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದ್ದು,
ತುಮಕೂರು ಗ್ರಾಮಾಂತರದ ಸಿರಿವರ ಗ್ರಾಮದ ದಲಿತ ಸಮುದಾಯದ 19 ವರ್ಷದ ದೀಪು ಹಾಗೂ ನರಸಿಂಹ ಮೂರ್ತಿ ಹಲ್ಲೆಗೊಳಗಾದ ಯುವಕರು ಎನ್ನಲಾಗಿದೆ. ಹಲ್ಲೆಗೊಳಗಾದವರು ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಶನಿವಾರ ಸಂಜೆ ಎಂದಿನಂತೆ ಹಾಲಿನ ವಾಹನ ಚಾಲನೆ ಮಾಡಿಕೊಂಡು ಇಬ್ಬರು ದಲಿತ ಸಮುದಾಯದ ಯುವಕರು ಸರಿಸುಮಾರು 6 ಗಂಟೆ ಸಮಯದಲ್ಲಿ ಕಸಬಾ ಹೋಬಳಿಯ ಮುದ್ದನಹಳ್ಳಿ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ʼಜೈ ಭೀಮ್ʼ ಹಾಡು ಹಾಕಿಕೊಂಡು ಬರುತ್ತಿದ್ದರು ಎನ್ನಲಾಗಿದೆ.
ಈ ವೇಳೆ ಇಬ್ಬರು ವ್ಯಕ್ತಿಗಳು ರಸ್ತೆಯಲ್ಲಿ ವಾಹನವನ್ನು ಅಡ್ಡಗಟ್ಟಿ ನೀವು ಯಾವ ಜಾತಿಯವರು ಎಂದು ಜಾತಿ ಹೆಸರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೊತೆಗೆ ಈ ಹಾಡು ಎಲ್ಲಿಯೂ ಹಾಕದಂತೆ ತಾಕೀತು ಮಾಡಿದ್ದಾರೆ.
ಬಳಿಕ ಇಬ್ಬರನ್ನು ಎಳೆದಾಡಿ ಹಲ್ಲೆತಾಕೀತು ಮಾಡಿದ್ದಾರೆ. ಬಳಿಕ ಇಬ್ಬರನ್ನು ಎಳೆದಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಒಬ್ಬರ ಮರ್ಮಾಂಗಕ್ಕೆ ಗಂಭೀರ ಸ್ವರೂಪದ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ದಲಿತ ಯುವಕರು ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈ ಘಟನೆ ಕುರಿತು ಸರ್ಕಾರ ದಲಿತರಿಗೆ ಸೌರಕ್ಷಣೆ ನೀಡಬೇಕು ದೀನ-ದಿಂದ-ದಿನಕ್ಕೆ. ಹಗಲು ರಾತ್ರಿ ದಲಿತರಮೇಲೆ ಹಾಲೇಆಗ್ತಿದೆ ಸರ್ಕಾರ ಸೊರಕ್ಷಣೆ ನೀಡಬೇಕು……
ಇದರಲ್ಲಿ ಒಬ್ಬರ ಮರ್ಮಾಂಗಕ್ಕೆ ಗಂಭೀರ ಸ್ವರೂಪದ ಹಲ್ಲೆ ಮಾಡಿದ್ದಾರೆ ಎಂದು ಹಲ್ಲೆಗೊಳಗಾದ ದಲಿತ ಯುವಕರು ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Source: ವಾರ್ತಾಭಾರತಿ
https://www.varthabharati.in/tumkur/gubbi-attack-on-dalit-youth-2045629
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…