ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ-ಡಾ.ಗಿರೀಶ ಬದೋಲೆ

ಬೀದರ.28.ಏಪ್ರಿಲ್.25:- ಮಹಾತ್ಮಾ ಗಾಂಧಿ ನರೆಗಾ ಯೋಜನೆಯಡಿ ಹೆಚ್ಚು ಕೂಲಿ ಕಾರರಿಗೆ ಕೆಲಸ ನೀಡುವ ಉದ್ದೇಶದಿಂದ ಏಪ್ರಿಲ್. 30 ರಿಂದ ಮೇ. 31 ರವರೆಗೆ “ಕಾಯಕ ಮಾಸಾಚಾರಣೆ ಹಮ್ಮಿಕೊಳ್ಳಲಾಗಿರುವುದರಿಂದ ಏಪ್ರಿಲ್.28 ಮತ್ತು 29 ರಂದು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ವಿಶೇಷ ಅಭಿಯಾನ ಕೈಗೊಂಡು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಕೆಲಸಕ್ಕೆ ಬರುವಂತೆ ಪ್ರೇರೆಪಿಸಬೇಕೆಂದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ ತಿಳಿಸಿದ್ದಾರೆ.


ಏಪ್ರೀಲ 30 ರಂದು ಕಾಯಕ ತತ್ವದ ಪ್ರತಿಪಾದಕರಾದ ವಿಶ್ವಗುರು ಬಸವಣ್ಣನವರ ಜಯಂತಿ ದಿನದಂದು ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರಿಗೆ ಕೆಲಸ ನೀಡುವ ಮೂಲಕ ಕಾಯಕ ಮಾಸಾಚರಣೆಯನ್ನು ಪ್ರಾರಂಭಿಸುವುದು, ಮತ್ತು ಕೂಲಿಕಾರರೊಂದಿಗೆ ಕಾಮಗಾರಿಗಳ ಸ್ಥಳಗಳಲ್ಲಿ ಬಸವ ಜಯಂಯನ್ನು ಆಚರಿಸಬೇಕೆಂದರು.


ಮಹಾತ್ಮಾ ಗಾಂಧಿ ನರೆಗಾ ಯೋಜನೆಯು ಗ್ರಾಮೀಣ ಪ್ರದೇಶದ ಪ.ಜಾತಿ/ಪ.ಪಂ/ಅತಿ ಸಣ್ಣ ರೈತರು/ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶದ ದುಡಿಯುವ ವರ್ಗ ಹಾಗೂ ದುರ್ಬಲ ವರ್ಗಗಳಿಗೆ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಕೂಲಿ ಕೆಲಸ ನೀಡುವ ಮೂಲಕ ಗ್ರಾಮೀಣ ಬಡ ಕೂಲಿಕಾರರ ಬದುಕುಗಳಿಗೆ ಆಸರೆಯಾಗುವ ಮಹತ್ವದ ಸರ್ಕಾರಿ ಯೋಜನೆಯಾಗಿದ್ದು, ಬೀದರ ಜಿಲ್ಲೆಯಲ್ಲಿ ಸಾಕಷ್ಟು ಸಂಖ್ಯೆಯ ಬಡಕೂಲಿಕಾರರು ಇದ್ದು, ಜಿಲ್ಲೆಯ ಕೂಲಿಕಾರರು ಬೇರೆ ರಾಜ್ಯಗಳಿಗೆ ಕೂಲಿ ಆರಸಿ ವಲಸೆ ಹೋಗುವುದನ್ನು ತಡೆಗಟ್ಟಿ ಅವರವರ ಗ್ರಾಮಗಳಲ್ಲಿಯೇ ಮಹಾತ್ಮಾಗಾಂಧಿ ನರೆಗಾ ಯೋಜನೆಯಡಿ ಕೂಲಿ ಕೆಲಸ ನೀಡುವ ಮೂಲಕ ಅವರನ್ನು ಅವರ ಬದುಕುಗಳಿಗೆ ಆಸರೆ ಆಗಬಹುದು ಈಗ ಬೇಸಿಗೆ ಕಾಲವು ಆರಂಭವಾಗಿದ್ದು, ಬಡವರು, ರೈತರು ಮತ್ತು ಮಹಿಳೆಯರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೆ ಖಾಲಿಯಿರುವುದರಿಂದ ಅವರುಗಳಿಗೆ ಕೂಲಿ ಕೆಲಸ ನೀಡಬೇಕಾಗಿರುತ್ತದೆಂದರು..


