ಚಿಟಗುಪ್ಪಾ: ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನ.!

ಬೀದರ.03.ಫೆಬ್ರುವರಿ.25: ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಆಸ್ತಿ ಹಾಗೂ ನೀರಿನ ತೆರಿಗೆಯನ್ನು ಸಂಗ್ರಹಿಸಲು ಪುರಸಭೆÉ ವ್ಯಾಪ್ತಿಯ ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಲ್ಪಟ್ಟ ಅರ್ಹ ಹಾಗೂ ಆಸಕ್ತ ಮಹಿಳಾ ಸ್ವ ಸಹಾಯ ಗುಂಪುಗಳನ್ನು ತೆರಿಗೆ ವಸೂಲಾತಿಗಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿಟಗುಪ್ಪಾ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಚಿಟಗುಪ್ಪಾ ಪುರಸಭೆ ವ್ಯಾಪ್ತಿಯಲ್ಲಿನ ನೀರಿನ ಬಳಕೆಯ ಶುಲ್ಕದ ಹಿಂದಿನ ಬಾಕಿ ಮೊತ್ತ ಬಡ್ಡಿ ಸಹಿತವಾಗಿ ಮತ್ತು ಪ್ರಸಕ್ತ ವಾರ್ಷಿಕ ಸಹಿತ ವಸೂಲಿ ಮಾಡುವುದು ಹಾಗು ಬಹುದಿನಗಳಿಂದ ಬಾಕಿ ಇರುವ ಆಸ್ತಿ ತೆರಿಗೆ ವಾರ್ಷಿಕ ಬೇಡಿಕೆಗೆ ಅನುಗುಣವಾಗಿ ಸಮರ್ಪಕವಾಗಿ ವಸೂಲಿ ಮಾಡುವ ಸ್ಥಳೀಯ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯಲು ಮತ್ತು ಸ್ವಸಹಾಯ ಗುಂಪುಗಳ ವಸೂಲಾತಿ ಮೊತ್ತದಲ್ಲಿ ಶೇ 5% ರಷ್ಟನ್ನು ಪ್ರೂತ್ಸಾಹ ಧನದ ರೂಪದಲ್ಲಿ ನೀಡಲು ಸರ್ಕಾರವು ಆದೇಶಿಸಿದೆ.


ಅರ್ಹತೆಗಳ ವಿವರ: ಮಹಿಳಾ ಸ್ವ ಸಹಾಯ ಸಂಘವು ಡೇ ನಲ್ಮ್ ಅಭಿಯಾನದಡಿ ನೊಂದಾಯಿಸಿರಬೇಕು. ಸಂಘಗಳು ಸದಸ್ಯರು ಕನಿಷ್ಟ 7ನೇ ತರಗತಿವರೆಗೆ ಶಿಕ್ಷಣವನ್ನು ಬಳಸುವ ಸಾಮಥ್ರ್ಯ ಹೊಂದಿರಬೇಕು. ಬ್ಯಾಂಕಿನ ಮೂಲಕ ಅಥವಾ ಆಂತರಿಕ ಸಾಲ ಪಡೆದು ನಿಯಮಿತ ಸಾಲ ಮರುಪಾವತಿ ಮಾಡಿರಬೇಕು.

ಸ್ವ-ಸಹಾಯ ಗುಂಪು ಸಂಬಂದಪಟ್ಟ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿನಲ್ಲಿ ಡೇ-ನಲ್ಮ ಅಭಿಯಾನದಡಿ ನೊಂದಾಯಿಸಿಕೊಂಡು ಮಾನ್ಯತೆ ಇರುವ ಎಂ, ಐ ಎಸ್ ಕೋಡ ಹೊಂದಿರಬೇಕು. ಸ್ವ ಸಹಾಯ ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ ಖಾತೆಯನ್ನು ಹೊಂದಿರಬೇಕು.

ಸ್ವ ಸಹಾಯ ಸಂಘ ರಚನೆಯಾಗಿ ಕನಿಷ್ಟ 3 ವರ್ಷ ಹೊಂದಿರಬೇಕು. ಸ್ವ ಸಹಾಯ ಗುಂಪು ಮತ್ತು ಗುಂಪಿನ ಸದಸ್ಯರು ಯಾವುದೇ ಅಪರಾದ ಅಥವಾ ಸಮಾಜ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಹಿನ್ನೆಲೆ ಹೊಂದಿರಬಾರದು.

ನಗರ ಸ್ಥಳಿಯ ಸಂಸ್ಥೆಯಿಂದ ನಿಗದಿಪಡಿಸಿದ ಆಸ್ಥಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಯನ್ನು ಗುರಿಗೆ ತಕ್ಕಂತೆ ಕಾರ್ಯ ನಿರ್ವಹಿಸಲು ಆಸಕ್ತಿ ಮತ್ತು ಬದ್ದತೆಯನ್ನು ಹೊಂದಿರಬೇಕು.


ಅರ್ಹ ಇಚ್ಛೆಯುಳ್ಳ ಸ್ವ-ಸಹಾಯ ಸಂಘಗಳು ಈ ಮೇಲಿನ ಅರ್ಹತೆ ಹೊಂದಿದ್ದಲ್ಲಿ ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ: 20-02-2025 ರ ಸಂಜೆ 5 ಗಂಟೆಯೊಳಗಾಗಿ ಮುಖ್ಯಾಧಿಕಾರಿಗಳು, ಚಿಟಗುಪ್ಪಾ ಪುರಸಭೆ  ಕಾರ್ಯಾಲಯಕ್ಕೆ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. 

prajaprabhat

Recent Posts

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

2 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

2 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

2 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

2 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

2 hours ago

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

7 hours ago