ತುಮಕೂರು.04.ಮಾರ್ಚ.25:- ಚಿಕ್ಕನಾಯಕನಹಳ್ಳಿ ತಾಲೂಕನಲ್ಲಿ 1982 ರಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಉಳುವವನೆ ಭೂಮಿ ಒಡೆಯ ಎಂಬ ಕಾಯಿದೆಯಿದ್ದರು ಕೂಡ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಬಾಪುರ ಗ್ರಾಮದ ಜನ ಭೂಮಿ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದಾರೆ.
1965 ರಿಂದಲು ಉಳುಮೆ ಮಾಡಿಕೊಂಡು ಬಂದಿದ್ದರು ಕೂಡ ಈಗ ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ, ಅದರ ಬದಲು ಒಂದು ತೊಟ್ಟು ವಿಷ ಕೊಡಿ ಕುಡಿದು ನೆಮ್ಮದಿಯಾಗಿ ಪ್ರಾಣ ಬಿಡುತ್ತೇವೆ ಎಂದು ಗ್ರಾಮದ ಸುಮಾರು ನೂರಕ್ಕೂ ಹೆಚ್ಚು ದಲಿತ ರೈತರು ಅಳಲು ತೋಡಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಸರ್ವೆ ನಂ. 46 ರಲ್ಲಿ 300 ಎಕರೆ ಪೈಕಿ 117 ಎಕರೆ ಸರ್ಕಾರಿ ಜಮೀನಲ್ಲಿ ದಲಿತ ರೈತರು ಕುಟುಂಬಸ್ಥರು 1965 ರಿಂದಲು ಉಳುಮೆ ಮಾಡಿಕೊಂಡು ಬಂದಿದ್ದಾರೆ. ಆದರೆ 1972ರಲ್ಲಿ ಅಧಿಕಾರಿಗಳು 73 ಮಂದಿ ಅನ್ಯವಾಸಿಗಳಿಗೆ ಜಮೀನು ಮಂಜೂರು ಮಾಡಲಾಗಿದೆ.
ಆದರೆ ಇದೀಗ ಈ ಜಾಗ ನಮ್ಮದು ಎಂದು ಹೇಳಿ ಒಕ್ಕಲು ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಇದೇ ರೀತಿ ಒಕ್ಕಲೆಬ್ಬಿಸಲು ಪ್ರಯತ್ನಿಸಿದರೆ ಸಾಮೂಹಿಕವಾಗಿ ವಿಷ ಸೇವಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅಷ್ಟೇ ಅಲ್ಲದೆ ಈ ಕೂಡಲೇ ಸಂಬಂಧಪಟ್ಟ ಎಲ್ಲ ದಾಖಲೆ ಹಾಗೂ ಜಮೀನನ್ನು ರೈತರ ಹೆಸರಿಗೆ ಮಂಜೂರು ಹಾಗೂ ಹಕ್ಕುಪತ್ರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.
ದಲಿತರಿಗೆ 1982 ರಲ್ಲಿ ಭಾರತ ಸರ್ಕಾರ ಜಾರಿಗೆ ತಂದ ಉಳುವವನೆ ಭೂಮಿ ಒಡೆಯ ಎಂಬ ಕಾಯಿದೆಯಿದ್ದರು ಕೂಡ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಅಂಬಾಪುರ ಗ್ರಾಮ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…