ಗುಲಬರ್ಗಾ ವಿಶ್ವವಿದ್ಯಾಲಯ ಏಕೈಕ ಅಧ್ಯಯನ ಕೇಂದ್ರದಲ್ಲೂ ಇಲ್ಲ ಸೌಕರ್ಯ. ವರ್ಷದಿಂದ ವರ್ಷಕ್ಕೆ ದಾಖಲಾತಿ ಕುಸಿಯುತ್ತಿದೆ.!

ಕಲಬುರಗಿ.12.ಫೆ.25:- ಗುಲ್ಬರ್ಗಾ ವಿಶ್ವಿದ್ಯಾಲಯದ, ಕಲಬುರಾಗಿಯಲ್ಲಿ ರಾಯಚೂರು ಹಾಗೂ ಬೀದರ್‌ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳು ಸ್ಥಾಪನೆಯಾದ ಕಾರಣ ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಸಂಖ್ಯೆ ಒಂದಕ್ಕೆ ಕುಸಿದಿದೆ.

ಅವಿಭಜಿತ ಗುಲಬರ್ಗಾ ವಿಶ್ವವಿದ್ಯಾಲಯವು ಆಳಂದ, ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಾಲಹಳ್ಳಿ, ಬಸವಕಲ್ಯಾಣ ಹಾಗೂ ರಾಯಚೂರು ಜಿಲ್ಲೆಯ ಯರಗೇರಾದಲ್ಲಿ ಸ್ನಾತಕೋತ್ತರ ಕೇಂದ್ರಗಳನ್ನು ಹೊಂದಿತ್ತು.

ಅವುಗಳಲ್ಲಿ ಆಳಂದ ಮಾತ್ರ ಈಗ ಗುಲಬರ್ಗಾ ವಿವಿ ವ್ಯಾಪ್ತಿಗೆ ಒಳಪಡುತ್ತದೆ. ಇರುವ ಒಂದು ಕೇಂದ್ರವೂ ಮೂಲಸೌಕರ್ಯಗಳ ಕೊರತೆಯಿಂದಾಗಿ ಇದ್ದೂ ಇಲ್ಲದಂತಾಗಿದೆ.

ಆಳಂದ ಪಟ್ಟಣದಿಂದ 2 ಕಿ.ಮೀ ದೂರದಲ್ಲಿರುವ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಟ್ಟಡದಲ್ಲಿ ಈ ಕೇಂದ್ರ ನಡೆಯುತ್ತಿದೆ. ಇಲ್ಲಿ ಗಣಿತ, ಎಂ.ಕಾಂ, ಇಂಗ್ಲಿಷ್ ಹಾಗೂ ಕಂಪ್ಯೂಟರ್ ಸೈನ್ಸ್‌ ವಿಭಾಗಗಳಿವೆ.

ವಿಶೇಷಾಧಿಕಾರಿ ಹೊರತುಪಡಿಸಿ ಉಳಿದವರು ಅತಿಥಿ ಅಧ್ಯಾಪಕರು. 17 ಜನ ಅತಿಥಿ ಅಧ್ಯಾಪಕರಿದ್ದಾರೆ. ವಿಶೇಷಾಧಿಕಾರಿ ಪ್ರೊ.ರಮೇಶ ಲಂಡನಕರ್ ಅವರು ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಸತಿನಿಲಯ ಸೌಲಭ್ಯ ಇಲ್ಲ: ಕೊಠಡಿಗಳು, ಮೂಲಸೌಕರ್ಯ ಕೊರತೆ ಈ ಕೇಂದ್ರವನ್ನು ಕಾಡುತ್ತಿದೆ. ವಸತಿ ನಿಲಯ ಹಾಗೂ ಗ್ರಂಥಾಲಯ ಸೌಕರ್ಯವೂ ಇಲ್ಲ. ಅಲ್ಲದೆ, ಕೇಂದ್ರಕ್ಕೆ ವಾಹನ ಸೌಲಭ್ಯ ಇಲ್ಲ. ವಿದ್ಯಾರ್ಥಿಗಳು ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಕಾರಣ ವರ್ಷದಿಂದ ವರ್ಷಕ್ಕೆ ದಾಖಲಾತಿ ಕುಸಿಯುತ್ತಿದೆ.

