ದಕ್ಷಿಣ ಕನ್ನಡ.21.ಜೂನ್.25: ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ. ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ಸದ್ಯ ವಿವಾದ ಸೃಷ್ಟಿಯಾಗಿದೆ.
ಮೇಲ್ಕಂಡ ವಿಷಯಕ, ಸಂಬಂಧಿಸಿದಂತೆ, ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಇಲಾಖೆಯ ಅಧಿಕಾರಿಯವರು ಮತ್ತು ಜನಪ್ರತಿನಿಧಿಯವರು ಚರ್ಚಿಸುವಾಗ ತುಳು ಭಾಷೆ ಬಳಕ ಮಾಡದಂತೆ ಮತ್ತು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ನಿರ್ದೇಶನ ನೀಡಲು ಉಲ್ಲೇಖ (1)ರಂತೆ ಮನವಿ ಸಲ್ಲಿಸಿರುತ್ತಾರೆ. ಸದ್ದಿ_ಉಲ್ಲೇಖಿತ ಮನವಿಯನ್ನು ಈ ಪತ್ರದೊಂದಿಗೆ ಲಗತ್ತಿಸುತ್ತಾ, ಮನವಿಯ ಕುರಿತು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ.
