ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು

ಬೆಂಗಳೂರು.27.ಮಾರ್ಚ್.25:- ರಾಜ್ಯ ಸರ್ಕಾರ ಈ ವರ್ಷದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿದ ನಂತರ ನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೆ ತರುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಅಂಶಗಳನ್ನು ಪ್ರಕಟಿಸಲಾಯಿತು.

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಸಂಬಂಧ, ಸರ್ಕಾರ ಮಸೂದೆ ಅಂಗೀಕರಿಸಿರುವ ಹಿನ್ನೆಲೆಯಲ್ಲಿ ಇ-ಸ್ವತ್ತು ಪದ್ಧತಿಯಲ್ಲಿ ಸುಧಾರಣೆ ತರಲು ಹಾಗೂ ಅವಶ್ಯವಿದ್ದಲ್ಲಿ ಸೂಕ್ತ ನೀತಿ ನಿಯಮಗಳನ್ನು ರೂಪಿಸುವ ಸಲುವಾಗಿ ಸಮಿತಿಯೊಂದನ್ನು ರಚಿಸಲಾಗುವುದು.

ಉದ್ದೇಶಿತ ಸಮಿತಿಯಲ್ಲಿ ಅಧಿಕಾರಿಗಳು ಮಾತ್ರವಲ್ಲದೆ, ಸಂಬಂಧಿಸಿದ ಕ್ಷೇತ್ರದಲ್ಲಿ ಪರಿಣಿತರಾದ ಅಧಿಕಾರೇತರ ಸದಸ್ಯರೂ  ಇರುತ್ತಾರೆ. ಸಮಿತಿಯ ಕಾರ್ಯವ್ಯಾಪ್ತಿ, ಕಾಲಾವಧಿ ಮುಂತಾದ ನಿಯಮಗಳನ್ನು ರೂಪಿಸಿ ಸಮಿತಿಯನ್ನು ರಚಿಸಲಾಗುವುದು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಬಡಾವಣೆಗಳಲ್ಲಿ ಹಾಗೂ ಗ್ರಾಮಠಾಣ ಹೊರತುಪಡಿಸಿದಂತೆ ನಿರ್ಮಿಸಿದ ಕಟ್ಟಡಗಳನ್ನು ಸಕ್ರಮಗೊಳಿಸುವ ಸಲುವಾಗಿ ಇ-ಸ್ವತ್ತು ಖಾತಾ ಒದಗಿಸಲು ಅವಕಾಶ ಮಾಡಿಕೊಡುವ ಮಸೂದೆಗೆ ವಿಧಾನಮಂಡಲದ ಉಭಯ ಸದನಗಳು ಇತ್ತೀಚೆಗೆ ಒಪ್ಪಿಗೆ ನೀಡಿವೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇಂತಹ ಸುಮಾರು 96 ಲಕ್ಷ ಸ್ವತ್ತುಗಳು ಇವೆ ಎಂದು ಅಂದಾಜು ಮಾಡಲಾಗಿದೆ.

prajaprabhat

Recent Posts

ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ.

ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…

5 hours ago

ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…

8 hours ago

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ವಿವಿಧ ವಿಭಾಗಗಳಲ್ಲಿ…

8 hours ago

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

15 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

15 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

17 hours ago