ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯ್ತಿ ಸಂಗ್ರಹಿಸಲು ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪುಕ್ರಿಯೆಗಳ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ ಎಂದಿದ್ದಾರೆ.

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಡಿ) ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕುಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ದಿನಾಂಕ: 17.05.2025 ರಂದು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಹಾಗೂ ದಿನಾಂಕ:17.05.2025 ರಂದು ಆಯುಕ್ತರು, ಕಂದಾಯ ಇಲಾಖೆ ರವರ ಪತ್ರದಲ್ಲಿ ಕೋರಿರುವಂತೆ, ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ರ ಪುಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ವಾಸದ ಮನೆಯ ಅಧಿಕೃತ ಹಕ್ಕುದಾಖಲೆಯನ್ನು ನೀಡಲಾಗುತ್ತಿದೆ. ಇತ್ತೀಚಿಗೆ ಕಂದಾಯ, ನೋಂದಣಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳು ಸೇರಿ ಹಕ್ಕುಪತ್ರವನ್ನು ನೋಂದಾಯಸಿ ಇ-ಸ್ವತ್ತು ದಾಖಲೆಯನ್ನು ಫಲಾನುಭವಿಗೆ ನೀಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.

ಅದರಂತೆ, ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ ತಹಶೀಲ್ದಾರರ ಹೆಸರಿಗೆ ದಾಖಲೆ ನಮೂದಿಸುವಾಗ ಶುಲ್ಕ ವಿನಾಯಿತಿ ನೀಡಿದ ಆದರೆ ತಹಶೀಲ್ದಾರರು ಫಲಾನುಭವಿಗೆ ಆಸ್ತಿಯನ್ನು ನೋಂದಾಯಿಸಿ ನೀಡುವ ಸಂದರ್ಭದಲ್ಲಿ 1000 ಶುಲ್ಕವನ್ನು ಪಾವತಿಸಬೇಕಾಗಿದೆ. . ಈ ಯೋಜನೆಯ ಫಲಾನುಭವಿಗಳಿಗೆ ಪ್ರಕರಣ 94-(ಸಿ), 94-(ಸಿಸಿ), 94-(ಡಿ) ಹಾಗೂ ಭೂಸುಧಾರಣಾ ಕಾಯ್ದೆ 1961 ಕಲಂ 38 ಅ ಅಡಿಯಲ್ಲಿ ನೀಡುವ ಹಕ್ಕುಪತ್ರಗಳಿಗೆ ಡ್ಯೂಟೇಶನ್ ಶುಲ್ಕದಲ್ಲಿ ರಿಯಾಯತಿ ನೀಡುವ ಬಗ್ಗೆ ಪರಿಶೀಲಿಸಲು ತಿಳಿಸಿರುತ್ತಾರೆ.

ಇದೊಂದು ವಿಶೇಷ ಪ್ರಕರಣವಾಗಿರುವುದರಿಂದ ಹೊಸದಾಗಿ ಪುಕ್ರಿಯೆಯನ್ನು ಸೂಚಿಸುವುದು ಅಗತ್ಯವೆಂದು ಕಂಡುಬಂದಿರುವುದರಿಂದ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ94(ಸಿ), 94(ಸಿ.ಸಿ) ಹಾಗೂ 94-ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮ ಪಂಚಾಯತಿ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಪುಕರಣ 94(ಸಿ), 94(ಸಿ.ಸಿ) ಹಾಗೂ 94-(ಡಿ) ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ವಿತರಿಸುವಾಗ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಯ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2021 ರ ನಿಯಮ 24 ರಂತೆಆಸ್ತಿ ವಿವರಗಳ ವಹಿಯಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆ ಶುಲ್ಕ ರೂ 1000/- ರಂತೆ ವಿಧಿಸತಕ್ಕದಾಗಿದ್ದು, ಮೇಲೆ ವಿವರಿಸಿರುವ ಯೋಜನೆಯ ಫಲಾನುಭವಿಗಳಿಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ ಬದಲಾವಣೆ ಶುಲ್ಕವನ್ನು ನಮೂನೆ 9 ಮತ್ತು 11-ಎ ವಿತರಿಸಿದ ಒಂದು ವರ್ಷದಲ್ಲಿ ಗರಿಷ್ಠ ನಾಲ್ಕು ಕಂತುಗಳಲ್ಲಿ ಗ್ರಾಮಪಂಚಾಯತಿ ಸಂಗ್ರಹಿಸಲು ಆದೇಶಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

4 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

4 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

4 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

7 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

7 hours ago