ಗ್ರಾಮೀಣ ಭಾಗದಲ್ಲಿ ಸಂಸ್ಕಾರಯುತ ಶಿಕ್ಷಣ.
ಬೀದರ.21.ಫೆ.25:-ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಷ್ಟç ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ತೋರುತ್ತಿರುವುದು ಹೆಮ್ಮೆ ತರಿಸಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಗೃಹ ಕಚೇರಿಯಲ್ಲಿ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಜೆಇಇ(ಮೆನ್ಸ್)-೨೦೨೫ ಫೇಸ್-೧ರ ಸಾಧಕ ವಿದ್ಯಾರ್ಥಿಗಳ ಕರಪತ್ರ ಗುರುವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಕಳಚಲು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಶೈಕ್ಷಣಿಕವಾಗಿ ಕಳೆದ ಮುರ್ನಾಲ್ಕು ದಶಕಗಳಿಂದ ಶ್ರಮಿಸುತ್ತಿದೆ.
ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತೆರೆದ ವಿದ್ಯಾ ಸಂಸ್ಥೆಯಲ್ಲಿ ಗುಣಾತ್ಮಕ ಮತ್ತು ಸಂಸ್ಕಾರಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದನ್ನು ಕಂಡಿದ್ದೇನೆ.
ಆ ಕಾರಣಕ್ಕಾಗಿಯೇ ಇಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಉತ್ತಮ ಸಾಧನೆ ತೋರುತ್ತಿದ್ದಾರೆ ಎಂದರು.
ಕನ್ನಡ ಮಾಧ್ಯಮದಲ್ಲಿ ಕಲಿತ ಹೆಚ್ಚಿನ ವಿದ್ಯಾರ್ಥಿಗಳು ನೀಟ್, ಎಂಜನಿಯರಿAಗ್, ಐಐಟಿ, ಎನ್ ಐಟಿ ಸೇರಿ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ್ಯಾಂಕ್ ಪಡೆಯುತ್ತಿರುವುದು ಇಲ್ಲಿಯ ಗುಣಾತ್ಮಕ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿ.
ಮುಂದಿನ ದಿನಗಳಲ್ಲಿ ಈ ಸಂಸ್ಥೆಯಿAದ ಮತ್ತಷ್ಟು ಸಾಧಕ ವಿದ್ಯಾರ್ಥಿಗಳು ಹೊರಬಂದು ಈ ಭಾಗ ಶೈಕ್ಷಣಿಕ ಪ್ರಗತಿ ಸಾಧಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನ ಆಡಳಿತಾಧಿಕಾರಿ ಮೋಹನ ರೆಡ್ಡಿ, ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ, ಶಿವಕುಮಾರ ಬಿರಾಜದಾರ್, ಅಭಿಷೇಕ ರಾಹುಲ ಇದ್ದರು.
ಕೋಟ್
ಚನ್ನಬಸವೇಶ್ವರ ಗುರುಕುಲ ಸಾಧಕ ವಿದ್ಯಾರ್ಥಿಗಳ ಕಣಜವಾಗಿದೆ. ಪ್ರಸ್ತುತ ªಷÀðದಲ್ಲಿ ಜೆಇಇ ಮೇನ್ಸ್ ನಲ್ಲಿ ೩೦೦ ವಿದ್ಯಾರ್ಥಿಗಳು ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿರುವುದು ಹೆಮ್ಮೆಯ ಸಂಗತಿ.
– ಶಿಲ್ಪಾ ಶರ್ಮಾ ಜಿಲ್ಲಾಧಿಕಾರಿಗಳು ಬೀದರ್
ಗಡಿಭಾಗ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎನ್ನುವ ಸದಾಶಯದೊಂದಿಗೆ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಕಟ್ಟಿದ ವಿದ್ಯಾ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯ, ರಾಷ್ಟç ಬೆಳಗಿಸುವ ಕೆಲಸ ಮಾಡುತ್ತಿರುವುದು ಸಂತಸ ತರಿಸಿದೆ.
– ಗುರುಬಸವ ಪಟ್ಟದ್ದೇವರು ಹಿರೇಮಠ ಸಂಸ್ಥಾನ ಭಾಲ್ಕಿ
