ಬೀದರ್ನ ಚನ್ನಬಸವೇಶ್ವರ ಗುರುಕುಲದಲ್ಲಿ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆ
ಪರೀಕ್ಷೆ ಬರೆದ ೨೦೦೦ ವಿದ್ಯಾರ್ಥಿಗಳು
ಬೀದರ್, ನಗರದ ರಾಂಪೂರೆ ಬ್ಯಾಂಕ್ ಕಾಲೋನಿಯಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನಡಿ ನೂತನವಾಗಿ ಆರಂಭಿಸಿರುವ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ೨ ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಗೆ ಎಸ್ಸೆಸ್ಸೆಲ್ಲಿಯಲ್ಲಿ ವ್ಯಾಸಂಗ ಮಾಡುತ್ತಿರುವ ೧೫೦೦ ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದರು. ಆದರೆ ಕಾಲೇಜು ಆರಂಭದ ವರ್ಷದಲ್ಲೇ ನಿರೀಕ್ಷೆಗೂ ಮೀರಿ ಯಶಸ್ಸು ದೊರತಿದೆ.
ಪರೀಕ್ಷೆಗೆ ಆನ್ಲೈನ್ ಮೂಲಕ ೧೫೦೦ ಮತ್ತು ಆಫ್ಲೈನ್ ಮೂಲಕ ೫೦೦ ಸೇರಿ ಒಟ್ಟು ೨ ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಬೀದರ್ ನಗರದ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದಲ್ಲದೇ ಜಿಲ್ಲೆಯ ಎಲ್ಲ ತಾಲೂಕು ಸೇರಿ ಉಡುಪಿ, ಕಲಬುರಗಿ, ವಿಜಯಪುರ ಮತ್ತು ಮಹಾರಾಷ್ಟç ರಾಜ್ಯದ ಭಾಗದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಬೆಳಿಗ್ಗೆ ೧೦ ರಿಂದ ೧೨ ಮತ್ತು ೧ ರಿಂದ ೩ ಗಂಟೆ ವರೆಗೆ ಎರಡು ಹಂತದಲ್ಲಿ ಪರೀಕ್ಷೆ ಜರುಗಿದ್ದವು. ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಯಲ್ಲಿ ಮೊದಲ ಹಂತದಲ್ಲಿ ಹೆಚ್ಚು ಅಂಕ ಗಳಿಸುವ ೨೫ ವಿದ್ಯಾರ್ಥಿಗಳಿಗೆ ಉಚಿತ ಎರಡು ವರ್ಷ ಪಿಯುಸಿ ಶಿಕ್ಷಣ ಮತ್ತು ಸ್ಪರ್ಧಾತ್ಮಕ ತರಬೇತಿ ನೀಡಲಾಗುತ್ತದೆ. ನಂತರದ ೨೫ ವಿದ್ಯಾರ್ಥಿಗಳಿಗೆ ಕಾಲೇಜಿನ ಶುಲ್ಕದಲ್ಲಿ ಅರ್ಧದಷ್ಟು ರಿಯಾಯಿತಿ ನೀಡಲಾಗುತ್ತದೆ ಎಂದು ಆಡಳಿತಾಧಿಕಾರಿ ಮೋಹನ ರೆಡ್ಡಿ ತಿಳಿಸಿದ್ದಾರೆ.
ಬೆಸ್ಟ್ ಆಫ್ ಲಕ್ :
ಪರೀಕ್ಷೆ ತರಗತಿ ಕೋಣೆಗಳಿಗೆ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಶಿವಾನಂದ ಸ್ವಾಮೀಜಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಆಡಳಿತಾಧಿಕಾರಿ ಮೋಹನ ರೆಡ್ಡಿ, ಪ್ರಾಚಾರ್ಯರಾದ ಬಸವರಾಜ ಮೊಳಕೀರೆ, ಲೋಕೇಶ ಉಡಬಾಳೆ, ಉಪನ್ಯಾಸಕರಾದ ಸಾಯಿನಾಥ ಬಿರಾದಾರ್, ರವಿ ಬಿರಾದಾರ್, ಶಿವಪ್ರಕಾಶ ಕುಂಬಾರ, ಹಣಮಂತ ಜ್ಯಾಂತಿಕರ್, ಜಯಲಕ್ಷ್ಮಿ, ಗುರುಪ್ರಿತ ಕೌರ, ಪ್ರವೀಣ ಸ್ವಾಮಿ, ಪ್ರಶಾಂತ ರೆಡ್ಡಿ ಇದ್ದರು.
ಕೋಟ್
ಬೀದರ್ ನಗರದಲ್ಲಿ ಹೊಸದಾಗಿ ಚನ್ನಬಸವೇಶ್ವರ ಗುರುಕುಲ ಪದವಿ ಪೂರ್ವ ಕಾಲೇಜು ಆರಂಭಿಸಿದ್ದೇವೆ. ನುರಿತ ಬೋಧಕರ ತಂಡ ಇದ್ದು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಸಿಗಲಿದೆ. ಕಾಲೇಜು ಆರಂಭದ ವರ್ಷದಲ್ಲೇ ಸ್ಕಾಲರ್ ಶಿಪ್ ಪ್ರವೇಶ ಪರೀಕ್ಷೆಗೆ ೨ ಸಾವಿರ ವಿದ್ಯಾರ್ಥಿಗಳು ಹಾಜರಾಗಿರುವುದು ಸಂತಸ ತರಿಸಿದೆ.
– ಗುರುಬಸವ ಪಟ್ಟದ್ದೇವರು ಹಿರೇಮಠ ಸಂಸ್ಥಾನ ಭಾಲ್ಕಿ
ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…
ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…
ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…
ಫ್ರೆಂಚ್ ಓಪನ್ ಟೆನಿಸ್ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…
"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…
ಭಾರತದ ಮೇಲಿನ ಯಾವುದೇ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡಲಾಗುವುದು ಮತ್ತು ಭಯೋತ್ಪಾದಕರು ಮತ್ತು ಅವರ ಅಪರಾಧಿಗಳ ನಡುವೆ ಯಾವುದೇ ವ್ಯತ್ಯಾಸವನ್ನು…