ಈಡೇರದ ಚಿಂಚೋಳಿ ಜನರ ಕನಸು: ಜಿಲ್ಲಾ ಕೇಂದ್ರದಿಂದ 80 ಕಿ.ಮೀ ದೂರದಲ್ಲಿರುವ ಚಿಂಚೋಳಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆರೆಯಬೇಕು ಎಂಬ ಅಲ್ಲಿನ ಜನರ ಬಹುದಿನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಿಲ್ಲ.

ಚಿಂಚೋಳಿ ತಾಲ್ಲೂಕಿನಲ್ಲಿ ಮೂರು ಸರ್ಕಾರಿ ಪದವಿ ಕಾಲೇಜುಗಳಿವೆ. ಪದವಿ ಪೂರ್ಣಗೊಳಿಸುವ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಕಲಬುರಗಿಗೆ ಬರುವುದು ಅನಿವಾರ್ಯ ಆದ ಕಾರಣ ಕೆಲ ವಿದ್ಯಾರ್ಥಿಗಳು ಪದವಿಗೆ ಶಿಕ್ಷಣ ಮೊಟಕುಗೊಳಿಸುತ್ತಾರೆ. ಚಿಂಚೋಳಿಯಲ್ಲಿ ಅಧ್ಯಯನ ಕೇಂದ್ರ ತೆರೆಯಬೇಕು ಎಂಬುದು ಜನರ ಒತ್ತಾಯ.

ವರದಿ ಸಲ್ಲಿಸಿದ್ದ ಸಮಿತಿ: ಚಿಂಚೋಳಿಯಲ್ಲಿ ಕೇಂದ್ರ ತೆರೆಯುವ ಕುರಿತು ಅಧ್ಯಯನ ನಡೆಸಲು ಪ್ರಾಧ್ಯಾಪಕ ಲಕ್ಷ್ಮಣ ರಾಜನಾಳಕರ್ ನೇತೃತ್ವದಲ್ಲಿ ವಿಶ್ವವಿದ್ಯಾಲಯ 2020ರಲ್ಲಿ ಸಮಿತಿ ರಚಿಸಿತ್ತು.

ಅದು ಚಿಂಚೋಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಿತ್ತು. ಕೇಂದ್ರ ತೆರೆಯಬಹುದು ಎಂದು ತಿಳಿಸಿತ್ತು. ಬಳಿಕ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದುವರೆಗೂ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಆಳಂದ ಪಟ್ಟಣ ಹೊರವಲಯದಲ್ಲಿರುವ ಸ್ನಾತಕೋತ್ತರ ಅಧ್ಯಯನ ಕೇಂದ್ರಪ್ರೊ.ಗೂರು ಶ್ರೀರಾಮುಲು ಪ್ರಭಾರ ಕುಲಪತಿ ಗುವಿವಿಅನುದಾನ ಬಂದರೆ ಆಳಂದ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಸೌಲಭ್ಯ ಒದಗಿಸಲಾಗುವುದು.

ಚಿಂಚೋಳಿಯಲ್ಲಿ ಅಧ್ಯಯನ ಕೇಂದ್ರ ಆರಂಭಿಸಬೇಕು ಎನ್ನುವ ಬೇಡಿಕೆಯ ವಿಷಯದಲ್ಲಿ ಯಾವುದೇ ಸಕಾರಾತ್ಮಕ ಬೆಳವಣಿಗೆಗಳಾಗಿಲ್ಲ ಆಳಂದ ಕೇಂದ್ರದ ವಿದ್ಯಾರ್ಥಿಗಳ ಸಂಖ್ಯೆ ವಿಭಾಗ;ಮೊದಲನೇ ವರ್ಷ; ಎರಡನೇ ವರ್ಷ ಗಣಿತ;25;30 ಇಂಗ್ಲಿಷ್;14;25 ಕಂಪ್ಯೂಟರ್‌ ಸೈನ್ಸ್‌;05;08 ಎಂ.ಕಾಂ;25;30

prajaprabhat

Recent Posts

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

41 minutes ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

1 hour ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

1 hour ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

2 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

2 hours ago

ಆಗಸ್ಟ್ 6 ರಂದು ಜಿಲ್ಲಾಮಟ್ಟದ ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ<br>

ಕೊಪ್ಪಳ.03.ಆಗಸ್ಟ.25:- ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಮಹಿಳಾ…

2 hours ago