Categories: ಬೀದರ

ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಸ್ಪರ್ಧೆಗಳು ಎಲ್ಲರಸಹಕಾರದೊಂದಿಗೆ ಯಶಸ್ಸು ಸಾಧಿಸಿದೆ-ರಂಗನಾಥ ಪಲ್ಲೇದ್


ಬೀದರ, ನವೆಂಬರ್.30:- ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಗಳು ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಯಶಸ್ಸನ್ನು ಸಾಧಿಸಿದೆ ಹಾಗೂ ಅಕ್ಷರ ಫೌಂಡೇಶನ್ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಇಲಾಖೆಯ ಸಹಕಾರದೊಂದಿಗೆ ಸಕ್ರೀಯವಾಗಿ ತೊಡಗಿಸಿಕೊಂಡಿರುವುದು 2024-25ನೇ ವರ್ಷಕ್ಕೆ 25 ವರ್ಷಗಳು ಪೂರೈಸಲಿದೆ ಎಂದು ಅಕ್ಷರ ಫೌಂಡೇಶನ್ ವಿಭಾಗೀಯ ವ್ಯವಸ್ಥಾಪಕರಾದ ರಂಗನಾಥÀ ಪಲ್ಲೇದ್À ಹೇಳಿದರು.
ಅವರು ಗುರುವಾರ ಡಯಟ್ ಸಭಾಂಗಣ ನೌಬಾದ ಬೀದರದಲ್ಲಿ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕೀರಣ 2024-25 ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಶಾಲಾ ಸಿಕ್ಷಣ ಇಲಾಖೆ ಮತ್ತು ಅಕ್ಷರ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕೀರಣದ ಗ್ರಾಮ ಪಂಚಾಯತ ಗಣಿತ ಸ್ಪರ್ಧೆಗಳ ಜಿಲ್ಲಾ ವರದಿ ಬಿಡುಗಡೆ ಹಾಗೂ ಶಾಲಾ ಮತ್ತು ಗ್ರಾಮ ಪಂಚಾಯತಗಳ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಶಿಕ್ಷಣ ಇಲಾಖೆಗೆ ಹಾಗೂ ಗ್ರಾಮ ಪಂಚಾಯತ್ ಇಲಾಖೆಗೆ ಅಭಿನಂದಿಸುವ ಉದ್ದೇಶದಿಂದ ಗ್ರಾಮ ಪಂಚಾಯತ್ ಮಟ್ಟದ ಗಣಿತ ಸ್ಪರ್ಧೆಗಳ ಮಕ್ಕಳ ಫಲಿತಾಂಶದ ಆಧಾರದ ಮೇಲೆ ಜಿಲ್ಲೆಯ 25 ಶಾಲೆಗಳನ್ನು ಹಾಗೂ 25 ಪಂಚಾಯತಗಳನ್ನು ಗುರುತಿಸಿ ಜಿಲ್ಲಾ ಮಟ್ಟದ ಗಣಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಅವರ ಉಪಸ್ಥಿತಿಯಲ್ಲಿ ಸರಕಾರಿ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯೋಪಾಧ್ಯಯರವರಿಗೆ ಮತ್ತು ಗ್ರಾಮ ಪಂಚಾಯತ ಅಧ್ಯಕ್ಷರು, ಪಿಡಿಓ ಅವರಿಗೆ ಸನ್ಮಾನಿಸಲಾಗುವುದು ಹಾಗೂ ಗ್ರಾಮ ಪಂಚಾಯತ ಮಟ್ಟದ ಗಣಿತ ಸ್ಪರ್ಧೆಗಳ ಜಿಲ್ಲಾ ವರದಿಯನ್ನು ಬಿಡುಗಡೆಗೊಳಿಸಲಾಗುವುದು ಎಂದರು.


ಗಣಿತ ಕಲಿಕಾ ಆಂದೋಲನ ಯೋಜನೆಯು ಸುಮಾರು ವರ್ಷಗಳಿಂದ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ಹಾಗೂ ಮಕ್ಕಳು ಗಣಿತ ವಿಷಯವನ್ನು ಸರಳವಾಗಿ, ಅನುಭವಾತ್ಮಕವಾಗಿ ಕಲಿಯಲು ಜಿಲ್ಲೆಯ ಪ್ರತಿ ಶಾಲೆಗಳಿಗೆ ಗಣಿತ ಕಿಟ್ ನೀಡುವುದರ ಮೂಲಕ ಅನುಷ್ಠಾನಗೊಂಡಿರುತ್ತದೆ. ಈ ಯೋಜನೆಯಡಿ ಬೀದರ ಜಿಲ್ಲೆಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಸಮುದಾಯ, ಶೈಕ್ಷಣಿಕ ಸ್ವಯಂ ಸೇವಕರು, ಗ್ರಾಮ ಪಂಚಾಯತ ಮಟ್ಟದ ಶೈಕ್ಷಣಿಕ ತಂಡದ ನಾಯಕರು ಹಾಗೂ ಅಕ್ಷರ ಫೌಂಡೇಶನ್ ಸಹಭಾಗೀತ್ವದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಸ್ಪರ್ಧೆಗಳನ್ನು 4ನೇ ತರಗತಿಯಿಂದ 6ನೇ ತರಗತಿಯ ಮಕ್ಕಳಿಗೆ ಒಟ್ಟು 185 ಗ್ರಾಮ ಪಂಚಾಯತಿಗಳಲ್ಲಿ ಮಾಡಲಾಯಿತು. ಸುಮಾರು 16000 ಮಕ್ಕಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಬೀದರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ.ಆರ್.ಡೊಡ್ಡೆ ಅವರು ಜಿಲ್ಲಾ ಮಟ್ಟದ ಗಣಿತ ವರದಿಯನ್ನು ಬಿಡುಗಡೆಗೊಳಿಸಿದರು. ಹಾಗೂ 25 ಶಾಲೆಗಳ ಮುಖ್ಯ ಶಿಕ್ಷಕರು ಮತ್ತು 25 ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಪಿಡಿಓಗಳಿಗೆ ಸನ್ಮಾನಿಸಲಾಯಿತು.


ಈ ಕಾರ್ಯಕ್ರಮದಲ್ಲಿ ಬೀದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ (ಅಭಿವೃದ್ಧಿ) ಎಸ್.ಎಲ್.ಪ್ರಸನ್ನ ಕುಮಾರ, ಬೀದರ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ರವೀಂದ್ರ ರೆಡ್ಡಿ, ಅಜೀಂ ಪ್ರೇಮ್ ಜೀ ಫೌಂಡೇಶನ್‌ದ ಶಿವಕುಮಾರ, ಅಗಸ್ತö್ಯ ಫೌಂಡೇಶನ್‌ದ ಜಿಲ್ಲಾ ಮುಖ್ಯಸ್ಥರಾದ ಬಾಬುರಾವ್ ಎಸ್., ಬೆಂಗಳೂರು ವಿಭಾಗೀಯ ವ್ಯವಸ್ಥಾಪಕರಾದ ರಂಗನಾಥ್ ಪಲ್ಲೇದ್, ವಿಭಾಗೀಯ ಸಂಯೋಜಕರಾದ ಪ್ರದೀಪರೆಡ್ಡಿ, ಉಪನ್ಯಾಸಕರಾದ ಗೋವಿಂದರೆಡ್ಡಿ, ಧನರಾಜ ಗುಡುಮೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Share
Published by
prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

8 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

8 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

8 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago