ಬೆಂಗಳೂರು.05.ಮಾರ್ಚ.25:- ರಾಜ್ಯದಲ್ಲಿ ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಗುರಿಯಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಕುರಿತು ವಿಧಾನಸಭೆಯಲ್ಲಿ ಮಾಹಿತಿ ನೀಡಿದೆ.
‘ನಮ್ಮ ಗ್ರಾಮ, ನಮ್ಮ ಹೊಲ’ ಯೋಜನೆ ಸ್ಥಗಿತವಾಗಿರುವುದರಿಂದ ರೈತರು ಹೊಲಕ್ಕೆ ಹೋಗುವ ದಾರಿಗಳಿಗೆ ಅವಕಾಶ ಕಲ್ಪಿಸುವ ನೀತಿಯನ್ನು ಹೊಸ ರೂಪದಲ್ಲಿ ತರುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದು ಈ ಬಜೆಟ್ನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.
‘ಪ್ರಗತಿಪಥ’ ಎಂಬ ವಿನೂತನ ಕಾರ್ಯಕ್ರಮದಡಿ ₹5,000 ಕೋಟಿ ಖರ್ಚು ಮಾಡಿ, ಎಲ್ಲ ಶಾಸಕರಿಗೆ ಕನಿಷ್ಠ 15 ಕಿಮೀ ರಸ್ತೆ ಅಭಿವೃದ್ಧಿ ಅವಕಾಶ ಕೊಡಬೇಕು ಸಂಕಲ್ಪ ಇಟ್ಟುಕೊಂಡಿದ್ದೇವೆ. ಇದಕ್ಕೆ ಆರ್ಥಿಕ ವ್ಯವಹಾರಗಳ ಇಲಾಖೆಯಿಂದ ಸಮ್ಮತಿ ಸಿಕ್ಕಿದೆ. ಈ ತಿಂಗಳ ಒಳಗೆ ಇದರ ಎಲ್ಲ ಮಾನದಂಡಗಳನ್ನು ಕಾರ್ಯಕಾರಿ ಎಂಜಿನಿಯರ್ಗೆ ತಲುಪಿಸಿ, ಎಲ್ಲ ಶಾಸಕರ ಆದ್ಯತೆ ಮೇರೆಗೆ ಯೋಜನೆ ಜಾರಿಗೆ ತರುತ್ತೇವೆ.
ಹಾಗೆಯೇ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ನಾಲ್ಕನೆಯ ಹಂತದ ಮಾನದಂಡಗಳನ್ನು ಪ್ರಕಟಿಸಲಾಗಿದ್ದು, ನಮ್ಮ ರಾಜ್ಯದಲ್ಲಿ ದೊಡ್ಡ ಗ್ರಾಮಗಳಿಗೆ ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ರಸ್ತೆಗಳು ಮಂಜೂರು ಆಗಿವೆ. ಆದರೆ ಇದರ ಮಾನದಂಡಗಳನ್ನು ಸರಳೀಕರಣ ಮಾಡಬೇಕು ಎಂದು ಕೋರಿ ಕೆಲವು ತಿಂಗಳ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಅದು ಸಾಧ್ಯವಿಲ್ಲ ಎಂದು ತಿರಸ್ಕಾರ ಮಾಡಿದ್ದಾರೆ.
ಮತ್ತೊಮ್ಮೆ ರಾಜ್ಯದ ಪರವಾಗಿ ಕೇಂದ್ರ ಸರ್ಕಾರಕ್ಕೆ ವಿನಂತಿ ಮಾಡುತ್ತೇನೆ. ಅವರು ಮಾನದಂಡ ಬದಲಾವಣೆ ಮಾಡದ ಕಾರಣ ‘ಪ್ರಗತಿ ಪಥ’ ಮತ್ತು ‘ಕಲ್ಯಾಣ ಪಥ’ ಯೋಜನೆಗಳನ್ನು ತಂದಿದ್ದೇವೆ. ಇದರೊಂದಿಗೆ ಗ್ರಾಮ ಸಡಕ್ ಯೋಜನೆ ಕೂಡ ಬಂದರೆ ರಾಜ್ಯದ ಗ್ರಾಮಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಕ್ರಾಂತಿ ನಡೆಯಲಿದೆ.
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…