ತಾಲ್ಲೂಕುಗಳ ಇಅ ಸಮಾಲೋಚಕರು ಮತ್ತು ಗ್ರಾಮ ಪಂಚಾಯತಿಗಳ ಡಿ.ಇ.ಒ.ಗಳು ಮತ್ತು ಗ್ರಾಮ ಕಾಯಕ ಮಿತ್ರರು ಪಂಚಾಯತ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರು ಕೆಲಸಕ್ಕೆ ಬರುವಂತೆ ಪ್ರೆರೇಪಿಸುವುದು. ಹಾಗೂ ತಾಲೂಕಾ ಇಅ ಗಳು ಪ್ರತಿ ಗುರುವಾರ ಕಡ್ಡಾಯವಾಗಿ ರೋಜಗಾರ ದಿನಾಚಾರಣೆಯನ್ನು ಚಟುವಟಿಕೆಗಳನ್ನು ಕೈಗೊಳ್ಳಬೇಕು ಹಾಗೂ ಕೊಲಿಕಾರರಿಗೆ ಹೊಸ ಉದ್ಯೋಗ ಚೀಟಿಗಳನ್ನು ನೀಡಬೇಕು.

ಗ್ರಾಮ ಪಂಚಾಯತಿಗಳ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಖಿಂಇ ಗಳು ಮತ್ತು ಟಿಸಿ ಖಿಅ ಗಳು ಪ್ರತಿ ಗ್ರಾಮ ಪಂಚಾಯತಗಳಲ್ಲಿ ಕನಿಷ್ಠ 500 ಜನ ಕೂಲಿಕಾರರಿಗೆ ಕೆಲಸ ನೀಡುವಂತಹ ಕೆರೆ ಹೂಳೆತ್ತುವ, ನಾಲಾ ಹೂಳೆತ್ತುವ ಹಾಗು ಅಅಖಿ ಕಾಮಗಾರಿಗಳಂತಹ ಕಾಮಗಾರಿಗಳ ಹೆಚ್ಚು ಸಂಖ್ಯೆ ಓಒಖ ಗಳನ್ನು ಸೃಜಿಸುವುದು. ಹಾಗು ಒಂದು ಓಒಖ ಮುಕ್ತಾಯಗೊಂಡ ಕೂಡಲೇ ಮತ್ತೊಂದು ಓಒಖ ಕಾಮಗಾರಿ ಪ್ರಾರಂಭವಾಗುವoತೆ ನೋಡಿಕೊಳ್ಳಬೇಕು, ಯಾವುದೇ ಕಾರಣಕ್ಕೂ ಓಒಖ ಮುಕ್ತಾಯಗೊಂಡಿದೆ. ಮತ್ತೊಂದು ಓಒಖ ತೆಗೆಯತ್ತೇವೆ ಎಂದು ಹೇಳುತ್ತಾ ಕೂಲಿಕಾರರ ಕೆಲಸವನ್ನು ನಿರಾಕರಿಸಬಾರದೆಂದರು.


ಸಹಾಯಕ ನಿರ್ದೇಶಕರು (ಗ್ರಾ.ಉ) ಇವರುಗಳು ನಿಯತವಾಗಿ ಮೇಲ್ವಿಚಾರಣೆ ಮಾಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಕೆಲಸ ನೀಡಲಾಗುತ್ತಿದೆ ಎನ್ನುವುದನ್ನು ಖಚಿತ ಪಡಿಸಕೊಳ್ಳಬೇಕು. ಕಾರ್ಯನಿರ್ವಾಹಕ ಅಧಿಕಾರಿಗಳು ಮೇಲಿಂದ ಮೇಲೆ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರಿಗೆ ಕೆಲಸ ನೀಡಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವುದು. ಕಾಮಗಾರಿಗಳ ಸ್ಥಳಗಳಲ್ಲಿ ಕೂಲಿಕಾರರಿಗೆ ನೆರಳು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗು ಪ್ರಥಮ ಚಿಕಿತ್ಸೆ ಪೆಟ್ಟಿಗೆ ಸೇರಿದಂತೆ ಕೂಲಿಕಾರರ ಆರೋಗ್ಯ ತಪಾಶಣಾ ಶಿಬಿರಗಳನ್ನು ಏಪರ್ಡಿಸಬೇಕು.


ಯಾವುದೇ ಗ್ರಾಮ ಪಂಚಾಯತಯಲ್ಲಿ ಕೂಲಿಕಾರರಿಗೆ ಕೆಲಸ ನೀಡದೆ ಇದ್ದರೆ ಅಂತಹ ಪಂಚಾಯತ ಅಭಿವೃದ್ಧಿ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

3 hours ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

4 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

4 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

4 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

4 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

4 hours ago