ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸರ್ಕಾರ ಅನುಮೋದನೆ.!

ಬೆಂಗಳೂರು.24.ಮಾರ್ಚ್.25:-ರಾಜ್ಯದಲ್ಲಿ ಬಹುದಿನಿಂದ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡುವ ಕುರಿತು ಆದೇಶ.

ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಉಲ್ಲೇಖ(1) ರ ಆದೇಶದಲ್ಲಿ ವಾಟರ್ ಅಪರೇಟರ್, ಅಟೆಂಡ‌ರ್ ಹಾಗೂ ಸ್ವಚ್ಛತಾಗಾರರಿಗೆ ದಿನಾಂಕ:31.10.2017 ಕ್ಕಿಂತ ಹಿಂದೆ ನೇಮಕಗೊಂಡು, ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಇರುವ ಸಿಬ್ಬಂದಿಗಳಿಗೆ ಕನಿಷ್ಠ ವಿದ್ಯಾರ್ಹತೆಯನ್ನು ಹೊರತುಪಡಿಸಿ (ಕೈಬಿಟ್ಟು) ಸಭಾ ನಡವಳಿ ವೇತನ ಪಾವತಿ ಹಾಜರಾತಿ ಆಧಾರದ ಮೇಲೆ ಒಂದು ಬಾರಿಗೆ ಜಿಲ್ಲಾ ಪಂಚಾಯತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಆದೇಶಿಸಲಾಗಿರುತ್ತದೆ.

ಉಲ್ಲೇಖ(2)ರಲ್ಲಿ ದಿನಾಂಕ:31.10.2017 ಕ್ಕಿಂತ ಹಿಂದೆ ನೇಮಕಗೊಂಡು, ಎಲ್ಲಾ ದಾಖಲೆಗಳು ಸರಿಯಾಗಿದ್ದು, ಜಿಲ್ಲಾ ಪಂಚಾಯತಿಯಿಂದ ಅನುಮೋದನೆಗೆ ಬಾಕಿ ಇರುವ ಸಿಬ್ಬಂದಿಗಳಿಗೆ ಅನುಮೋದನೆ ನೀಡುವ ಕುರಿತು ಆದೇಶಿಸಲಾಗಿರುತ್ತದೆ. ಉಲ್ಲೇಖ(3) ರಲ್ಲಿ ಮೇಲ್ಕಂಡ ಆದೇಶಗಳನ್ವಯ ವಹಿಸಿರುವ ಕ್ರಮದ ಕುರಿತು ಮಾಹಿತಿಯನ್ನು ನೀಡಲು ಎಲ್ಲಾ ಜಿಲ್ಲಾ ಪಂಚಾಯತಿಗಳಿಗೆ ಕೋರಲಾಗಿದ್ದು, ಸ್ವೀಕೃತ ಮಾಹಿತಿಯನ್ನು ಪರಿಶೀಲಿಸಲಾಗಿ ಜಿಲ್ಲೆಗಳ ಹಂತದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಅನುಮೋದನೆ ಬಾಕಿ ಉಳಿದಿರುವುದು ಕಂಡು ಬಂದ ಕಾರಣ ಉಲ್ಲೇಖ(4) ರಂತೆ ಅರೆ ಸರ್ಕಾರಿ ಪತ್ರದಲ್ಲಿಯೂ ಸಹ ಈ ವಿಷಯವನ್ನು ಆದ್ಯತೆ ಮೇಲೆ ಪರಿಗಣಿಸಿ ಅನುಮೋದನೆ ನೀಡಲು ತಿಳಿಸಲಾಗಿರುತ್ತದೆ.

ಸದರಿ ವಿಷಯದ ಕುರಿತು, ರಾಜ್ಯ ಮಟ್ಟದಲ್ಲಿ ನಡೆದ ಹಲವಾರು ಸಭೆಗಳಲ್ಲಿ ಸಹ ಚರ್ಚೆಯಾಗಿರುತ್ತದೆ. ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೋದನೆ ನೀಡಲು ಸರ್ಕಾರದಿಂದ ಆದೇಶ ನೀಡಿದ್ದರೂ ಈವರೆಗೆ ಸಿಬ್ಬಂದಿಗಳಿಗೆ ಅನುಮೋದನೆ ನೀಡಲು ವಿಳಂಭವಾಗಿದ್ದು ಸದರಿ ವಿಷಯವನ್ನು ಆದ್ಯತೆ ಮೇರೆಗೆ ಪರಿಗಣಿಸಿ ಮತ್ತಷ್ಟು ವಿಳಂಬಕ್ಕೆ ಆಸ್ಪದ ನೀಡದೇ ವೈಯಕ್ತಿಕ ಗಮನ ಹರಿಸಿ ಗ್ರಾಮ ಪಂಚಾಯತಿಯ ಸಿಬ್ಬಂದಿಗಳಿಗೆ ಉಲ್ಲೇಖಿತ ಆದೇಶಗಳಂತೆ ಅನುಮೋದನೆಯನ್ನು ನೀಡಲು ಕ್ರಮವಹಿಸುವಂತೆ ತಿಳಿಸಿದೆ.

prajaprabhat

Recent Posts

ಭಾರತೀಯ ರೈಲ್ವೆ ಇಲಾಖೆಯಲ್ಲಿ 6374 ಹುದ್ದೆಗಳಿಗೆ ಅರ್ಜಿ ಆಹ್ವಾನ |

ಹೊಸ ದೆಹಲಿ.17.ಜೂನ್.25:- ಭಾರತೀಯ ರೈಲ್ ಎಲಾಖೆಯೆಲ್ಲಿ ವಿವಿಧ ತಂತ್ರಜ್ಞ ಹುದ್ದೆಗೆ ರೈಲ್ವೆ ನೇಮಕಾತಿ ಮಂಡಳಿಗಳು (RRB) ವರ್ಷಕ್ಕೆ 51 ವಿಭಾಗಗಳಲ್ಲಿ…

2 hours ago

ವಿಶ್ವವಿದ್ಯಾಲಯ ವ್ಯವಸ್ಥೆಯಲ್ಲಿ ಅತಿಥಿ ಅಧ್ಯಾಪಕರು: ಸಮಸ್ಯೆಗಳು ಮತ್ತು<br>ಸವಾಲುಗಳು

ಶಿಕ್ಷಕರು ಶೈಕ್ಷಣಿಕ ವ್ಯವಸ್ಥೆಯ ಪ್ರಮುಖ ಭಾಗ. ಶಿಕ್ಷಕರ ಸಹಾಯದಿಂದ, ಶೈಕ್ಷಣಿಕ ವ್ಯವಸ್ಥೆಯು ವಿದ್ಯಾರ್ಥಿಗಳು ತಮ್ಮನ್ನು ತಾವು ಹೆಚ್ಚು ಅರ್ಥಮಾಡಿಕೊಳ್ಳುವಂತೆ ಯಶಸ್ವಿಯಾಗಿ…

4 hours ago

ರಾಜ್ಯದಲ್ಲಿ 13,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ.!

ರಾಜ್ಯದ ಶಾಲೆಗಳಲಿ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ…

4 hours ago

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್…

12 hours ago

ಉಚಿತ ಮೂರು ತಿಂಗಳ UPSC Coaching ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಅರ್ಜಿ ಆಹ್ವಾನ

2025-26 ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಇಲಾಖೆವತಿಯಿಂದ ಬೆಂಗಳೂರು ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ…

12 hours ago

ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ ಗ್ರಾಮೀಣ ಕೌಶಲ ಎಂದರೆ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ…

14 hours ago